ತೀವ್ರ ಬರ: ಮಂಗಳೂರು ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ
ಮಂಗಳೂರು, ಫೆಬ್ರವರಿ 18: ಹಿಂಗಾರು ಹಂಗಾಮಿನಲ್ಲಿ ಉಂಟಾದ ಮಳೆಯ ಕೊರತೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಬಂಟ್ವಾಳ ತಾಲ್ಲೂಕನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಸರಕಾರ ಘೊಷಿಸಿದೆ. ಅಲ್ಲದೆ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅದೇಶಿಸಿದೆ.
ಈ ತಾಲ್ಲೂಕುಗಳಲ್ಲದೆ ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲ್ಲೂಕುಗಳಲ್ಲಿ ಬೇಸಿಗೆಯಲ್ಲಿ ಉಂಟಾಗಬಹದುದಾದ ಕುಡಿಯುವ ನೀರು ಮತ್ತು ಜಾನುವಾರುಗಳ ರಕ್ಷಣೆ ಇನ್ನಿತರ ಸಮಸ್ಯೆಗಳ ನಿವಾರಣೆಗಾಗಿ ಪ್ರತಿ ತಾಲ್ಲೂಕುಗಳಲ್ಲಿ ಆಯಾ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಇದರಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ವಿವಿಧ ವಿಭಾಗದ ಸ್ಥಳೀಯ ನಗರ ಸಂಸ್ಥೆಯ ಮುಖ್ಯಾಧಿಕಾರಿಗಳು ಇರುತ್ತಾರೆ.

ಈ ಸಮಿತಿಯ ಅಧಿಕಾರಿಗಳು ನೀರು ಮತ್ತು ಜಾನುವಾರುಗಳ ಬಗ್ಗೆ ಅಲ್ಲದೆ ಭೂ ರಹಿತ ಕಾರ್ಮಿಕರು, ಉದ್ಯೋಗ ಖಾತರಿಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಒದಿಸುವಂತೆ ಮಾಡುವುದು ಇತ್ಯಾದಿ ಬರ ಪರಿಹಾರಕ್ಕೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸುತ್ತಾರೆ.
ಜೊತೆಗೆ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಕಂಟ್ರೋಲ್ ರೂಂ, ಟ್ಯಾಂಕರ್ ಮೂಲಕ ನಿರು ಪೂರೈಕೆ, ಜಾನುವಾರುಗಳಿಗೆ ನೀರು, ಮೇವು ಒದಗಿಸಲು ಕ್ರಮ, ಬೆಳೆ ಹಾನಿ ಸಮೀಕ್ಷೆ, ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವುದು, ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳುವುದು ಮತ್ತಿತರ ವಿಷಯಗಳನ್ನು ಈ ಸಮಿತಿ ನಿರ್ವಹಸಲಿದ್ದು, ಪ್ರತೀ 15 ದಿನಗಳಿಗೊಮ್ಮೆ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.
ವರದಿಯನ್ನು ಪಡೆದ ನಂತರ ಸರಕಾರ ವರದಿಯನ್ವಯ ಯಾವ ಯಾವ ತಾಲ್ಲೂಕುಗಳಿಗೆ ಎಷ್ಟೆಷ್ಟು ಪರಿಹಾರ ನೀಡಬೇಕು ಎಂಬುದನ್ನು ಸರಕಾರ ನಿರ್ಧರಿಸುತ್ತದೆ. ಹಾಗು ಅನುದಾನ ಒದಗಿಸುತ್ತದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications