ಸ್ಪೀಕರ್ ಕಾಂಗ್ರೆಸ್ ಶಾಸಕರ ರಾಜೀನಾಮೆ ಅಂಗೀಕರಿಸುವುದಿಲ್ಲ- ಶರವಣ
ಮಂಗಳೂರು, ಜುಲೈ 2: ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಶರವಣ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಸುಬ್ರಹ್ಮಣ್ಯನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಇಬ್ಬರು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡುವುದಿಲ್ಲ ಎಂದರು.
ಇಬ್ಬರು ಶಾಸಕರು ರಾಜೀನಾಮೆಯನ್ನು ಸಲ್ಲಿಸಬೇಕಾದ ನಿಯಮವನ್ನು ಪಾಲಿಸಿಲ್ಲ. ಈ ಕಾರಣಕ್ಕಾಗಿ ಸ್ಪೀಕರ್ ಇಬ್ಬರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಇಬ್ಬರು ಶಾಸಕರನ್ನು ಮನವೊಲಿಸುವ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದ ಅವರು, ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ಅಡ್ಡಿಯಿಲ್ಲದೆ ಪೂರೈಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರು ಅವರ ಶಾಸಕರನ್ನು ಏನು ಮಾಡಬೇಕು ಅದನ್ನು ಮಾಡ್ತಾರೆ, ಜೆಡಿಎಸ್ ಶಾಸಕರು ದೇವೇಗೌಡರ ಸಂಪರ್ಕದಲ್ಲಿದ್ದಾರೆ. ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ತಂತ್ರ ಫಲಿಸುವುದಿಲ್ಲ. ಕುರ್ಚಿಯ ಆಸೆಗೆ ಬಿಜೆಪಿ ಜಪ ಮಾಡುತ್ತಿದ್ದು, ಅವರ ಆಸೆ ನೆರವೇರುವುದಿಲ್ಲ ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications