ಜನವರಿ 30ರಂದು ಶ್ರೀ ಕ್ಷೇತ್ರ ಕಟೀಲಿನಲ್ಲಿ ಬ್ರಹ್ಮಕಲಶೋತ್ಸವ
ಮಂಗಳೂರು, ಜನವರಿ 29: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜನವರಿ 30ರಂದು ಬೆಳಗ್ಗೆ ಬ್ರಹ್ಮಕಲಶೋತ್ಸವ ಹಾಗೂ ಜನವರಿ 31ರಂದು ನಾಗಮಂಡಲ ಸೇವೆ ನಡೆಸಲು ತೀರ್ಮಾನಿಸಲಾಗಿದೆ.
ನಿನ್ನೆ ಸೋಮವಾರದಂದು ಕಟೀಲು ದೇವರಿಗೆ ಅಷ್ಟಬಂಧ ನಡೆದು, ಸಾನ್ನಿಧ್ಯ ಕಲಶಾಭಿಷೇಕ, ಚಿನ್ನದ ರಥೋತ್ಸವ ಸಂಪನ್ನಗೊಂಡಿದೆ. ಇಂದಿನಿಂದ ಹನ್ನೆರಡು ರಂಗಪೂಜೆಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು, ಮುಂದಿನ ಮೂರು ವರುಷಗಳಿಗಾಗುವಷ್ಟು ರಂಗಪೂಜೆಗಳು ಮುಂಗಡ ನೋಂದಣಿಯಾಗಿರುವುದರಿಂದ ಅಷ್ಟಬಂಧ ಸಾನ್ನಿಧ್ಯ ಕಲಶ ನಡೆದ ಬಳಿಕ ಇಂದಿನಿಂದ ದಿನಂಪ್ರತಿ ಹನ್ನೆರಡು ರಂಗಪೂಜೆಗಳು ನಡೆಯಲಿವೆ.
ಇದುವರೆಗೆ 9 ರಂಗಪೂಜೆಗಳು ನಡೆಯುತ್ತಿದ್ದು, ಭಕ್ತರಿಗೆ ಅನುಕೂಲವಾಗಲು ಇನ್ನು 12ರಂಗಪೂಜೆ ನಡೆಯಲಿವೆ. ಮುಂದಿನ ದಿನಗಳಲ್ಲಿ ಸರಳವಾಗಿ ಒಂದು ಸುತ್ತಿನ ಚಿನ್ನದ ರಥೋತ್ಸವ ನಡೆಸುವ ಚಿಂತನೆಯೂ ಮಾಡಲಾಗಿದೆ. ದೇವರಿಗೆ ರೇಷ್ಮೆ ಮತ್ತು ಹತ್ತಿಯ ಸೀರೆಗಳನ್ನಷ್ಟೇ ಉಡಿಸಲು ನಿರ್ಧರಿಸಲಾಗಿದೆ.

ಬ್ರಹ್ಮ ಕಲಶೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದಲ್ಲಿ 45 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವಾರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವಸ್ಥಾನದ ಒಳ ಪ್ರಾಂಗಣದಲ್ಲಿ ಕುಸುರಿ ಕೆಲಸಗಳು, ಚಿತ್ರ ಚಿತ್ತಾರಗಳು ಮಾಡಿ ದೇವಳದ ಸೌಂದರ್ಯ ವೃದ್ಧಿಸುವುದು, ಚಿನ್ನದ ಧ್ವಜಸ್ಥಂಭ ನಿರ್ಮಾಣ, ಶ್ರೀ ದೇವರ ಚಿನ್ನದ ಮಂಟಪ, ತೀರ್ಥಮಂಟಪದ ಎದುರು ನಾಸಿಕ ನಡಪ್ಪರ್ ರಚನೆ, ಸರಳ ಮದುವೆಗಾಗಿ ದೇಗುಲದ ಎದುರು ಲಕ್ಷ್ಮೀಸ್ವಯಂವರ ಮಂಟಪ, ನೂತನ ಸುಸಜ್ಜಿತ ಪರಿಸರಸ್ನೇಹಿ ಅಡುಗೆಶಾಲೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.

ಭೋಜನಶಾಲೆಗಳ ನಿರ್ಮಾಣ, ಕುದುರುವಿನಲ್ಲಿ ಯಜ್ಞವನ, ಕಾಲುದಾರಿ, ಉದ್ಯಾನವನ ನಿರ್ಮಾಣ, ರಥಬೀದಿಯಿಂದ ಕುದುರುವಿಗೆ ಸೇತುವೆ ನಿರ್ಮಾಣ, ದೇಗುಲದ ಕಚೇರಿಯನ್ನು ಸ್ಥಳಾಂತರಿಸಿ ಇನ್ನಷ್ಟು ಸುವ್ಯವಸ್ಥಿತಗೊಳಿಸುವುದು, ಭ್ರಾಮರೀ ವಸತಿ ನವೀಕರಣ, ಬೆಳ್ಳಿ ರಥದ ಕೋಣೆಯನ್ನು ಬ್ರಹ್ಮರಥದ ಪಕ್ಕದಲ್ಲಿ ರಚಿಸುವುದು, ಬಸ್ ಸ್ಟಾಂಡ್ ಬಳಿ ಶೌಚಾಲಯ ಸಂಕೀರ್ಣ, ಘನತ್ಯಾಜ್ಯ ವಿಲೇವಾರಿ ಘಟಕ, ಎಸ್ಟಿಪಿ ದ್ವಿತೀಯ ಹಂತ ವಿಸ್ತರಣೆ, ಸರಸ್ವತೀ ಸದನದ ಜಾಗವನ್ನು ತಗ್ಗಿಸಿ ಪಾರ್ಕಿಂಗ್ ನಿರ್ಮಾಣ, ಹೊಸದಾದ ದೊಡ್ಡ ಸಭಾಭವನ ನಿರ್ಮಾಣದ ಯೋಜನೆಗಳ ಕಾಮಗಾರಿಗೆ ಶೀಘ್ರ ಚಾಲನೆ ದೊರಕಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications