ದೀಪಕ್ ರಾವ್ ಹತ್ಯೆ ಪ್ರಕರಣ, ಮತ್ತೆ 6 ಜನರ ಬಂಧನ
ಮಂಗಳೂರು, ಜನವರಿ 25: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಜನವರಿ 3 ರಂದು ನಡೆದ ದೀಪಕ್ ರಾವ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಮಂಗಳೂರು ಪೊಲೀಸರು ಇನ್ನೂ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಟಿ .ಆರ್. ಸುರೇಶ್ ಬಂಧಿತರ ಕುರಿತು ಮಾಹಿತಿ ನೀಡಿದರು.
ಬಂಧಿತರನ್ನು ಕಾಟಿಪಳ್ಳ ನಿವಾಸಿಗಳಾದ ಮಹಮ್ಮದ್ ರಫೀಕ್ ಯಾನೆ ಮ್ಯಾಂಗೊ ರಫೀಕ್ (24), ಇರ್ಫಾನ್, ಮಹಮ್ಮದ್ ಆಸನ್, ಮಹಮ್ಮದ್ ಜಾಕೀರ್, ಹಿದಾಯಿತ್ತುಲ್ಲಾ, ಇಮ್ರಾನ್ ನವಾಜ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್, ಬಷೀರ್ ಮನೆಗೆ ಸಿಎಂ ಭೇಟಿ
ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಈ 6 ಮಂದಿ ಆರೋಪಿಗಳು ಹತ್ಯೆ ಸಂಚಿನಲ್ಲಿ ಭಾಗಿಯಾಗಿದ್ದು ಕೃತ್ಯ ಎಸಗಲು ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.
ಜನವರಿ 3 ರಂದು ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸರು ಮಹಮ್ಮದ್ ನೌಷಾದ್ ಯಾನೆ ಪಿಂಕಿ ನೌಷದ್, ಮಹಮ್ಮದ್ ಇರ್ಷಾನ್, ಅಬ್ದುಲ್ ಅಜೀಜ್ ಹಾಗೂ ಅಬ್ದುಲ್ ಅಜೀಮ್ ಎಂಬವರನ್ನು ಈಗಾಗಲೇ ಬಂಧಿಸಿದ್ದಾರೆ.