ನಾನ್ ವೆಜ್ ಪ್ರಿಯ ಸಿದ್ದರಾಮಯ್ಯ ಈಗ ಪಕ್ಕಾ ಸಸ್ಯಹಾರಿ!
Recommended Video

ಮಂಗಳೂರು ಜೂನ್ 20 : ನಾಟಿ ಕೋಳಿ, ಬನ್ನೂರು ಮಟನ್ ಹಾಗು ಪಾಯ ಸೂಪ್ ಎಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಪ್ರಾಣ. ಮುಂಜಾನೆ ಅವರಿಗೆ ಪಾಯ ಸೂಪ್ ಬೇಕೇ ಬೇಕು. ಹೆಚ್ಚಾಗಿ ಮಾಂಸಾಹಾರಕ್ಕೆ ಒಲವು ತೋರುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆಪ್ಪಟ ಸಸ್ಯಹಾರಿ.
ಅರೆರೆ ಇದು ಹೇಗೆ ಸಾಧ್ಯ ಎಂಬ ಕುತೂಹಲವೇ? ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿ ವನದಲ್ಲಿ ಪ್ರಾಕೃತಿಕ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಈಗ ಸಸ್ಯಹಾರಿಯಾಗಿ ಬದಲಾಗಿದ್ದಾರೆ.
ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ ಸಿಎಂ ಈಗ ಪ್ರತಿನಿತ್ಯ ಪಥ್ಯಾಹಾರ ಸೇವಿಸುತ್ತಿದ್ದಾರೆ. 12 ದಿನಗಳ ಪ್ರಾಕೃತಿಕ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಕಟ್ಟು ನಿಟ್ಟಾಗಿ ಪಥ್ಯಾಹಾರ ಸೇವಿಸುತ್ತಿದ್ದಾರೆ.

ಕಳೆದ ವರ್ಷ ಮೀನು ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರೆಂಬ ವಿವಾದ ಹೊತ್ತಿದ್ದ ಸಿದ್ದರಾಮಯ್ಯ ಈಗ ಅದೇ ಧರ್ಮಸ್ಥಳದ ಚಿಕಿತ್ಸಾಲಯದಲ್ಲಿ ಸಸ್ಯಹಾರಿಯಾಗಿ ಬದಲಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯದಲ್ಲಿ ದಾಖಲಾಗಿರುವ ಸಿದ್ದರಾಮಯ್ಯ ಮೂರು ದಿನಗಳನ್ನು ಕಳೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿಶ್ರಾಂತಿ ಪಡೆಯದೇ ರಾಜ್ಯದ ಮೂಲೆ ಮೂಲೆ ಸುತ್ತಿದ ಸಿದ್ದರಾಮಯ್ಯ ಶುಗರ್, ಬಿಪಿ ಹೆಚ್ಚಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾಕೃತಿಕ ಚಿಕಿತ್ಸೆಗೆ ಒಳಗಾಗಿರುವ 69ರ ಹರೆಯದ ಸಿದ್ದರಾಮಯ್ಯ ಅವರಿಗೆ ಈಗ ಮಾಂಸಾಹಾರ ಸಂಪೂರ್ಣ ವರ್ಜ್ಯ. ಚಿಕಿತ್ಸಾ ಕೇಂದ್ರದಲ್ಲಿ ಅವರ ದಿನಚರಿ ಆರಂಭ ವಾಗುವುದೇ ಬೆಳ್ಳಂಬೆಳಗ್ಗೆ 6 ಗಂಟೆಗೆ. ಮುಂಜಾನೆ ಎದ್ದು ನಿತ್ಯ ಕರ್ಮಗಳನ್ನು ಮುಗಿಸಿದ ಬಳಕ ಯೋಗ, ಪ್ರಾಣಾಯಾಮ, 9 ಗಂಟೆಗೆ ಸರಿಯಾಗಿ ರಾಗಿ ಗಂಜಿ ಸೇವಿಸುತ್ತಾರೆ.
11 ಗಂಟೆಗೆ ಹಸಿ ತರಕಾರಿಯೇ ಸಿದ್ದರಾಮಯ್ಯ ಅವರಿಗೆ ಮಧ್ಯಾಹ್ನದ ಊಟ. ಹಸಿ ತರಕಾರಿ, ಮೊಳಕೆ ಬಂದ ಕಾಳು, ಸೌತೆಕಾಯಿ, ಕ್ಯಾರೆಟ್, ಬೀಟ್ ರೂಟ್ ನ ಸಲಾಡ್ ಮತ್ತು ಮಜ್ಜಿಗೆ ಮಾತ್ರ. ಸಿದ್ದರಾಮಯ್ಯ ಸೇವಿಸುವ ಯಾವ ಅಹಾರದಲ್ಲೂ ಉಪ್ಪು, ಹುಳಿ, ಖಾರ ಇಲ್ಲ. ಅನ್ನವೂ ಇಲ್ಲದ ಊಟ.
ಸಂಜೆ ಸರಿಸುಮಾರು 6.30ಕ್ಕೆ ರಾತ್ರಿ ಊಟ. ಬೇಯಿಸಿದ ತರಕಾರಿ, ಎರಡು ಚಪಾತಿ, ಮಜ್ಜಿಗೆ, ಪಪ್ಪಾಯಿ ಅಷ್ಟನ್ನೇ ಸಿದ್ದು ಅವರಿಗೆ ಸೇವಿಸಲು ಅವಕಾಶ. ಇದರ ನಡುವೆ, ವಿಶ್ರಾಂತಿ, ಜಲ ಚಿಕಿತ್ಸೆ, ಹೈಡ್ರೋಥೆರಪಿ, ಮಸಾಜ್ ಇರುತ್ತದೆ. ಈ ಚಿಕಿತ್ಸೆಯ ಸಂದರ್ಭದಲ್ಲಿ ಶಾಂತಿಧಾಮದಿಂದ ಹೊರಹೋಗುವಂತಿಲ್ಲ. ರಾತ್ರಿ ಹತ್ತು ಗಂಟೆಗೆ ನಿದ್ದೆ.
ಸದಾ ರಾಜಕೀಯ ತಂತ್ರಗಾರಿಗೆ , ಆಡಳಿತಾತ್ಮಕ ಒತ್ತಡ, ವಿರೋಧ ಪಕ್ಷಕ್ಕೆ ತಿರುಗೇಟು ನೀಡುವ ಚಿಂತನೆ, ಸದಾ ನೂರಾರು ಬೆಂಬಲಿಗರ ನಡುವೆ ಇದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸಂಪೂರ್ಣ ಬದಲಾಗಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications