ಮಂಗಳೂರು ದಸರಾ ಉದ್ಘಾಟಿಸಲಿದ್ದಾರೆ ಸಿದ್ದರಾಮಯ್ಯ
ಮಂಗಳೂರು, ಆ.22 : ಇತ್ತ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಸಿದ್ಧತೆಗಳು ಆರಂಭಗೊಂಡಿದ್ದರೆ, ಅತ್ತ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿಯೂ ದಸರಾ ತಯಾರಿ ಭರದಿಂದ ಸಾಗಿದೆ. ಈ ಬಾರಿಯ ದಸರಾ ಮಹೋತ್ಸವವನ್ನು ಸೆ. 27ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ.
ದಸರಾ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು, ಶ್ರೀ ಕ್ಷೇತ್ರದಲ್ಲಿ 2014ರ ಮಂಗಳೂರು ದಸರಾವನ್ನು ಆಕರ್ಷಣೀಯ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆಗಳನ್ನು ಆರಂಭಿಸಲಾಗಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.27ರಂದು ಸಂಜೆ 6.30ಕ್ಕೆ ದಸರಾವನ್ನು ಉದ್ಘಾಟಿಸಲಿದ್ದಾರೆ.

2012ರಲ್ಲಿ ದಸರಾವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ 2013ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ದಸರಾವನ್ನು ಉದ್ಘಾಟಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲು ಒಪ್ಪಿಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. [ಕುದ್ರೋಳಿ ದೇವಾಲಯದ ವಿರುದ್ಧ ಇದೆಂಥ ಅಪಪ್ರಚಾರ]
ಮಂಗಳೂರಿನ ಕುದ್ರೋಳಿಯಲ್ಲಿ ನಡೆಯುವ ದಸರಾ ಹಬ್ಬ ಕರಾವಳಿ ಭಾಗದಲ್ಲಿಯೇ ದೊಡ್ಡ ಹಬ್ಬ. 1990ರಿಂದ ದಸರಾ ಹಬ್ಬದ ಆಚರಣೆ ಆರಂಭವಾಯಿತು. ಸಾವಿರಾರು ಭಕ್ತರು ನವರಾತ್ರಿ ಉತ್ಸವದಲ್ಲಿ ಭಾಗವಹಿಸಿ ಪುನೀತರಾಗುತ್ತಾರೆ. ವಿದ್ಯುತ್ ದೀಪಗಳಿಂದ ದೇವಸ್ಥಾನವನ್ನು ಅಲಂಕಾರ ಮಾಡಲಾಗುತ್ತದೆ. ದಸರಾ ಸಂದರ್ಭ ದೇವಸ್ಥಾನ ಮಾತ್ರವಲ್ಲ ಮಂಗಳೂರು ನಗರವಿಡೀ ಜಗಮಗಿಸುತ್ತಿರುತ್ತದೆ. [ಮೈಸೂರು ದಸರಾ, ಕಾರ್ನಾಡ್ಗೆ ಅಧಿಕೃತ ಆಹ್ವಾನ]
ಎಲ್ಲಾ ಧರ್ಮದವರು ದೇವಾಲಯಕ್ಕೆ ಬರಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸುಧಾರಣಾವಾದಿ ಶ್ರೀ ನಾರಾಯಣ ಗುರುಗಳು 1912ರಲ್ಲಿ ಪವಿತ್ರ ಶಿವಲಿಂಗವನ್ನು ಕ್ರುದ್ರೋಳಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದರು. ದೇವಸ್ಥಾನದ ಮೂಲ ರಚನೆ ಕೇರಳ ಮಾದರಿಯಲ್ಲಿತ್ತು. 1991ರಲ್ಲಿ ದೇವಸ್ಥಾನವನ್ನು ನವೀಕರಣಗೊಳಿಸಿ ಚೋಳ ಮಾದರಿಯ ರಚನೆಯನ್ನು ನಿರ್ಮಿಸಲಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications