ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟ್ ಕ್ರೀಡೋತ್ಸವ
ಮಂಗಳೂರು, ಆಗಸ್ಟ್ 22: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಬಂಟ್ ಕ್ರೀಡೋತ್ಸವ ಭಾನುವಾರ ಜರುಗಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, "ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ತೆರೆಗಳು ಬೆಳಕಿಗೆ ಬರಲು ಬಂಟ ಕ್ರೀಡೋತ್ಸವದಂತಹ ಕ್ರೀಡಾಕೂಟಗಳು ಪ್ರೇರಣೆ, ಸ್ಫೂರ್ತಿ ನೀಡಲಿವೆ. ಜಾತಿ ಮತದ ಭೇದವೆಣಿಸದೆ ವಿವಿಧ ಬಂಟರ ಸಂಘಗಳು ಇಂತಹ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಿ," ಎಂದು ಹೇಳಿದರು.













Click it and Unblock the Notifications