ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ ರೂಪೇಶ್ ನೇಮಕ
ಮಂಗಳೂರು, ಸೆಪ್ಟೆಂಬರ್ 7: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯಾಗಿ ಶುಕ್ರವಾರ ಸೆಪ್ಟೆಂಬರ್ 6ರಂದು ಸಿಂಧು ಬಿ ರೂಪೇಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿಗಳ ರಾಜೀನಾಮೆ; ಸಂವಿಧಾನಕ್ಕೆ ಅಪ್ಪಳಿಸಿದ ಧೂಮಕೇತು?
ಸಿಂಧು ರೂಪೇಶ್ ಅವರು ಇದುವರೆಗೂ ಉಡುಪಿ ಜಿಲ್ಲಾ ಪಂಚಾಯಿತಿಯಲ್ಲಿ ಸಿಇಒ ಆಗಿದ್ದರು. ಸಿಂಧು ಅವರು ಮೈಸೂರಿನಲ್ಲಿ ಬಿಇ ಪದವೀಧರೆಯಾಗಿದ್ದು, 2011ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದರು. ರಾಜ್ಯದ ನಾಗರೀಕ ಸೇವಾ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.
ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಸಿಂಧು ಅವರ ನೇಮಕ ಆದೇಶವೂ ಹೊರಬಿದ್ದಿದೆ.
Comments
English summary
As Dakshina Kannada District Commissioner Sasikant Senthil has resignerd yesterday, state government appointed Sindhu B Rupesh as new dc for dakhsina kannada on September 6.
Story first published: Saturday, September 7, 2019, 11:49 [IST]