ಮಂಗಳೂರು : ಮತ್ತೆ ಗುಂಡಿನ ಸದ್ದು, ಉದ್ಯಮಿ ಮನೆ ಮೇಲೆ ದಾಳಿ
ಮಂಗಳೂರು, ಡಿಸೆಂಬರ್ 24 : ಮಂಗಳೂರು ಮತ್ತೆ ಬೆಚ್ಚಿ ಬಿದ್ದಿದೆ. ಮಂಗಳೂರು ಹೊರವಲಯದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ನಗರದ ಹೊರವಲಯದ ಮುಲ್ಕಿಯಲ್ಲಿ ಉದ್ಯಮಿಯೊಬ್ಬರ ಮನೆಯ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಮುಲ್ಕಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಉದ್ಯಮಿ ನಾಗರಾಜ್ ಎಂಬುವವರ ಮನೆಯ ಮೇಲೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ರಾತ್ರಿ ಸುಮಾರು 9.30 ಕ್ಕೆ ಈ ಘಟನೆ ನಡೆದಿದೆ.
ನಾಗರಾಜ್ ಅವರ ಮನೆಯ ಗೇಟಿನ ಬಳಿ ಓರ್ವ ದುಷ್ಕರ್ಮಿ ಹೆಲ್ಮೆಟ್ ಹಾಕಿಕೊಂಡು ಬಂದು ಕಾಲಿಂಗ್ ಬೆಲ್ ಒತ್ತಿದ್ದಾನೆ. ಮನೆಯವರು ಸಂಶಯದಿಂದ ಬಾಗಿಲು ತೆರೆದಿಲ್ಲ. ಆಗ ಕಿಟಿಕಿ ಮೂಲಕ ಎರಡು ಸುತ್ತು ಗುಂಡು ಹಾರಿಸಿದ್ದಾನೆ.

ಗುಂಡಿನ ದಾಳಿಯಿಂದಾಗಿ ಮನೆಯ ಒಳಗಿದ್ದ ಕನ್ನಡಿ ಒಡೆದಿದೆ. ಅದಲ್ಲದೆ ಇನ್ನೊಂದು ಗುಂಡು ಮನೆಯ ದೇವರ ಕೋಣೆಗೆ ನುಗ್ಗಿದೆ. ಬಳಿಕ ನಾಗರಾಜ್ ಅವರ ಮನೆಯ ಎದುರು ಪಾರ್ಕ್ ಮಾಡಿದ್ದ ಆಡಿ ಕಾರಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ನಾಗರಾಜ ಮುಲ್ಕಿಯಲ್ಲಿ ಉದ್ಯಮಿಯಾಗಿದ್ದು ಕೋಲ್ನಾಡಿನಲ್ಲಿ ಸ್ಪನ್ಪೈಪು ಫ್ಯಾಕ್ಟರಿ ಹೊಂದಿದ್ದಾರೆ. ಅದಲ್ಲದೆ ಮುಲ್ಕಿ ನಗರ ಪಂಚಾಯತ್ ಗುತ್ತಿಗೆದಾರರು ಆಗಿದ್ದಾರೆ. ಕಳೆದ ಕೆಲ ವರ್ಷಗಳ ಹಿಂದೆ ನಾಗರಾಜ್ ಅವರಿಗೆ ಬೆದರಿಕೆ ಬರುತ್ತಿದ್ದು, ಹಫ್ತಾಕ್ಕಾಗಿ ಪೀಡಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕಳೆದ ಕೆಲ ತಿಂಗಳಿನಿಂದ ನಾಗರಾಜ್ರವರಿಗೆ ಭೂಗತ ಪಾತಕಿಗಳಿಂದ ಕರೆಗಳು ಬರುತ್ತಿದ್ದರೂ ನಾಗರಾಜ್ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ನಾಗರಾಜ್ ಅವರ ಮನೆಗೆ ಮಂಗಳೂರು ಪೋಲೀಸ್ ಆಯುಕ್ತರು, ಸಿಸಿಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಿ.8ರಂದು ರಾತ್ರಿ ಮಂಗಳೂರು ನಗರದ ರಥಬೀದಿಯ ಸಂಜೀವ ಶೆಟ್ಟಿ ಬಟ್ಟೆ ಮಳಿಗೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಇದೀಗ ಅದೇ ಮಾದರಿಯಲ್ಲಿ ಗುತ್ತಿಗೆದಾರನೊಬ್ಬನ ಮನೆಗೆ ದಾಳಿ ನಡೆದಿದ್ದು ದುಷ್ಕರ್ಮಿಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications