ಮೋದಿ ಆರೋಗ್ಯ, ಶ್ರೇಯೋಭಿವೃದ್ಧಿಗೆ ಕದ್ರಿ ಮಂಜುನಾಥ ದೇಗುಲದಲ್ಲಿ ಏಕ ರುದ್ರ ಪೂಜೆ
ಮಂಗಳೂರು, ಫೆಬ್ರವರಿ 11: ಮುಂಬರುವ ಲೋಕಸಭಾ ಚುನಾವಣೆಗಾಗಿ ಪ್ರಮುಖ ರಾಜಕೀಯ ಪಕ್ಷಗಳ ಚಟುವಟಿಕೆ ಬಿರುಸುಗೊಂಡಿದೆ. ರಾಜ್ಯದಲ್ಲಿ ಮುಂಬರುವ ಚುನಾವಣೆಗಾಗಿ ಬಿಜೆಪಿ ಹುಬ್ಬಳ್ಳಿಯ ಮೂಲಕ ರಣಕಹಳೆ ಮೊಳಗಿಸಿದೆ.
ನಿನ್ನೆ ಭಾನುವಾರ (ಫೆ.10) ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಹೇಳಲಾಗುವ ಹುಬ್ಬಳ್ಳಿಗೆ ಆಗಮಿಸಿ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿರುವ ಮೈತ್ರಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಆಗಮನದಿಂದ ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದೆ. ರಾಜ್ಯದೆಲ್ಲೆಡೆ ಬಿಜೆಪಿ ಪಾಳಯದಲ್ಲಿ ಮುಂಬರುವ ಚುನಾವಣೆಗಾಗಿ ಬಿರುಸಿನ ಚಟುವಟಿಕೆ ಆರಂಭವಾಗಿದೆ.

ಈ ನಡುವೆ ಮಂಗಳೂರಿನಲ್ಲಿ ಮೋದಿ ಅವರ ಆರೋಗ್ಯ, ಕ್ಷೇಮಾಭಿವೃದ್ಧಿಗಾಗಿ ದೇವರ ಮೊರೆ ಹೋಗಲಾಗಿದೆ. ಮಂಗಳೂರಿನ ಹಿಂದೂ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಇಂದು ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಮೋದಿ ಅವರಿಗಾಗಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಆರೋಗ್ಯ, ಕ್ಷೇಮಾಭಿವೃದ್ಧಿ ಹಾಗೂ ಮುಂದಿನ ರಾಜಕೀಯ ಜೀವನವು ಸುಗಮವಾಗಿ ಸಾಗಲಿ ಎಂಬ ಬೇಡಿಕೆಯನ್ನಿಟ್ಟು, ಇಂದು ಬೆಳಗ್ಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಏಕ ರುದ್ರ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆರೋಗ್ಯ, ಕ್ಷೇಮಾಭಿವೃದ್ಧಿ ಹಾಗೂ ಮುಂದಿನ ರಾಜಕೀಯ ಜೀವನವು ಸುಗಮವಾಗಿ ಸಾಗಲಿ ಎಂದು ಶ್ರೀ ಮಂಜುನಾಥನಲ್ಲಿ ಪ್ರಾರ್ಥಿಸಲಾಯಿತು .
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications