ಬ್ಯಾಂಕ್ಗಳು ಅವ್ಯವಹಾರದ ಆರೋಪಕ್ಕೆ ಸಿಲುಕುತ್ತಿರುವುದು ದುರಂತ: ಜಗ್ಗಿ ವಾಸುದೇವ್
ಮಂಗಳೂರು, ಫೆಬ್ರವರಿ 19: ಆರ್ಥಿಕ ವಹಿವಾಟಿನಲ್ಲಿ ಲಾಭ ಕಂಡುಕೊಂಡ ಬ್ಯಾಂಕ್ಗಳು ಈಗ ಅವ್ಯವಹಾರದ ಆರೋಪಕ್ಕೆ ಸಿಲುಕುತ್ತಿರುವುದು ದುರಂತ ಎಂದು ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಅಭಿಪ್ರಾಯ ಪಟ್ಟಿದ್ದಾರೆ.
ಮಂಗಳೂರಿನ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

"ಹಣ ಒಂದು ವಸ್ತುವಲ್ಲ. ಅದನ್ನು ವಸ್ತು ಎಂದು ಗೋದಾಮಿನಲ್ಲಿ ಇಡಲು ಸಾಧ್ಯವಿಲ್ಲ. ಆದರೂ ಹಣವನ್ನು ವಸ್ತುವೆಂದು ತಿಳಿದು ಶೇಖರಿಸಿದವರಿಗೆ ಕಳೆದ ಒಂದು ವರ್ಷದಿಂದ ಸಾಕಷ್ಟು ಅನುಭವವಾಗಿದೆ. ಹಾಗಾಗಿ ಹಣವನ್ನು ಗೋದಾಮಿನಲ್ಲಿ ಶೇಖರಿಸದೆ, ಬ್ಯಾಂಕಿನಲ್ಲಿ ಇರಿಸಬೇಕು," ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಪನಗದೀಕರಣವನ್ನು ಅವರು ಪರೋಕ್ಷವಾಗಿ ಪ್ರಸ್ತಾಪಿಸಿದರು.
"ಸಾರ್ವಜನಿಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಧಿಕಾರಶಾಹಿಯ ಸಾಧ್ಯತೆ ಇರುತ್ತದೆ. ಆದರೆ ಖಾಸಗಿ ರಂಗದಲ್ಲಿ ಹೊಂದಾಣಿಕೆಯ ಮನೋಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ಖಾಸಗಿ ಬ್ಯಾಂಕ್ಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಗಲಿದೆ," ಎಂದು ಸದ್ಗುರು ಇದೇ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

"ಹಣ ಇಲ್ಲದಿದ್ದರೆ ಜೀವನ ಸಾಧ್ಯವಿಲ್ಲ ಎಂಬುದು ನಿಜವಾದರೂ, ಎಲ್ಲದಕ್ಕೂ ಹಣವೇ ಅಂತಿಮ ಆಗಬಾರದು. ಸುಸೂತ್ರ ಜೀವನಕ್ಕೆ ಜೀವನಾನುಭವ ಬಹುಮುಖ್ಯ. ಸಮಚಿತ್ತದ ಬದುಕಿನಿಂದ ಬದಲಾವಣೆ ಸಾಧ್ಯವಿದೆ. ಇದಕ್ಕಾಗಿ ಯೋಗ, ಧ್ಯಾನದ ಮೊರೆ ಹೋಗಲು ಸಾಧ್ಯವಿದೆ. ಜೀವನ ಎಂದರೆ ಆಕರ್ಷಕವಾಗಿರಬೇಕು ಎಂದು ಬಯಸುವವರೂ ಇದ್ದಾರೆ. ಸಂತಸದ ಜೀವನ ನಡೆಸಲು ಐಷಾರಾಮಿ ಬದುಕಿಗೆ ಮೊರೆ ಹೋಗುವವರೇ ಜಾಸ್ತಿ. ಆದರೆ ಅತಿ ಆಸೆಗಳು ಜೀವನವನ್ನು ಕೆಲವೊಮ್ಮೆ ದುರಂತದ ಮಾರ್ಗಕ್ಕೆ ತಂದು ಹಾಕುತ್ತವೆ. ಸಮರ್ಪಕ ಆಲೋಚನೆ ಇಲ್ಲದೆ ನಡೆಸುವ ಕಾರ್ಯಗಳು ಮಾನಸಿಕ ಶಾಂತಿಯನ್ನು ನೀಡಲಾರದು," ಎಂದು ಅವರು ಹೇಳಿದರು.
"ಮಂಗಳೂರು ಬ್ಯಾಂಕಿಂಗ್ ಕ್ಷೇತ್ರದ ತವರು ಆಗಿದೆ. ನಾನು 35 ವರ್ಷಗಳ ಹಿಂದೆ ಮಂಗಳೂರಿಗೆ ಬಂದಿದ್ದೆ. ಐದು ಪ್ರಮುಖ ಬ್ಯಾಂಕ್ಗಳಿಗೆ ಜನ್ಮ ನೀಡಿದ ಮಂಗಳೂರಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ ಅತ್ಯುತ್ತಮವಾಗಿದೆ," ಎಂದು ಜಗ್ಗಿ ವಾಸುದೇವ್ ಶ್ಲಾಘಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications