Get Updates
Get notified of breaking news, exclusive insights, and must-see stories!

ಸೌಜನ್ಯಾ ಪ್ರಕರಣ: ಹೆಗ್ಗಡೆ ಕುಟುಂಬದ ಅರ್ಜಿ ವಜಾ

ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ನಿಶ್ಚಲ್ ಕುಮಾರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಮಂಗಳೂರು, ಎಪ್ರಿಲ್ 1: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ತಮ್ಮ ಹರ್ಷೇಂದ್ರ ಕುಮಾರ್ ರ ಮಗ ನಿಶ್ಚಲಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ಕೋರ್ಟು ವಜಾಗೊಳಿಸಿದೆ.

2012, ಅಕ್ಟೋಬರ್ 9 ರಂದು, ಧರ್ಮಸ್ಥಳದಿಂದ ಎಂಟು ಕಿ.ಮೀ. ದೂರದ ನಿರ್ಜನ ಪ್ರದೇಶವೊಂದರಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೌಜನ್ಯ ಕುಟುಂಬಸ್ಥರು ಮತ್ತು ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಸೋಮನಾಥ ನಾಯಕ್ ಮೇಲೆ ನಿಶ್ಚಲ್ ಕುಮಾರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.[ಸೌಜನ್ಯ ಪ್ರಕರಣ: ಹೆಗ್ಗಡೆ ಪರ -ವಿರೋಧ ಪ್ರತಿಭಟನೆ]

Soujanya murder case: Nishchal Kumar's defamation appeal rejected

ದೂರುದಾರ ನಿಶ್ಚಲಕುಮಾರ್ ತಾವು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲು ನ್ಯಾಯಾಲಯದಲ್ಲಿ ವಿಚಾರಣೆಗೆ ನಿರಂತರವಾಗಿ ಗೈರಾಗಿರುವುದರಿಂದ ನ್ಯಾಯಾಲಯವು ಒಂದು ಸಲ 500 ರೂ. ಮತ್ತು ಇನ್ನೊಂದು ಸಲ 2000 ರೂ. ಪ್ರತಿವಾದಿಯ ವೆಚ್ಚವನ್ನು ಪಾವತಿಸುವಂತೆ ಆದೇಶಿಸಿತ್ತು.[ಸೌಜನ್ಯ ಹತ್ಯೆ ಆರೋಪಿಗಳಿಗೆ ಶಿಕ್ಷೆ ಯಾವಾಗ?]

ಆದಾಗ್ಯೂ ನಿಶ್ಚಲ ಕುಮಾರ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಅವರ ದಾವೆಯನ್ನು ನ್ಯಾಯಾಲಯ ವಜಾಗೊಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+