Dharmasthala: ಧರ್ಮಸ್ಥಳ ಭಕ್ತಾಧಿಗಳ ಗಮನಕ್ಕೆ, ಜಾತ್ರೆ ಹಿನ್ನೆಲೆ ಈ ದಿನಗಳಂದು ಮುಂಜಾನೆ ದರ್ಶನ ರದ್ದು
ಮಂಗಳೂರು, ಏಪ್ರಿಲ್ 04: ಶ್ರೀ ಕ್ಷೇತ್ರ ಧರ್ಮಸ್ಥಳದ 2024ರ ಕಾಲಾವಧಿ ಜಾತ್ರೆಯು ಏಪ್ರಿಲ್ 12 ಶುಕ್ರವಾರದಿಂದ ಏಪ್ರಿಲ್ 24 ಬುಧವಾರದವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದ್ದು, ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುವ ಲಕ್ಷಾಂತರ ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಜಾತ್ರೆಯ ಸೊಬಗನ್ನು ಕಣ್ತುಂಬಿಕೊಳ್ಳಲಿದ್ದಾರೆ.
2024ರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ ಧಾರ್ಮಿಕ ಕಾರ್ಯಕ್ರಮಗಳ ವಿವರ ಸೇರಿದಂತೆ ಇತರ ಮಾಹಿತಿಯೊಳಗೊಂಡ ಪ್ರಕಟಣೆ ಹೊರಡಿಸಿದ್ದು, ಭಕ್ತರಿಗಾಗಿ ಕೆಲವು ಮುಖ್ಯವಾದ ಮಾಹಿತಿಯನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಲಾವಧಿ ಜಾತ್ರೆಯ ಸಮಯದಲ್ಲಿ ಕ್ಷೇತ್ರಕ್ಕೆ ತೆರಳುವವರು ಈ ವಿಚಾರವನ್ನು ತಿಳಿದಿರಬೇಕಾಗಿದೆ.

ಏಪ್ರಿಲ್ 18ರಿಂದ ಏಪ್ರಿಲ್ 23ರವರೆಗೆ ಬೆಳಗ್ಗೆ 8:30ರವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಸಾಯಂಕಾಲ 5 ಗಂಟೆಯಿಂದ 8:30ರವರೆಗೆ ಮಾತ್ರ ಭಕ್ತರನ್ನು ಗರ್ಭಗುಡಿಯ ಆವರಣಕ್ಕೆ ಬಿಡಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಹೀಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 18ರಿಂದ ಏಪ್ರಿಲ್ 23ರವರೆಗೆ ಮುಂಜಾನೆಯ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
ಧಾರ್ಮಿಕ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ
- ಏಪ್ರಿಲ್ 12- ರಾತ್ರಿ 8:30ರಿಂದ ಓಲೆ ಬರೆಯುವುದು
- ಏಪ್ರಿಲ್ 13- ಸಂಜೆ 6 ಗಂಟೆಗೆ ಪಯ್ಯೋಳಿ ಹೋಗುವುದು, ರಾತ್ರಿ 7:30ಕ್ಕೆ ಧ್ವಜಾರೋಹಣ, ರಾತ್ರಿ 10 ಗಂಟೆಗೆ ಧರ್ಮ ದೈಬಗಳ ಭಂಡಾರ ಹೊರಡುವುದು.
- ಏಪ್ರಿಲ್ 14- ರಾತ್ರಿ 10 ಗಂಟೆಯ ನಂತರ ಧರ್ಮ ದೈವಗಳ ನೇಮ
- ಏಪ್ರಿಲ್ 15- ರಾತ್ರಿ 8 ಗಂಟೆಯಿಂದ ಅಣ್ಣಪ್ಪ ನೇಮ
- ಏಪ್ರಿಲ್ 16- ಉತ್ಸವ
- ಏಪ್ರಿಲ್ 17- ರಾತ್ರಿ 8:30ಕ್ಕೆ ಬಯಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ರಜತಲಾಲಕಿಯಲ್ಲಿ ಹೊಸಕಟ್ಟೆಗೆ(ವಸಂತ ಮಹಲ್)
- ಏಪ್ರಿಲ್ 18- ಬೆಳಗ್ಗೆ ರಥೋತ್ಸವ, ರಾತ್ರಿ 8:30 ಗಂಟೆಯ ನಂತರ ಉತ್ಸವ ಪ್ರಾರಂಭ,
- ಏಪ್ರಿಲ್ 19- ಬೆಳಗ್ಗೆ ರಥೋತ್ಸವ ರಾತ್ರಿ 8:30 ಗಂಟೆಯ ನಂತರ ಉತ್ಸವ ಪ್ರಾರಂಭ, ಲಲಿತೋದ್ಯಾನ ಉತ್ಸವ
- ಏಪ್ರಿಲ್ 20-ಬೆಳಗ್ಗೆ ರಥೋತ್ಸವ ರಾತ್ರಿ 8:30 ಗಂಟೆಯ ನಂತರ ಉತ್ಸವ ಪ್ರಾರಂಭ, ಕೆರೆಕಟ್ಟೆ ಉತ್ಸವ
- ಏಪ್ರಿಲ್ 21-ಬೆಳಗ್ಗೆ ರಥೋತ್ಸವ ರಾತ್ರಿ 8:30 ಗಂಟೆಯ ನಂತರ ಉತ್ಸವ ಪ್ರಾರಂಭ, ಚಂದ್ರಮಂಡಲ ಗೌರಿ ಮಾರುಕಟ್ಟೆ ಉತ್ಸವ
- ಏಪ್ರಿಲ್ 22- ಬೆಳಗ್ಗೆ ರಥೋತ್ಸವ, ದರ್ಶನ ಬಲಿ, ಬೆಳಗ್ಗೆ 9 ಗಂಟೆ ನಂತರ ದೇವರ ದರ್ಶನ, ರಾತ್ರಿ 8:30 ಗಂಟೆಯ ನಂತರ ಉತ್ಸವ ಪ್ರಾರಂಭ, ಬ್ರಹ್ಮರಥೋತ್ಸವ, ಭೂತ ಬಲಿ
- ಏಪ್ರಿಲ್ 23: ಬೆಳಗ್ಗೆ 9 ಗಂಟೆಗೆ ಕವಾಟೋಧ್ಘಾಟನೆ, ರಾತ್ರಿ 6 ಆರು ಗಂಟೆ ನಂತರ ದರ್ಶನ ಬಲಿ, ಧ್ವಜ ಅವಾರೋಹಣ
- ಏಪ್ರಿಲ್ 24: ರಾತ್ರಿ 8:30ರಿಂದ ಧೂಳ ಬಲಿ ಉತ್ಸವ ನಡೆಯಲಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications