ಮಂಗಳೂರು ವಿವಿಯಲ್ಲಿದೆ ಕೃತಿ ಚೌರ್ಯ ತಡೆ ತಂತ್ರಾಂಶ
ಮಂಗಳೂರು, ಏ. 16 : ವಿಶ್ವವಿದ್ಯಾಲಯದ ಕಪಾಟಿನಲ್ಲಿರುವ ಕಡತಗಳನ್ನು ಕದ್ದು, ಅದರಲ್ಲಿನ ಸಂಶೋಧನೆಗಳನ್ನು ಯಥಾವತ್ತಾಗಿ ನಕಲು ಮಾಡಿ ತಮ್ಮ ಹೆಸರಿನಲ್ಲಿ ಪ್ರಕಟಿಸುವ ಬುದ್ಧಿವಂತ ಕಳ್ಳರನ್ನು ಹಿಡಿಯಲು ಮಂಗಳೂರು ವಿವಿ ಹೊಸ ತಂತ್ರ ರೂಪಿಸಿದೆ.
ಪಿಎಚ್ಡಿ ಪಡೆಯಲು ಸಲ್ಲಿಸುವ ಪ್ರಬಂಧಗಳಲ್ಲಿ ಕೃತಿ ಚೌರ್ಯವಾಗುತ್ತಿರುವುದನ್ನು ಗಮನಿಸಿದ ವಿವಿ ಈ ನೂತನ ತಂತ್ರಜ್ಞಾನವನ್ನು ಅಳವಡಿಸಿದೆ. 'ಆ್ಯಂಟಿ ಪ್ಲಜೇರಿಸಮ್' ಎಂಬ ಸಾಫ್ಟ್ವೇರ್ ಇದಾಗಿದ್ದು, ವಿದ್ಯಾರ್ಥಿಗಳು ಸಲ್ಲಿಸುವ ಪ್ರಬಂಧಗಳನ್ನು ತಪಾಸಣೆ ಮಾಡಿ ಕೃತಿ ಚೌರ್ಯ ಪತ್ತೆ ಹಚ್ಚುತ್ತದೆ.

ಈ ನೂತನ ತಂತ್ರಾಂಶವನ್ನು ಎರಡು ತಿಂಗಳ ಹಿಂದೆ ಅಳವಡಿಸಲಾಗಿದ್ದು, ಸಂಶೋಧನಾ ಗೈಡ್ಗಳಿಗೆ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೆ.ಭೈರಪ್ಪ ಹೇಳಿದ್ದಾರೆ.
ನಿರ್ಣಯ ಕೈಗೊಳ್ಳಲಾಗಿತ್ತು : ರಾಜ್ಯ ಉನ್ನತ ಶಿಕ್ಷಣ ಮಂಡಳಿ ಕೃತಿ ಚೌರ್ಯ ತಡೆಗಟ್ಟಲು ತಂತ್ರಾಂಶ ಅಳವಡಿಸುವ ಕುರಿತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು. ರಾಜ್ಯದ ಎಲ್ಲ ವಿವಿಗಳಲ್ಲಿ ತಂತ್ರಾಂಶ ಆಳವಡಿಕೆಗೆ ನಿರ್ದೇಶನ ನೀಡಿತ್ತು. ಮಂಗಳೂರು ವಿವಿ ತಂತ್ರಾಂಶವನ್ನು ಅಳವಡಿಸಿಕೊಂಡಿದೆ.
ಈ ನೂತನ ತಂತ್ರಾಂಶದಿಂದ ಪ್ರಬಂಧದಲ್ಲಿ ಕೃತಿ ಚೌರ್ಯವಾಗಿದ್ದರೆ ಪತ್ತೆ ಹಚ್ಚಲಾಗುತ್ತದೆ. ಶೇ.25ಕ್ಕೂ ಅಧಿಕ ಕೃತಿಚೌರ್ಯವಿದ್ದರೆ ಮಂಡಿಸಿದ ಪ್ರಬಂಧವನ್ನು ತಿರಸ್ಕರಿಸಲಾಗುತ್ತದೆ ಎಂದು ಕುಲಪತಿಗಳು ಹೇಳಿದ್ದಾರೆ.
ಹೇಗೆ ಕೆಲಸ ಮಾಡುತ್ತದೆ : ಈ ತಂತ್ರಾಂಶವನ್ನು ಕಂಪ್ಯೂಟರ್ಗೆ ಅಳವಡಿಸಲಾಗಿದೆ. ಅಭ್ಯರ್ಥಿಗಳು ಸಿಡಿಯಲ್ಲಿ ನೀಡುವ ಪ್ರಬಂಧವನ್ನು ಕಂಪ್ಯೂಟರ್ಗೆ ಹಾಕಲಾಗುತ್ತದೆ. ಈ ತಂತ್ರಾಂಶದಲ್ಲಿ ಜಗತ್ತಿನ ಸಂಶೋಧನೆ ಮಾಹಿತಿಯನ್ನು ಸೇರಿಸಲಾಗಿರುತ್ತದೆ. ಪ್ರಬಂಧವನ್ನು ಸಂಪೂರ್ಣವಾಗಿ ಸ್ಕ್ಯಾನ್ ಮಾಡುವ ಇದು ಎಷ್ಟು ಪ್ರಮಾಣದ ಕೃತಿ ಚೌರ್ಯವಾಗಿದೆ ಎಂದು ಪತ್ತೆ ಹಚ್ಚಲಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications