ಮೈಸೂರಿನೊಂದಿಗೆ ವೈಭವದ ಮಂಗಳೂರು ದಸರಾಕ್ಕೂ ತೆರೆ
ಮಂಗಳೂರು, ಅಕ್ಟೋಬರ್ 27: ಮೈಸೂರು ದಸರಾ ನಂತರ ರಾಜ್ಯದ ಎರಡನೇ ದೊಡ್ಡ ದಸರಾ ಎಂದರೆ ಅದು ಮಂಗಳೂರು ದಸರಾ ಉತ್ಸವ. ಸರಳ ಮೈಸೂರು ದಸರಾ ಉತ್ಸವದೊಂದಿಗೆ ಮಂಗಳೂರು ದಸರಾ ಉತ್ಸವಕ್ಕೂ ತೆರೆ ಬಿದ್ದಿದೆ.
ನವರಾತ್ರಿಯ ಒಂಬತ್ತು ದಿನಗಳ ಕಾಲ ಕುದ್ರೋಳಿ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಸರ್ಕಾರದ ಕೊರೊನಾ ಮಾರ್ಗಸೂಚಿಗಳ ಪ್ರಕಾರ ಈ ವರ್ಷ ಸರಳವಾಗಿ ದಸರಾ ಉತ್ಸವ ನೆರವೇರಿತು.
ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆಯಿತು. ಕುದ್ರೋಳಿ ಮಂಜುನಾಥ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ ಸೋಮವಾರ ತಡರಾತ್ರಿ ತೆರೆಬಿದ್ದಿದೆ. ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು.

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ಭವ್ಯ ಶೋಭಾಯಾತ್ರೆ ಈ ಹಿಂದಿನ ವರ್ಷಗಳಲ್ಲಿ ನಡೆಯುತ್ತಿತ್ತು. ರಾತ್ರಿ ಪೂರ್ತಿ ಅದ್ಧೂರಿ ಸ್ತಬ್ಧಚಿತ್ರಗಳ ಮೂಲಕ ನಗರ ಪ್ರದಕ್ಷಿಣೆ ಮಾಡಿ ಮುಂಜಾನೆ ವೇಳೆಗೆ ದೇವಳದ ಕೆರೆಯಲ್ಲಿ ವಿಸರ್ಜನೆ ಮಾಡಲಾಗುತಿತ್ತು.
ಈ ಬಾರಿ ಕೊರೊನಾ ವೈರಸ್ ಕಾರಣದಿಂದ ಮೆರವಣಿಗೆಯನ್ನು ರದ್ದುಗೊಳಿಸಲಾಗಿತ್ತು. ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನೆರವೇರಿಸಿ ಹೊರಾಂಗಣದಲ್ಲೇ ಪ್ರದಕ್ಷಿಣೆ ಹಾಕಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು.

ಈ ಬಾರಿ ಕೊರೊನಾ ಕಾರಣದಿಂದ ಹುಲಿ ಕುಣಿತವೂ ಕೇವಲ ಕುದ್ರೋಳಿ ದೇವಸ್ಥಾನಕ್ಕೆ ಮಾತ್ರ ಸೀಮಿತವಾಗಿತ್ತು. ಮಂಗಳೂರು ಜಿಲ್ಲಾಡಳಿತ ದಸರಾ ಆಚರಣೆಗೆ ನಿರ್ಬಂಧಗಳನ್ನು ವಿಧಿಸಿತ್ತು. ಹುಲಿ ವೇಷ ತಂಡಗಳಿಗೆ ಮನೆ ಮನೆ ತೆರಳುವುದಕ್ಕೆ ಈ ಬಾರಿ ಅವಕಾಶ ಇರಲಿಲ್ಲ. ಹೀಗಾಗಿ ನವರಾತ್ರಿ ಉತ್ಸವ ನಡೆಯುವ ದೇವಸ್ಥಾನಗಳಲ್ಲಿ ಹುಲಿ ಕುಣಿತಕ್ಕೆ ಅವಕಾಶ ನೀಡಲಾಗಿತ್ತು. ಕೊರೊನಾ ಮಹಾಮಾರಿ ತೊಲಗಲಿ ಎಂದು ಹರಕೆಯ ಹುಲಿವೇಷ ಹಾಕಿದ್ದರು.

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಈ ವರ್ಷದ ಮಂಗಳೂರು ದಸರಾ ಉತ್ಸವ ನಡೆಯಿತು. ಸಾಂಪ್ರದಾಯಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ, ಭಕ್ತರಿಗೂ ನೋವುಂಟಾಗದಂತೆ ನವರಾತ್ರಿ ಸಂಪನ್ನಗೊಂಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications