ಸ್ಕೋಲಿಯೋಸಿಸ್ನಿಂದ ಬಳಲುತ್ತಿದ್ದರೂ 624 ಅಂಕ ಪಡೆದ ಪುತ್ತೂರಿನ ಸಿಂಚನಾ
ಮಂಗಳೂರು, ಏಪ್ರಿಲ್ 30:ದೈಹಿಕ ನ್ಯೂನತೆ ಇದ್ದರೂ ಯಶಸ್ಸು ಸಾಧಿಸುವ ಛಲದೊಂದಿಗೆ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬಾಲಕಿಯ ಕಥೆ ಇದು. ಹೆಸರು ಸಿಂಚನಾ ಲಕ್ಷ್ಮೀ. ಪುತ್ತೂರಿನ ಈ ವಿದ್ಯಾರ್ಥಿನಿ ತನ್ನ ಅಸಾಮಾನ್ಯ ಸಾಧನೆಯಿಂದ ರಾಜ್ಯದ ಗಮನ ಸೆಳೆದಿದ್ದಾಳೆ.
ಹೌದು, ಸಾಧನೆ ಮಾಡುವ ಛಲವಿದ್ದರೆ ಎಂಥಹ ದೈಹಿಕ ನ್ಯೂನತೆಯೂ ಬಾಧಿಸದು ಎಂಬುದನ್ನು ಸಿಂಚನಾ ಲಕ್ಷ್ಮಿ ತೋರಿಸಿ ಕೊಟ್ಟಿದ್ದಾಳೆ. ಅನಾರೋಗ್ಯವಿದ್ದರೂ ಎಲ್ಲವನ್ನೂ ಮೆಟ್ಟಿ ನಿಂತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳನ್ನು ಪಡೆದು ಸಾಧಿಸಿ ತೋರಿಸಿದ್ದಾಳೆ ಸಿಂಚನಾ ಲಕ್ಷ್ಮೀ .
ಬೆನ್ನುಹುರಿ ಸಮಸ್ಯೆ ಸ್ಕೋಲಿಯೋಸಿಸ್ನಿಂದ ಬಳಲುತ್ತಿರುವ ಸಿಂಚನಾ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕ ಪಡೆಯುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾಳೆ.

ಪುತ್ತೂರಿನ ಕೋಡಂಕೇರಿ ಬಂಗಾರಡ್ಕ ನಿವಾಸಿ ಕೃಷಿಕರಾಗಿರುವ ಮುರಳೀಧರಮತ್ತು ಶೋಭಾ ದಂಪತಿಯ ಪುತ್ರಿಯಾಗಿರುವ ಸಿಂಚನಾ , ವಿವೇಕಾನಂದ ಇಂಗ್ಲೀಷ್ ಮಿಡಿಯಂ ಹೈಸ್ಕೂಲ್ನ ವಿದ್ಯಾರ್ಥಿನಿ .

ಸಿಂಚನಾಗೆ ಸ್ಕೋಲಿಯೋಸಿಸ್ಗಾಗಿ ಈಗಾಗಲೇ 6 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಮುರಳೀಧರ ಮತ್ತು ಶೋಭಾ ದಂಪತಿಗಳು ಮಗಳ ಚಿಕಿತ್ಸೆಗೆ ಈವರೆಗೆ 25 ಲಕ್ಷಕ್ಕೂ ಹೆಚ್ಚು ಹಣವನ್ನು ವ್ಯಯಿಸಿದ್ದಾರೆ. ಸಾಧಿಸುವ ಛಲವಿದ್ದರೆ ಯಾವುದೂ ಅಡ್ಡಿಯಾಗುವುದಿಲ್ಲ ಎನ್ನುವುದನ್ನು ಸಿಂಚನಾ ಸಾಬೀತು ಮಾಡುವ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾಳೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications