ಆಡಿಯೋದಲ್ಲಿನ ಧ್ವನಿ ಯಡಿಯೂರಪ್ಪದೇ ಎಂದು ನಾನು ಹೇಳಿಲ್ಲ:ಎಚ್ಡಿಕೆ
Recommended Video
ಮಂಗಳೂರು, ಫೆಬ್ರವರಿ 09: ಆಪರೇಷನ್ ಕಮಲ ಕುರಿತ ಆಡಿಯೊದಲ್ಲಿರುವ ಸ್ವರ ಯಡಿಯೂರಪ್ಪ ಅವರದೆಂದು ನಾನು ಹೇಳಿಲ್ಲ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಮಂಗಳೂರಿನಲ್ಲಿ ಇಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಬಜೆಟ್ನಲ್ಲಿ ಯಾವ ಜಿಲ್ಲೆಗೆ ಎಷ್ಟು ಅನುದಾನ?
ನಿನ್ನೆ ಆಪರೇಷನ್ ಕಮಲದ ಬಗ್ಗೆ ಬಿಡುಗಡೆ ಮಾಡಿರುವ ಆಡಿಯೋದಲ್ಲಿರುವ ಸ್ವರ ಯಡಿಯೂರಪ್ಪ ಅವರದು ಅಲ್ಲ ಎಂದು ಸ್ಪೀಕರ್ ನೀಡಿರುವ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಡಿಯೋದಲ್ಲಿರುವ ಸ್ವರ ಯಡಿಯೂರಪ್ಪ ಅವರದ್ದೇ ಎಂದು ನಾನು ಹೇಳಿಲ್ಲ ಎಂದರು.
ಕುಮಾರಸ್ವಾಮಿ ಬಜೆಟ್: ಯಾರಿಗೆ ಸಿಹಿ? ಯಾರಿಗೆ ಕಹಿ?
ಈ ಬಗ್ಗೆ ತನಿಖೆ ನಡೆಯಬೇಕು. ಆಡಿಯೋದಲ್ಲಿ ಸ್ಪೀಕರ್ ರಮೇಶ್ ಕುಮಾರ್ , ಅಮಿತ್ ಶಾ , ಪ್ರಧಾನಿಯವರ ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಮಾತು. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಆಡಿಯೋ ಬಗ್ಗೆ ಪ್ರಧಾನ ಮಂತ್ರಿಗಳು ತನಿಖೆಗೆ ತೀರ್ಮಾನಿಸಿ ಸಹಕಾರ ಕೊಟ್ಟರೆ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡುತ್ತೇನೆ ಎಂದು ಹೇಳಿದರು.
ಯಡಿಯೂರಪ್ಪ ಅವರು ಇದನ್ನು ಮಿಮಿಕ್ರಿ ಎಂದಿದ್ದಾರೆ ಅದರ ಸತ್ಯಾಸತ್ಯತೆ ಹೊರ ಬರಬೇಕು ಈ ನಿಟ್ಟಿನಲ್ಲಿ ತನಿಖೆ ಮಾಡಬೇಕು ಎಂದರು. ಎಸಿಬಿ ತನಿಖೆ ಬಗ್ಗೆಯೂ ಯೋಚಿಸುತ್ತಿದ್ದೇವೆ ಎಂದು ಅವರು ಹೇಳಿದರು.