ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಾಂಧಿ ಹತ್ಯೆಗೆ ಸ್ಕೆಚ್ ಹಾಕಿದ್ದು ಸಾವರ್ಕರ್; ವಿವಾದದ ಕಿಡಿ ಎಬ್ಬಿಸಿದ ಸಿದ್ದರಾಮಯ್ಯ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 18: "ವೀರ ಸಾವರ್ಕರ್ ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಒಬ್ಬರು. ಗೋಡ್ಸೆ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಆದರೆ ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.

'ನಾವು ಸಾವರ್ಕರ್ ವಿರೋಧಿಯಲ್ಲ, ಆದರೆ...' ಮೌನ ಮುರಿದ ಮನಮೋಹನ್ ಸಿಂಗ್'ನಾವು ಸಾವರ್ಕರ್ ವಿರೋಧಿಯಲ್ಲ, ಆದರೆ...' ಮೌನ ಮುರಿದ ಮನಮೋಹನ್ ಸಿಂಗ್

ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡುವ ಬಿಜೆಪಿ ಪ್ರಣಾಳಿಕೆಯ ಸಂಕಲ್ಪಕ್ಕೆ ವಿರೋಧ ವ್ಯಕ್ತಪಡಿಸಿದರು."ಸಾವರ್ಕರ್ ನಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ಕೊಟ್ಟು ಬಿಡಲಿ" ಎಂದು ವ್ಯಂಗ್ಯ ಮಾಡಿದರು.

Siddaramaiah Controvercial Statement About Savarkar In Mangaluru

ಇದೇ ಸಮಯದಲ್ಲಿ ನರೇಂದ್ರ ಮೋದಿ ಕುರಿತೂ ಮಾತನಾಡಿದ ಅವರು, "ದೇಶದ ಆರ್ಥಿಕ ಸ್ಥಿತಿ ಅಧೋಗತಿ ತಲುಪಿದೆ. ಹಸಿವಿನ ಶ್ರೇಣಿಯಲ್ಲಿ ಭಾರತ 102ನೇ ಸ್ಥಾನಕ್ಕೆ ಮುಟ್ಟಿದೆ. ಪಾಕಿಸ್ಥಾನ, ಬಾಂಗ್ಲಾದೇಶ ನಮ್ಮಿಂದ ಮುಂದಿದೆ. ಕಳೆದ ಐದು ವರ್ಷದಲ್ಲಿ ಮೋದಿ ಮಾಡಿದ ಸಾಧನೆ ಅಂದರೆ ಇದು ಮಾತ್ರ. ಅಮೆರಿಕಕ್ಕೆ ಹೋಗಿ ಭಾರತದಲ್ಲಿ ಎಲ್ಲರೂ ಸುಖವಾಗಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಈ ಶ್ರೇಣಿ ನಮ್ಮ ಮಾನ ಹರಾಜು ಮಾಡಿದೆ" ಎಂದು ಕಿಡಿಕಾರಿದರು.

English summary
Former CM Siddaramaiah gave controversial statement about veera savarkar in mangaluru today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X