Dharmasthala: ಭಕ್ತಾಧಿಗಳ ಗಮನಕ್ಕೆ, ಧರ್ಮಸ್ಥಳದ ಸಾಮಾನ್ಯ ಸೇವೆಗಳ ದರಪಟ್ಟಿ ಇಲ್ಲಿದೆ
ಮಂಗಳೂರು, ಮಾರ್ಚ್ 12: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇತ್ರಾವತಿ ತಟದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯವು ಕರ್ನಾಟಕದಲ್ಲಿ ಅತಿ ಹೆಚ್ಚು ಶಿವ ಭಕ್ತರು ಭೇಟಿ ನೀಡುವ ದೇವಾಲಯಗಳಲ್ಲಿ ಒಂದು. ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.
ಕರ್ನಾಟಕದ ಮೂಲೆ ಮೂಲೆಯಿಂದ ಮಾತ್ರವಲ್ಲದೇ ವಿವಿಧ ರಾಜ್ಯಗಳಿಂದಲೂ ಶಿವನ ಭಕ್ತರು ಈ ದೇವಾಲಯಕ್ಕೆ ಭೇಟಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಾರೆ. ಧರ್ಮಸ್ಥಳದ ಮುಖ್ಯ ದೇಗುಲದಲ್ಲಿ ಶಿವನನ್ನು ಮಂಜುನಾಥನ ರೂಪದಲ್ಲಿ ಪೂಜಿಸಲಾಗುತ್ತದೆ. ಹಾಗೂ ಈ ದೇವಸ್ಥಾನದಲ್ಲಿ ಮಂಜುನಾಥ ಸ್ವಾಮಿಯೊಂದಿಗೆ ಅಮ್ಮನವರು, ಚಂದ್ರನಾಥ ಮತ್ತು ಧರ್ಮ ದೈವಗಳನ್ನು ಆರಾಧಿಸಲಾಗುತ್ತದೆ.

ಈ ಕ್ಷೇತ್ರಕ್ಕೆ ಭೇಟಿ ನೀಡಿದರೆ ಧನಾತ್ಮಕ ಶಕ್ತಿ ಪ್ರಾಪ್ತಿಯಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಹೀಗಾಗಿ ಬಹುತೇಕರು ಕುಟುಂಬ ಸಮೇತರಾಗಿಯೇ ಇಲ್ಲಿಗೆ ಭೇಟಿ ನೀಡುತ್ತಾರೆ. ಅನ್ನಪ್ರಸಾದ ಸೇರಿಂದಂತೆ ಭಕ್ತರಿಗೆ ಅನುಕೂಲವಾಗುವ ಎಲ್ಲಾ ರೀತಿಯ ವ್ಯವಸ್ಥೆ ಕೂಡ ದೇವಾಲಯದಲ್ಲಿದೆ. ಜೊತೆಗೆ ಭಕ್ತರು ದೇವರಿಗೆ ವಿವಿಧ ಸೇವೆಗಳನ್ನು ಕೂಡ ಸಲ್ಲಿಸಬಹುದಾಗಿದೆ.
ಇನ್ನೇನು ಬೇಸಿಗೆ ರಜೆ ಸಮೀಪಿಸುತ್ತಿದ್ದು, ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಬೇಕು, ದೇವರಿಗೆ ವಿಶೇಷ ಸೇವೆಗಳನ್ನು ಸಲ್ಲಿಸಬೇಕು ಎಂದುಕೊಂಡವರಿಗೆ ಉಪಯುಕ್ತವಾದ ಮಾಹಿತಿ ಇಲ್ಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರಿಗೆ ಅರ್ಪಿಸುವ ಸಾಮಾನ್ಯ ಸೇವೆಗಳು ಹಾಗೂ ಅವುಗಳ ದರದ ವಿವರ ಈ ಕೆಳಗಿನಂತಿದೆ.
ಶ್ರೀ ಮಂಜುನಾಥ ಸ್ವಾಮಿಯ ಸೇವೆಗಳು
ಶತರುದ್ರಾಭಿಷೇಕ-500 ರೂಪಾಯಿ
ಪಂಚಾಮೃತ ಅಭಿಷೇಕ, ಏಕಾದಶ ರುದ್ರಾಭಿಷೇಕ, ಸಹಿತ ಬ್ರಹ್ಮಾದಾಯ, ಬ್ರಹ್ಮಾರ್ಪಣೆ ಕೂಡಾ-250 ರೂಪಾಯಿ
ಶ್ರೀ ಪ್ರಸಾದ-70 ರೂಪಾಯಿ
ಬಿಲ್ವಪತ್ರಾರ್ಚನೆ- 10 ರೂಪಾಯಿ
ತೀರ್ಥ ಬಾಟ್ಲಿ- 20 ರೂಪಾಯಿ
ಕರ್ಪೂರಾರತಿ- 2 ರೂಪಾಯಿ

ಶ್ರೀ ಅಮ್ಮನವರ ಸೇವೆಗಳು
ಪವಮಾನಾಭಿಷೇಕ-500 ರೂಪಾಯಿ
ಹೂವಿನ ಪೂಜೆ- 300 ರೂಪಾಯಿ
ಪಂಚಾಮೃತ ಅಭಿಷೇಕ-150 ರೂಪಾಯಿ
ಕುಂಕುಮಾರ್ಚನೆ-20 ರೂಪಾಯಿ
ಕರ್ಪೂರಾರತಿ-2 ರೂಪಾಯಿ
ಶ್ರೀ ಗಣಪತಿ ದೇವರ ಸೇವೆಗಳು
ಪಂಚಾಮೃತ ಅಭಿಷೇಕ-150 ರೂಪಾಯಿ
ಪಂಚಕಜ್ಜಾಯ-20 ರೂಪಾಯಿ
ಅಪ್ಪ ನೈವೇದ್ಯ-20 ರೂಪಾಯಿ
ಮಂಗಳಾರತಿ-2 ರೂಪಾಯಿ
ಶ್ರೀ ಅಣ್ಣಪ್ಪ ಸ್ವಾಮಿಯ ಸೇವೆಗಳು
ವಿಶೇಷ ಪೂಜೆ ಬಲಿವಾಡ ಸಹಿತ-100 ರೂಪಾಯಿ
ಬೆಲ್ಲಕ್ಕಾ ನೈವೇದ್ಯ-20 ರೂಪಾಯಿ
ಕರ್ಪೂರಾರತಿ-2 ರೂಪಾಯಿ
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications