ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕೆಂದು ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು, ಸೆಪ್ಟೆಂಬರ್ 16 : ಭಾರತದಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂದು ಒತ್ತಾಯಿಸಿ ಮಂಗಳೂರಿನಲ್ಲಿ ಎಸ್ ಕೆ ಎಸ್ಎಸ್ಎಫ್ ಸಂಘಟನೆ ಪ್ರತಿಭಟನೆ ನಡೆಸಿದೆ .
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಸಭೆ ನಡೆಸಿದ ಎಸ್ ಕೆ ಎಸ್ ಎಸ್ ಎಫ್ ಮುಖಂಡರು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮ್ಯಾನ್ಮಾರ್ ನಲ್ಲಿ ಹತ್ಯೆಯಾಗುತ್ತಿರುವ ರೋಹಿಂಗ್ಯಾ ಮುಸ್ಲಿಮರನ್ನು ಭಾರತ ಓಡಿಸುತ್ತಿದ್ದು, ಅಮಾನವೀಯವಾಗಿ ವರ್ತಿಸುತ್ತಿದೆ ಎಂದು ಕಿಡಿ ಕಾರಿದರು.

ಆಶ್ರಯ ಅರಸಿ ಬಂದ ರೋಹಿಂಗ್ಯಾ ಮುಸ್ಲಿಮರನ್ನು ಹೊರ ಹಾಕುತ್ತಿರುವ ಕ್ರಮ ಸರಿಯಲ್ಲ್ ಎಂದು ಆರೋಪಿಸಿದರು. ರೋಹಿಂಗ್ಯಾ ಮುಸ್ಲಿಮರ ಹತ್ಯೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾನವೀಯತೆ ನೆಲೆಯಲ್ಲಿ ಹಿಂಸೆಯನ್ನು ಖಂಡಿಸುವುದರ ಬದಲು ಆಶ್ರಯ ಅರಸಿ ಬಂದವರನ್ನು ಕೇಂದ್ರ ಸರಕಾರ ಇಲ್ಲಿಂದ ಓಡಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶಾದ್ಯಂತ ಮುಸ್ಲಿಂ ಸಮುದಾಯ ಹಾಗೂ ಜಾತ್ಯತೀತವಾದಿಗಳ ವಿರುದ್ಧ ನಡೆಯುತ್ತಿರುವ ಗುಂಪು ದಾಳಿಗಳು ಮುಂದುವರೆಯುತ್ತಿದೆ. ಭಾರತೀಯ ಮುಸ್ಲಿಮರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ತ್ರಿವಳಿ ತಲಾಕ್ ಕುರಿತು ಕಾನೂನು ರಚಿಸುವ ಸಂದರ್ಭದಲ್ಲಿ ಮುಸ್ಲಿಂ ಪಂಡಿತರನ್ನು ಸೇರಿಸಿಕೊಳ್ಳಬೇಕು ಹಾಗೂ ಆಶ್ರಯ ಅರಸಿಕೊಂಡು ಬಂದ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು, ಮ್ಯಾನ್ಮಾರ್ ನಲ್ಲಿ ನಡೆಯುತ್ತಿರುವ ಹತ್ಯೆಯನ್ನು ಭಾರತ ಖಂಡಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications