ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ 24ಕ್ಕೆ
ಮಂಗಳೂರು, ಆಗಸ್ಟ್ 20: ಶ್ರೀಕೃಷ್ಣ ಜನ್ಮಾಷ್ಟಮಿ ಬಂದೇ ಬಿಟ್ಟಿತು. ಎಲ್ಲೆಲ್ಲೂ ಶ್ರೀಕೃಷ್ಣ ವೇಷ ಸ್ಪರ್ಧೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಎಲ್ಲಾ ಸ್ಪರ್ಧೆಗಳಿಗೂ ಮೂಲ ಎಂದೇ ಹೆಗ್ಗಳಿಕೆ ಪಡೆದ ಕಲ್ಕೂರ ಪ್ರತಿಷ್ಠಾನದ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ 'ಶ್ರೀ ಕೃಷ್ಣ ವೇಷ ಸ್ಪರ್ಧೆ' ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಆ. 24ರಂದು ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ನಿರಂತರ 12 ಗಂಟೆಗಳ ಕಾಲ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು.

ಕಂದ ಕೃಷ್ಣ: ಈ ವಿಭಾಗದಲ್ಲಿ 1 ವರ್ಷದ ಕೆಳಗಿನ ಪುಟಾಣಿಗಳು ಭಾಗವಹಿಸಬಹುದು. ಕಂದಮ್ಮಗಳ ಜತೆ ತಾಯಂದಿರು ಕೂಡಾ ವೇದಿಕೆಗೆ ಬರಬಹುದು. ಮುದ್ದು ಕೃಷ್ಣ : ಈ ವಿಭಾಗದಲ್ಲಿ 1 ವರ್ಷಕ್ಕಿಂತ ಮೇಲ್ಪಟ್ಟ 2 ವರ್ಷಕ್ಕಿಂತ ಕೆಳಗಿನ ಕಂದಮ್ಮಗಳು ಪಾಲ್ಗೊಳ್ಳಬಹುದು. ಇವರೊಂದಿಗೆ ತಾಯಂದಿರು ವೇದಿಕೆಗೆ ಬರಬಹುದು. ತುಂಟ ಕೃಷ್ಣ: ಈ ವಿಭಾಗದಲ್ಲಿ 2 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 3 ವರ್ಷಕ್ಕಿಂತ ಕೆಳಗಿನ ಪುಟಾಣಿಗಳು ಭಾಗವಹಿಸಬಹುದು.[ಭಾನುವಾರ ಮಂಗಳೂರಿಗೆ ಅಮಿತ್ ಶಾ, ಕಾರ್ಯಕ್ರಮಗಳು]
ಕಿಶೋರ ಕೃಷ್ಣ: ಯುಕೆಜಿ ಮತ್ತು ಒಂದನೇ ತರಗತಿ ಪುಟಾಣಿಗಳು ಭಾಗವಹಿಸಬಹುದು. ಶ್ರೀಕೃಷ್ಣ: 2, 3, 4ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು. ಗೀತಾಕೃಷ್ಣ: (ವೇಷಭೂಷನದೊಂದಿಗೆ ಗೀತೋಪದೇಶ ಚಿತ್ರಣ ಗೀತೆ ಯಾವುದಾದರೂ ಶ್ಲೋಕದ ಪಠಣದೊಂದಿಗೆ) 7ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು.

ಯಕ್ಷ ಕೃಷ್ಣ: ಜಿಲ್ಲೆಯ ವಿಶೇಷ ಸಾಂಪ್ರದಾಯಿಕ ಶೈಲಿಯಾದ ಯಕ್ಷಗಾನದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಯಕ್ಷ ಕೃಷ್ಣ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವ ಮಕ್ಕಳು ಸಾಂಪ್ರದಾಯಿಕ ಯಕ್ಷಗಾನ ವೇಷ-ಭೂಷಣ ಹಾಕಬಹುದು.
ರಾಧಾಕೃಷ್ಣ: ವಿಭಾಗದಲ್ಲಿ ಏಳನೇ ತರಗತಿಯ ವರೆಗಿನ ಮಕ್ಕಳು ಭಾಗವಹಿಸಬಹುದು. ಯೊಶೋದ ಕೃಷ್ಣ: ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೆ ಮಹಿಳೆ ಯಶೋದೆಯಾಗಿ ಯಾವುದೇ ಮಗು ಕೃಷ್ಣನಾಗಿ ಅಭಿನಯಪೂರ್ವಕವಾಗಿ ಭಾಗವಹಿಸಬಹುದು. ದೇವಕಿಕೃಷ್ಣ: ಈ ಹಿಂದೆ ಕದ್ರಿ ಶ್ರೀಕ್ಷೇತ್ರದಲ್ಲಿ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೃಷ್ಣ ವೇಷ ಸ್ಪರ್ಧಾಳುಗಳಾಗಿ ಭಾಗವಹಿಸಿದ ತಾಯಂದಿರು ದೇವಕಿಯಾಗಿ, ಮಗು ಕೃಷ್ಣನಾಗಿ ಭಾಗವಹಿಸಬಹುದು.[ಚಿತ್ರಗಳು : ಮಂಗಳೂರಿನಲ್ಲಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ]
ವಸುದೇವ ಕೃಷ್ಣ: ಪುರುಷ ವಸುದೇವನಾಗಿ ಮಗುವನ್ನು ಪ್ಲಾಸ್ಟಿಕ್ ರಹಿತವಾದ ಯಾವುದೇ ಬೆತ್ತ ಅಥವಾ ಬೀಳು ಇನ್ನಿತರ ಬುಟ್ಟಿಗಳಲ್ಲಿ ತಲೆಯಲ್ಲಿ ಹೊತ್ತು ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಬಹುದು.
ನಂದಗೋಕುಲ: ಕೃಷ್ಣನ ಯಾವುದೇ ಸನ್ನಿವೇಶವನ್ನು ಗುಂಪಿನಲ್ಲಿ ಸ್ತಬ್ಧ ಚಿತ್ರ ದೃಶ್ಯ ಸ್ವರೂಪದೊಂದಿಗೆ ಪ್ರದರ್ಶಿಸಲು ಅವಕಾಶ, ವಯೋಮಿತಿ ನಿರ್ಬಂಧವಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications