ಮಂಗಳೂರು ವಿವಿಯಲ್ಲಿದೆ ಕೃತಿ ಚೌರ್ಯ ತಡೆ ತಂತ್ರಾಂಶ
ಮಂಗಳೂರು, ಏ. 16 : ವಿಶ್ವವಿದ್ಯಾಲಯದ ಕಪಾಟಿನಲ್ಲಿರುವ ಕಡತಗಳನ್ನು ಕದ್ದು, ಅದರಲ್ಲಿನ ಸಂಶೋಧನೆಗಳನ್ನು ಯಥಾವತ್ತಾಗಿ ನಕಲು ಮಾಡಿ ತಮ್ಮ ಹೆಸರಿನಲ್ಲಿ ಪ್ರಕಟಿಸುವ ಬುದ್ಧಿವಂತ ಕಳ್ಳರನ್ನು ಹಿಡಿಯಲು ಮಂಗಳೂರು ವಿವಿ ಹೊಸ ತಂತ್ರ ರೂಪಿಸಿದೆ.
ಪಿಎಚ್ಡಿ ಪಡೆಯಲು ಸಲ್ಲಿಸುವ ಪ್ರಬಂಧಗಳಲ್ಲಿ ಕೃತಿ ಚೌರ್ಯವಾಗುತ್ತಿರುವುದನ್ನು ಗಮನಿಸಿದ ವಿವಿ ಈ ನೂತನ ತಂತ್ರಜ್ಞಾನವನ್ನು ಅಳವಡಿಸಿದೆ. 'ಆ್ಯಂಟಿ ಪ್ಲಜೇರಿಸಮ್' ಎಂಬ ಸಾಫ್ಟ್ವೇರ್ ಇದಾಗಿದ್ದು, ವಿದ್ಯಾರ್ಥಿಗಳು ಸಲ್ಲಿಸುವ ಪ್ರಬಂಧಗಳನ್ನು ತಪಾಸಣೆ ಮಾಡಿ ಕೃತಿ ಚೌರ್ಯ ಪತ್ತೆ ಹಚ್ಚುತ್ತದೆ.

ಈ ನೂತನ ತಂತ್ರಾಂಶವನ್ನು ಎರಡು ತಿಂಗಳ ಹಿಂದೆ ಅಳವಡಿಸಲಾಗಿದ್ದು, ಸಂಶೋಧನಾ ಗೈಡ್ಗಳಿಗೆ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೆ.ಭೈರಪ್ಪ ಹೇಳಿದ್ದಾರೆ.
ನಿರ್ಣಯ ಕೈಗೊಳ್ಳಲಾಗಿತ್ತು : ರಾಜ್ಯ ಉನ್ನತ ಶಿಕ್ಷಣ ಮಂಡಳಿ ಕೃತಿ ಚೌರ್ಯ ತಡೆಗಟ್ಟಲು ತಂತ್ರಾಂಶ ಅಳವಡಿಸುವ ಕುರಿತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು. ರಾಜ್ಯದ ಎಲ್ಲ ವಿವಿಗಳಲ್ಲಿ ತಂತ್ರಾಂಶ ಆಳವಡಿಕೆಗೆ ನಿರ್ದೇಶನ ನೀಡಿತ್ತು. ಮಂಗಳೂರು ವಿವಿ ತಂತ್ರಾಂಶವನ್ನು ಅಳವಡಿಸಿಕೊಂಡಿದೆ.
ಈ ನೂತನ ತಂತ್ರಾಂಶದಿಂದ ಪ್ರಬಂಧದಲ್ಲಿ ಕೃತಿ ಚೌರ್ಯವಾಗಿದ್ದರೆ ಪತ್ತೆ ಹಚ್ಚಲಾಗುತ್ತದೆ. ಶೇ.25ಕ್ಕೂ ಅಧಿಕ ಕೃತಿಚೌರ್ಯವಿದ್ದರೆ ಮಂಡಿಸಿದ ಪ್ರಬಂಧವನ್ನು ತಿರಸ್ಕರಿಸಲಾಗುತ್ತದೆ ಎಂದು ಕುಲಪತಿಗಳು ಹೇಳಿದ್ದಾರೆ.
ಹೇಗೆ ಕೆಲಸ ಮಾಡುತ್ತದೆ : ಈ ತಂತ್ರಾಂಶವನ್ನು ಕಂಪ್ಯೂಟರ್ಗೆ ಅಳವಡಿಸಲಾಗಿದೆ. ಅಭ್ಯರ್ಥಿಗಳು ಸಿಡಿಯಲ್ಲಿ ನೀಡುವ ಪ್ರಬಂಧವನ್ನು ಕಂಪ್ಯೂಟರ್ಗೆ ಹಾಕಲಾಗುತ್ತದೆ. ಈ ತಂತ್ರಾಂಶದಲ್ಲಿ ಜಗತ್ತಿನ ಸಂಶೋಧನೆ ಮಾಹಿತಿಯನ್ನು ಸೇರಿಸಲಾಗಿರುತ್ತದೆ. ಪ್ರಬಂಧವನ್ನು ಸಂಪೂರ್ಣವಾಗಿ ಸ್ಕ್ಯಾನ್ ಮಾಡುವ ಇದು ಎಷ್ಟು ಪ್ರಮಾಣದ ಕೃತಿ ಚೌರ್ಯವಾಗಿದೆ ಎಂದು ಪತ್ತೆ ಹಚ್ಚಲಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications