ನಕಲಿ ಮಂಗಳಮುಖಿಯರ ಅಸಲಿಯತ್ತು ಬಯಲು ಮಾಡಿದ ಸಾಮಾಜಿಕ ಕಾರ್ಯಕರ್ತ
ಮಂಗಳೂರು, ಅಕ್ಟೋಬರ್. 05 : ಮಂಗಳೂರಿನಲ್ಲಿ ನಕಲಿ ಮಂಗಳಮುಖಿಯರ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಂಗಳ ಮುಖಿಯರಂತೆ ವೇಷಧರಿಸಿ ಕಂಠ ಪೂರ್ತಿ ಕುಡಿದು ಹಣಕ್ಕಾಗಿ ಜನರನ್ನು ಪೀಡಿಸುತ್ತಿರುವ ದೃಶ್ಯಗಳು ಎಲ್ಲೆಂದರಲ್ಲಿ ಕಂಡುಬರುತ್ತಿವೆ.
ಇವರ ಕಾಟದಿಂದ ಕಂಗೆಟ್ಟು ಬೇಸತ್ತ ಮಂಗಳೂರಿನ ಸಾಮಾಜಿಕ ಕಾರ್ಯಕರ್ತರೊಬ್ಬರು ಕೊನೆಗೆ ನಕಲಿ ಮಂಗಳ ಮುಖಿಯರ ಜನ್ಮಜಾಲಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ ವೈರಲ್ ಆಗಿದ್ದು, ನಕಲಿ ಮಂಗಳಮುಖಿಯರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಸ್ವಚ್ಛ ಮಂಗಳೂರು ಅಭಿಯಾನಕ್ಕೆ ತಮ್ಮದೇ ವಿಶಿಷ್ಟ ರೀತಿಯ ಕ್ರಮಗಳ ಮೂಲಕ ಕೊಡುಗೆ ನೀಡಿ ಗುರುತಿಸಿಕೊಂಡಿರುವ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸೌರಜ್ ಈಗ ನಕಲಿ ಮಂಗಳ ಮುಖಿಯರ ಅಸಲಿಯತ್ತು ಬಯಲು ಮಾಡಿದ್ದಾರೆ.
ನಗರದ ಕದ್ರಿ ಹಾಗೂ ಟಾಗೋರ್ ಉದ್ಯಾನವನಕ್ಕೆ ಬರುವ ಪ್ರವಾಸಿಗರನ್ನು ಕಾಡುವ ಈ ನಕಲಿ ಮಂಗಳಮುಖಿಯರನ್ನು ಹಿಡಿದು ಅವರ ಅಸಲಿಯತ್ತನ್ನು ಬಿಚ್ಚಿಟ್ಟಿದ್ದಾರೆ.

ಮಂಗಳಮುಖಿಯರನ್ನು ಬೆನ್ನತ್ತಿದ್ದ ಸೌರಜ್
ಮಂಗಳಮುಖಿಯರು ಬಂದಾಕ್ಷಣ ಅವರಿಗೆ ಸಾರ್ವಜನಿಕರು ಹಣ ಕೊಡುವುದು ಸಾಮಾನ್ಯ. ಇದರ ಲಾಭವನ್ನು ಪಡೆದ ಕೆಲವು ಹೊರ ರಾಜ್ಯದ ಯುವಕರು ಮಂಗಳಮುಖಿಯರಂತೆ ವೇಷ ಧರಿಸಿ ಸಾರ್ವಜನಿಕ ರಿಗೆ ಕಾಟ ಕೊಡುತ್ತಿದ್ದರು. ಕದ್ರಿ ಪಾರ್ಕ್ ನಲ್ಲಿ ಮಂಗಳಮುಖಿಯರನ್ನು ಬೆನ್ನತ್ತಿದ್ದ ಸೌರಜ್ ಈ ನಕಲಿ ಮುಂಗಳ ಮುಖಿಯರ ಅಸಲಿಯತ್ತನ್ನು ಬಯಲು ಮಾಡಿದ್ದಾರೆ.

ತಲೆಗೆ ಬಣ್ಣ ಬಣ್ಣದ ವಿಗ್
ತಲೆಗೆ ಟೋಪನ ಇಟ್ಟು ಮಂಗಳಮುಖಿಯರಂತೆ ವೇಷ ಧರಿಸಿ ಸಾರ್ವಜನಿಕರನ್ನು ಲೂಟಿ ಮಾಡುವುದನ್ನು ಸೌರಜ್ ಬಯಲು ಮಾಡಿದ್ದಾರೆ. ತಲೆಗೆ ಬಣ್ಣ ಬಣ್ಣದ ವಿಗ್ ಹಾಕಿ ಯುವತಿಯರಂತೆ ಡ್ರೆಸ್ ಮಾಡಿಕೊಂಡು ಬರುವ ಈ ನಕಲಿ ಮಂಗಳ ಮುಖಿಯರ ನಿಜಾಂಶ ಈಗ ಬಯಲಾಗಿದೆ.

ಕ್ಯಾಮೆರಾದಲ್ಲಿ ಸೆರೆ
ಕದ್ರಿ ಪಾರ್ಕ್ಗೆ ದಾಳಿ ಇಟ್ಟ ಸೌರಜ್, ಕುಡಿದು ತೂರಾಡುತ್ತಿದ್ದ ಜನರನ್ನು ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ನಕಲಿ ಮಂಗಳ ಮುಖಿಯರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಅಲ್ಲದೇ ಈ ನಕಲಿ ಮಂಗಳ ಮುಖಿಯರ ಅಸಲಿಯತ್ತನ್ನು ಕ್ಯಾಮೆರಾದಲ್ಲಿ ಸೆರೆಹಿಡಿದ್ದಾರೆ.

ಇಬ್ಬರೂ ಪುರುಷರೇ
ಸೌರಜ್ ಪತ್ತೆ ಹಚ್ಚಿದ ಈ ನಕಲಿ ಮಂಗಳ ಮುಖಿಯರಲ್ಲಿ ಇಬ್ಬರು ಪುರುಷರಾಗಿದ್ದು, ಈ ಪೈಕಿ ಒಬ್ಬಾತನ ಹೆಸರು ಗೋಪಿ ಎಂದಾಗಿದೆ. ಮತ್ತೊಬ್ಬ ತಮ್ಮ ಸತ್ಯಾಂಶ ಬಯಲಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ನಕಲಿ ಮಂಗಳ ಮುಖಿಯರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications