ಶೃಂಗೇರಿ ವಿದ್ಯಾರ್ಥಿ ಆತ್ಮಹತ್ಯೆ: ಮಂಗ್ಳೂರಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ
ಮಂಗಳೂರು, ಜನವರಿ. 11 : ಶೃಂಗೇರಿಯಲ್ಲಿ ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು.
ತನ್ನ ಮೇಲೆ ಪ್ರಕರಣ ದಾಖಲಾಗಿದ್ದಕ್ಕೆ ಮನನೊಂದು ಅಭಿಷೇಕ್ ಎಂಬ ಎಬಿವಿಪಿ ಕಾರ್ಯಕರ್ತ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಇದನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಸೆಂಟ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.
ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಈ ವೇಳೆ ಸ್ಠಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಈ ಮಧ್ಯೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಸಮರ ನಡೆಯಿತು. ಸ್ಥಳಕ್ಕೆ ದೌಡಾಯಿಸಿದ ಬರ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮಕ್ಕೆ ಸಂಬಂಧಿಸಿ ಉಂಟಾಗಿದ್ದ ಗಲಾಟೆಯಿಂದ ಬೇಸತ್ತು ಎಬಿವಿಪಿ ಕಾರ್ಯಕರ್ತ, ಜೆಸಿಬಿಎಂ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್(21) ಆತ್ಮಹತ್ಯೆ ಮಾಡಿಕೊಂಡಿದ್ದ.
ಜನವರಿ 7ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯನ್ನು ಆಹ್ವಾನಿಸಲಾಗಿತ್ತು.

ಆದರೆ, ಸೂಲೆಬೆಲೆ ಬರುವುದನ್ನು ವಿರೋಧಿಸಿ ಎನ್ಎಸ್ಯುಐ ಕಾರ್ಯಕರ್ತರು ಜ.7ರಂದು ಪತ್ರಿಕಾಗೋಷ್ಠಿ ಕರೆದಿದ್ದರು. ಈ ವಿಚಾರವಾಗಿ ಎಬಿವಿಪಿ ಮತ್ತು ಎನ್ಎಸ್ಯುಐ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.
ಗಲಾಟೆಗೆ ಸಂಬಂಧಿಸಿ ಅಭಿಷೇಕ್ ಸೇರಿದಂತೆ ನಾಲ್ವರು ಎಬಿವಿಪಿ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವಿಚಾರದಲ್ಲಿ ನೊಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications