ವೋಟಿಂಗ್ ಮಾಡಿ ಕರ್ತವ್ಯ ಮೆರೆದ ಅನಾರೋಗ್ಯ ಪೀಡಿತರು, ನವ ವಧು
ಮಂಗಳೂರು ಏಪ್ರಿಲ್ 18:ಲೋಕಸಭಾ ಚುನಾವಣೆಗೆ ಮತದಾನ ಮಾಡುವಂತೆ ಚುನಾವಣಾ ಆಯೋಗ ಸೇರಿದಂತೆ ಆಯಾ ಜಿಲ್ಲಾಡಳಿತ ಮತದಾನ ಜಾಗೃತಿ ಅಭಿಯಾನ ನಡೆಸಿವೆ. ಮತದಾನದ ಮಹತ್ವವನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿವೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಮತದಾನದ ಮಹತ್ವವನ್ನು ಎಲ್ಲಾ ರೀತಿಯಲ್ಲೂ ಸಾರುವಂತೆ ಚಿತ್ರಣ ಕಂಡುಬಂದಿದೆ.
ಮೂರು ವಾರಗಳ ಹಿಂದೆ ಕುಂದಾಪುರದ ಗೋಳಿಯಂಗಡಿ ಸಮೀಪ ನಡೆದ ಅಪಘಾತದಲ್ಲಿ ಬಲವಾದ ಪೆಟ್ಟು ಬಿದ್ದು ನರಳುತ್ತಿರುವ ಉಳ್ತೂರಿನ ನಿವಾಸಿ ಜಯಶೀಲ ಪೂಜಾರಿ ಸ್ಟೆಕ್ಚರ್ ನಲ್ಲೇ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಪೂಜಾರಿ ಅವರಿಗೆ ಮಗ್ಗುಲನ್ನು ಸಹ ಬಳಸಲು ಆಗದ ಸ್ಥಿತಿಯಲ್ಲಿದ್ದರೂ ಮಂಜಾನೆ 11:00 ಗಂಟೆಗೆ ಮೊದಲೇ ತಮ್ಮ ಮತ ಚಲಾಯಿಸಿ ಪ್ರೇರಣೆಯಾಗಿದ್ದಾರೆ.
ನಗರದ ಕೋಡಿಯಾಲ್ ಬೈಲ್ ನಲ್ಲಿರುವ ಮತಗಟ್ಟೆಗೆ ಅನಾರೋಗ್ಯ ಪೀಡಿತ ರೋಗಿಯೊಬ್ಬರು ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಮತ ಕೇಂದ್ರಕ್ಕೆ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಬಂದು ತಮ್ಮ ಮತ ಚಲಾಯಿಸಿ ತೆರಳಿದ್ದಾರೆ.

ಎಂಡೋಪೀಡಿತ ಕೂಡ ಮತ ಚಲಾವಣೆ ಮಾಡಿದ್ದು ಬೆಳಕಿಗೆ ಬಂದಿದೆ. ಎಂಡೋ ಸಂತ್ರಸ್ತ ಪುರುಷೋತ್ತಮ ಗಣೇಶ (38) ಮತ ಚಲಾಯಿಸಿದ್ದು, ಪುರುಷೋತ್ತಮ ಗಣೇಶ ಪುತ್ತೂರಿನ ಕೃಷ್ಣನಗರ ಬೂತ್ ನಲ್ಲಿ ಮತದಾನ ಮಾಡಿದರು. ಅವರು ವೀಲ್ ಚೇರ್ ಮೂಲಕ ಆಗಮಿಸಿ ಮತ ಚಲಾವಣೆ ಮಾಡಿದರು. ಪುರುಷೋತ್ತಮ್ ಲೋಕಸಭೆಗೆ ಇದೇ ಪ್ರಥಮ ಬಾರಿಗೆ ಮತ ಚಲಾಯಿಸಿದ್ದಾರೆ.

ಅನಾರೋಗ್ಯ ಪೀಡಿತರು ಮಾತ್ರವಲ್ಲದೇ, ನವ ಜೀವನಕ್ಕೆ ಕಾಲಿರಿಸುವ ಮೊದಲು ನವ ವಧು ವರರರು ತಮ್ಮ ಹಕ್ಕನ್ನು ಚಲಾಯಿಸಿ ಮದುವೆ ಮಂಟಪಕ್ಕೆ ತರಳಿದ್ದಾರೆ. ಮದುವೆ ಮಂಟಪಕ್ಕೆ ತೆರಳುವ ಮುನ್ನ ಬಂಟ್ವಾಳದ ಸೂರ್ಯ ನಿವಾಸಿ ನವ್ಯ ತಮ್ಮ ಮತ ಚಲಾಯಿಸಿದ್ದಾರೆ. ಸೂರ್ಯ ನಿವಾಸಿ ಕೂಸಪ್ಪ ಗೌಡರ ಪುತ್ರಿ ನವ್ಯ ಇಂದು ಸೂರ್ಯ ಸರಕಾರಿ ಶಾಲೆಯಲ್ಲಿ ಮತ ಚಲಾವಣೆ ಮಾಡಿ ನಂತರ ಉಪ್ಪಿನಂಗಡಿ ಮದುವೆ ಮಂಟಪಕ್ಕೆ ತೆರಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications