ಕರಾವಳಿಯ ಗದ್ದೆ, ಅಡುಗೆ ಮನೆಯಿಂದ ಮಾಯವಾಗಿವೆ ಶಂಕುಹುಳುಗಳು
ಮಂಗಳೂರು, ಜೂನ್ 21: ಕರಾವಳಿಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಚುಮು ಚುಮು ಚಳಿಯ ನಡುವೆ ನರ್ತೆ (ಶಂಕುಹುಳು) ಪಲ್ಯದ ಘಮಲು ಮೂಗಿಗೆ ರಾಚುತಿತ್ತು. ಕರಾವಳಿಯಲ್ಲಿ ಅದರಲ್ಲೂ ತುಳುನಾಡಿನಲ್ಲಿ ಈ ನರ್ತೆ ಪಲ್ಯದ ರುಚಿ ನೋಡದವರೇ ಅಪರೂಪ. ಆದರೆ ಇತ್ತೀಚೆಗೆ ನರ್ತೆಗಳೇ ಕರಾವಳಿಯ ಗದ್ದೆಗಳಿಂದ ಹಾಗು ಅಡಿಗೆ ಮನೆಯಿಂದ ಕಣ್ಮರೆಯಾಗುತ್ತಿವೆ. ರೈತನ ಮಿತ್ರನಂತಿದ್ದ ಈ ಮೃದ್ವಂಗಿಗಳು ಇಂದು ವಿನಾಶದ ಅಂಚಿಗೆ ತಲುಪಿವೆ.
ಮುಂಗಾರು ಪ್ರವೇಶಿಸುತ್ತಿದ್ದಂತೆ ಕರಾವಳಿಯಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಈ ಹಿಂದೆ ನರ್ತೆಗಳು ಹೇರಳವಾಗಿ ಸಿಗುತ್ತಿದ್ದವು. ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಯಲ್ಲೂ ನರ್ತೆಯ ರುಚಿಕರ ಖಾದ್ಯ ಕಾಯಂ ಆಗಿ ಇರುತ್ತಿತ್ತು. ಬಸಳೆ, ಸೌತೆಕಾಯಿಯೊಂದಿಗೆ ನರ್ತೆ ಪಲ್ಯ ಮಾಡಿದರೆ ಅದರ ರುಚಿ ಸವಿದವರಿಗೇ ಗೊತ್ತು.
ಅಧಿಕ ಮಳೆ ಸುರಿಯುವ ಜೂನ್ ಹಾಗು ಸೆಪ್ಟೆಂಬರ್ ತಿಂಗಳಲ್ಲಿ ಗದ್ದೆಗಳಲ್ಲಿ ಕಾಣ ಸಿಗುತ್ತಿದ್ದ ಶಂಖಾಕೃತಿಯ ಈ ಉಭಯವಾಸಿ ಜೀವಿಗಳಿಗೆ ಕರಾವಳಿಯಲ್ಲಿ ನರ್ತೆ ಎಂದು ಕರೆಯುತ್ತಾರೆ. ಗದ್ದೆಗಳ ಅಂಟು ಮಣ್ಣಿನಲ್ಲಿ ಕಾಣ ಸಿಗುವ ಈ ನರ್ತೆಗಳು ಪಾಚಿ, ಕೆಸರು ಮಣ್ಣನ್ನು ಅಹಾರವಾಗಿ ಸೇವಿಸುತ್ತವೆ.

ಈ ಮೃದ್ವಂಗಿಗಳನ್ನು ಮಣ್ಣನ್ನು ಆಹಾರವಾಗಿ ಸೇವಿಸುವುದೂ ಅಲ್ಲದೆ, ಮಣ್ಣನ್ನು ಹದಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದವು. ಬೆಳೆರಕ್ಷಣೆಯಲ್ಲೂ ಇವುಗಳದ್ದು ಮಹತ್ತರ ಪಾತ್ರ. ಹೀಗಾಗಿ ಇದನ್ನು ರೈತನ ಮಿತ್ರ ಎಂದು ಕರೆಯಲಾಗುತ್ತದೆ.

ಆದರೆ, ಇಂದು ಈ ಜೀವ ಸಂಕುಲವೇ ವಿನಾಶದ ಅಂಚಿನಲ್ಲಿದೆ. ಪ್ರಕೃತಿಯ ಮಡಿಲಲ್ಲಿ ಜೀವಿಸುವ ಈ ಮೃದ್ವಂಗಿಗಳು ಮಾನವನ ದುಷ್ಕೃತ್ಯಕ್ಕೆ ಬಲಿಯಾಗುತ್ತಿವೆ. ಗದ್ದೆಗಳು, ಕೃಷಿ ಭೂಮಿಗಳು ಈಗ ಸೈಟ್ ಗಳಾಗಿ ಬದಲಾಗುತ್ತಿವೆ. ಗದ್ದೆಗಳಲ್ಲಿ ಅತಿಯಾದ ರಾಸಾಯನಿಕಗಳ ಬಳೆಯಿಂದ ಈ ಉಭಯವಾಸಿಗಳು ಅಳಿವಿ ಅಂಚಿಗೆ ಬಂದು ತಲುಪಿವೆ. ಈ ಕುರಿತು ಗಂಭೀರವಾಗಿ ಚಿಂತಿಸುವ ಅವಶ್ಯಕತೆ ಇದೆ.
-
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications