ಕೊಡಗು, ಕೇರಳ ಜನರ ನೆರವಿಗೆ ನಿಂತ ದ.ಕ.ಧಾರ್ಮಿಕ, ಸಾಮಾಜಿಕ ಸಂಸ್ಥೆಗಳು
ಮಂಗಳೂರು, ಆಗಸ್ಟ್ 19: ಅತಿವೃಷ್ಟಿ ಹಾಗು ಭಾರೀ ಭೂ ಕುಸಿತದಿಂದ ನಲುಗಿರುವ ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯದ ಜನರ ನೆರವಿಗೆ ದಕ್ಷಿಣ ಕನ್ನಡದ ಧಾರ್ಮಿಕ ಹಾಗು ಸಾಮಾಜಿಕ ಸಂಘ ಸಂಸ್ಥೆಗಳು ಮುಂದಾಗಿವೆ.
ಭಾರೀ ಮಳೆ, ನೆರೆ ಹಾಗೂ ಭೂಕುಸಿತಕ್ಕೆ ರಸ್ತೆ ಸಂಪರ್ಕ, ಮನೆ, ಮಠ ಕಳೆದುಕೊಂಡ ಸಂತ್ರಸ್ತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸಕರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಶ್ಯ ವಸ್ತುಗಳ ಸಂಗ್ರಹ ಕೇಂದ್ರ ಸ್ಥಾಪಿಸಿ ಅಧಿಕಾರಿಗಳನ್ನು ನೇಮಕ ಮಾಡಿದೆ. ನಗರದ ಕೆಪಿಟಿ ಕಾಲೇಜಿನಲ್ಲಿ ಈ ಕೇಂದ್ರ ಸ್ಥಾಪಿಸಲಾಗಿದ್ದು, ಮುಂಜಾನೆ ಒಂಭತ್ತು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಈ ಕೇಂದ್ರ ಅವಶ್ಯ ವಸ್ತುಗಳನ್ನು ಸಂಗ್ರಹಿಸಲಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಮಂದಿರ, ಮಸೀದಿ, ಚರ್ಚ್ ಗಳಲ್ಲಿ ಕೇರಳ ಹಾಗೂ ಕೊಡಗಿನ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳು ಹಾಗು ಹಣ ಸಂಗ್ರಹಿಸಲಾಗುತ್ತಿದೆ. ಕೇರಳ ಸಂತ್ರಸ್ತರಿಗಾಗಿ ಭಾರತೀಯ ತಟರಕ್ಷಣಾ ಪಡೆಯ ಮಂಗಳೂರು ಯುನಿಟ್ ಅಗತ್ಯ ವಸ್ತುಗಳನ್ನು ಸಂಗ್ರಹಿಸುವ ಅಭಿಯಾನ ಆರಂಭಿಸಿದೆ.
ಸಂಘ ಸಂಸ್ಥೆ ಗಳು ತಂದು ಕೊಡುವ ವಸ್ತುಗಳನ್ನು ಹೊತ್ತು ಕೊಸ್ಟ್ ಗಾರ್ಡ್ ಹಡಗೊಂದು ಇಂದು ನವ ಮಂಗಳೂರು ಬಂದರಿನಿಂದ ಕೇರಳಕ್ಕೆ ಹೋಗಲಿದೆ.
ಕೇರಳ ಹಾಗೂ ಕೊಡಗಿನ ಪ್ರಕೃತಿ ವಿಕೋಪದ ಪ್ರವಾಹ ಪೀಡಿತ ಪ್ರದೇಶಗಳ ನೆರೆ ಸಂತ್ರಸ್ತರಿಗೆ ಹಾಲನ್ನು ನೇರವಾಗಿ ಕಾಯಿಸದೆ ಕುಡಿಯಲು ಅನುವಾಗುವಂತೆ 17 ಸಾವಿರ ಲೀಟರ್ ತೃಪ್ತಿ ಹಾಲನ್ನು ಕಳುಹಿಸಲು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ತೃಪ್ತಿ ಹಾಲನ್ನು ತೆಗೆದುಕೊಂಡು 2 ವಾಹನಗಳು ಇಂದು ಹೊರಡಲಿವೆ.

ನೆರೆ ಪೀಡಿತ ಕೊಡಗು ಮತ್ತು ಕೇರಳ ನಿರಾಶ್ರಿತರಿಗೆ ಕ್ಯಾಂಪ್ಕೋ ನೆರವು ನೀಡಲು ಮುಂದಾಗಿದೆ. ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿಗಳ ಒಂದು ದಿನದ ಸಂಬಳವನ್ನು ಸಂತ್ರಸ್ತರಿಗೆ ನೀಡಲು ನಿರ್ಧರಿಸಿದ್ದಾರೆ. ಕ್ಯಾಂಪ್ಕೋ ದಲ್ಲಿ ಸುಮಾರು 2,500 ಸಾವಿರ ಸಿಬ್ಬಂದಿ ಇದ್ದು, ಅವರ ಒಂದು ದಿನದ ಸಂಬಳ ಸುಮಾರು 15 ಲಕ್ಷ ರೂಪಾಯಿ ಆಗಲಿದೆ.
ಈ ನಡುವೆ ನಾಡಿನ ಸುಭಿಕ್ಷೆಗೆ ಕುಕ್ಕೆ ದೇವಳದಲ್ಲಿ ಇಂದು ಭಾನುವಾರ ವಿಶೇಷ ಪ್ರಾರ್ಥನೆ ನಡೆಯಲಿದೆ. ಜನಜೀವನ, ಪ್ರಾಣಿ ಸಂಕುಲ ಶಾಂತಿಯುತವಾಗಿ ಸುಖ-ನೆಮ್ಮದಿಯಿಂದ ಜೀವನ ನಡೆಸಲು ಕೃಪೆ ತೋರುವಂತೆ ಪ್ರಾರ್ಥನೆ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಮಧ್ಯಾಹ್ನದ ಮಹಾಪೂಜೆ ಬಳಿಕ ಈ ವಿಶೇಷ ಪ್ರಾರ್ಥನೆ ನಡೆಯಲಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications