ನಾನ್ ವೆಜ್ ಪ್ರಿಯ ಸಿದ್ದರಾಮಯ್ಯ ಈಗ ಪಕ್ಕಾ ಸಸ್ಯಹಾರಿ!
Recommended Video

ಮಂಗಳೂರು ಜೂನ್ 20 : ನಾಟಿ ಕೋಳಿ, ಬನ್ನೂರು ಮಟನ್ ಹಾಗು ಪಾಯ ಸೂಪ್ ಎಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಪ್ರಾಣ. ಮುಂಜಾನೆ ಅವರಿಗೆ ಪಾಯ ಸೂಪ್ ಬೇಕೇ ಬೇಕು. ಹೆಚ್ಚಾಗಿ ಮಾಂಸಾಹಾರಕ್ಕೆ ಒಲವು ತೋರುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆಪ್ಪಟ ಸಸ್ಯಹಾರಿ.
ಅರೆರೆ ಇದು ಹೇಗೆ ಸಾಧ್ಯ ಎಂಬ ಕುತೂಹಲವೇ? ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿ ವನದಲ್ಲಿ ಪ್ರಾಕೃತಿಕ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಈಗ ಸಸ್ಯಹಾರಿಯಾಗಿ ಬದಲಾಗಿದ್ದಾರೆ.
ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ ಸಿಎಂ ಈಗ ಪ್ರತಿನಿತ್ಯ ಪಥ್ಯಾಹಾರ ಸೇವಿಸುತ್ತಿದ್ದಾರೆ. 12 ದಿನಗಳ ಪ್ರಾಕೃತಿಕ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಕಟ್ಟು ನಿಟ್ಟಾಗಿ ಪಥ್ಯಾಹಾರ ಸೇವಿಸುತ್ತಿದ್ದಾರೆ.

ಕಳೆದ ವರ್ಷ ಮೀನು ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರೆಂಬ ವಿವಾದ ಹೊತ್ತಿದ್ದ ಸಿದ್ದರಾಮಯ್ಯ ಈಗ ಅದೇ ಧರ್ಮಸ್ಥಳದ ಚಿಕಿತ್ಸಾಲಯದಲ್ಲಿ ಸಸ್ಯಹಾರಿಯಾಗಿ ಬದಲಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯದಲ್ಲಿ ದಾಖಲಾಗಿರುವ ಸಿದ್ದರಾಮಯ್ಯ ಮೂರು ದಿನಗಳನ್ನು ಕಳೆದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿಶ್ರಾಂತಿ ಪಡೆಯದೇ ರಾಜ್ಯದ ಮೂಲೆ ಮೂಲೆ ಸುತ್ತಿದ ಸಿದ್ದರಾಮಯ್ಯ ಶುಗರ್, ಬಿಪಿ ಹೆಚ್ಚಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾಕೃತಿಕ ಚಿಕಿತ್ಸೆಗೆ ಒಳಗಾಗಿರುವ 69ರ ಹರೆಯದ ಸಿದ್ದರಾಮಯ್ಯ ಅವರಿಗೆ ಈಗ ಮಾಂಸಾಹಾರ ಸಂಪೂರ್ಣ ವರ್ಜ್ಯ. ಚಿಕಿತ್ಸಾ ಕೇಂದ್ರದಲ್ಲಿ ಅವರ ದಿನಚರಿ ಆರಂಭ ವಾಗುವುದೇ ಬೆಳ್ಳಂಬೆಳಗ್ಗೆ 6 ಗಂಟೆಗೆ. ಮುಂಜಾನೆ ಎದ್ದು ನಿತ್ಯ ಕರ್ಮಗಳನ್ನು ಮುಗಿಸಿದ ಬಳಕ ಯೋಗ, ಪ್ರಾಣಾಯಾಮ, 9 ಗಂಟೆಗೆ ಸರಿಯಾಗಿ ರಾಗಿ ಗಂಜಿ ಸೇವಿಸುತ್ತಾರೆ.
11 ಗಂಟೆಗೆ ಹಸಿ ತರಕಾರಿಯೇ ಸಿದ್ದರಾಮಯ್ಯ ಅವರಿಗೆ ಮಧ್ಯಾಹ್ನದ ಊಟ. ಹಸಿ ತರಕಾರಿ, ಮೊಳಕೆ ಬಂದ ಕಾಳು, ಸೌತೆಕಾಯಿ, ಕ್ಯಾರೆಟ್, ಬೀಟ್ ರೂಟ್ ನ ಸಲಾಡ್ ಮತ್ತು ಮಜ್ಜಿಗೆ ಮಾತ್ರ. ಸಿದ್ದರಾಮಯ್ಯ ಸೇವಿಸುವ ಯಾವ ಅಹಾರದಲ್ಲೂ ಉಪ್ಪು, ಹುಳಿ, ಖಾರ ಇಲ್ಲ. ಅನ್ನವೂ ಇಲ್ಲದ ಊಟ.
ಸಂಜೆ ಸರಿಸುಮಾರು 6.30ಕ್ಕೆ ರಾತ್ರಿ ಊಟ. ಬೇಯಿಸಿದ ತರಕಾರಿ, ಎರಡು ಚಪಾತಿ, ಮಜ್ಜಿಗೆ, ಪಪ್ಪಾಯಿ ಅಷ್ಟನ್ನೇ ಸಿದ್ದು ಅವರಿಗೆ ಸೇವಿಸಲು ಅವಕಾಶ. ಇದರ ನಡುವೆ, ವಿಶ್ರಾಂತಿ, ಜಲ ಚಿಕಿತ್ಸೆ, ಹೈಡ್ರೋಥೆರಪಿ, ಮಸಾಜ್ ಇರುತ್ತದೆ. ಈ ಚಿಕಿತ್ಸೆಯ ಸಂದರ್ಭದಲ್ಲಿ ಶಾಂತಿಧಾಮದಿಂದ ಹೊರಹೋಗುವಂತಿಲ್ಲ. ರಾತ್ರಿ ಹತ್ತು ಗಂಟೆಗೆ ನಿದ್ದೆ.
ಸದಾ ರಾಜಕೀಯ ತಂತ್ರಗಾರಿಗೆ , ಆಡಳಿತಾತ್ಮಕ ಒತ್ತಡ, ವಿರೋಧ ಪಕ್ಷಕ್ಕೆ ತಿರುಗೇಟು ನೀಡುವ ಚಿಂತನೆ, ಸದಾ ನೂರಾರು ಬೆಂಬಲಿಗರ ನಡುವೆ ಇದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸಂಪೂರ್ಣ ಬದಲಾಗಿದ್ದಾರೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications