ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ ಆ 24ಕ್ಕೆ
ಮಂಗಳೂರು, ಆಗಸ್ಟ್ 20: ಶ್ರೀಕೃಷ್ಣ ಜನ್ಮಾಷ್ಟಮಿ ಬಂದೇ ಬಿಟ್ಟಿತು. ಎಲ್ಲೆಲ್ಲೂ ಶ್ರೀಕೃಷ್ಣ ವೇಷ ಸ್ಪರ್ಧೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಎಲ್ಲಾ ಸ್ಪರ್ಧೆಗಳಿಗೂ ಮೂಲ ಎಂದೇ ಹೆಗ್ಗಳಿಕೆ ಪಡೆದ ಕಲ್ಕೂರ ಪ್ರತಿಷ್ಠಾನದ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ 'ಶ್ರೀ ಕೃಷ್ಣ ವೇಷ ಸ್ಪರ್ಧೆ' ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಆ. 24ರಂದು ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ನಿರಂತರ 12 ಗಂಟೆಗಳ ಕಾಲ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು.

ಕಂದ ಕೃಷ್ಣ: ಈ ವಿಭಾಗದಲ್ಲಿ 1 ವರ್ಷದ ಕೆಳಗಿನ ಪುಟಾಣಿಗಳು ಭಾಗವಹಿಸಬಹುದು. ಕಂದಮ್ಮಗಳ ಜತೆ ತಾಯಂದಿರು ಕೂಡಾ ವೇದಿಕೆಗೆ ಬರಬಹುದು. ಮುದ್ದು ಕೃಷ್ಣ : ಈ ವಿಭಾಗದಲ್ಲಿ 1 ವರ್ಷಕ್ಕಿಂತ ಮೇಲ್ಪಟ್ಟ 2 ವರ್ಷಕ್ಕಿಂತ ಕೆಳಗಿನ ಕಂದಮ್ಮಗಳು ಪಾಲ್ಗೊಳ್ಳಬಹುದು. ಇವರೊಂದಿಗೆ ತಾಯಂದಿರು ವೇದಿಕೆಗೆ ಬರಬಹುದು. ತುಂಟ ಕೃಷ್ಣ: ಈ ವಿಭಾಗದಲ್ಲಿ 2 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 3 ವರ್ಷಕ್ಕಿಂತ ಕೆಳಗಿನ ಪುಟಾಣಿಗಳು ಭಾಗವಹಿಸಬಹುದು.[ಭಾನುವಾರ ಮಂಗಳೂರಿಗೆ ಅಮಿತ್ ಶಾ, ಕಾರ್ಯಕ್ರಮಗಳು]
ಕಿಶೋರ ಕೃಷ್ಣ: ಯುಕೆಜಿ ಮತ್ತು ಒಂದನೇ ತರಗತಿ ಪುಟಾಣಿಗಳು ಭಾಗವಹಿಸಬಹುದು. ಶ್ರೀಕೃಷ್ಣ: 2, 3, 4ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು. ಗೀತಾಕೃಷ್ಣ: (ವೇಷಭೂಷನದೊಂದಿಗೆ ಗೀತೋಪದೇಶ ಚಿತ್ರಣ ಗೀತೆ ಯಾವುದಾದರೂ ಶ್ಲೋಕದ ಪಠಣದೊಂದಿಗೆ) 7ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು.

ಯಕ್ಷ ಕೃಷ್ಣ: ಜಿಲ್ಲೆಯ ವಿಶೇಷ ಸಾಂಪ್ರದಾಯಿಕ ಶೈಲಿಯಾದ ಯಕ್ಷಗಾನದ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಯಕ್ಷ ಕೃಷ್ಣ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವ ಮಕ್ಕಳು ಸಾಂಪ್ರದಾಯಿಕ ಯಕ್ಷಗಾನ ವೇಷ-ಭೂಷಣ ಹಾಕಬಹುದು.
ರಾಧಾಕೃಷ್ಣ: ವಿಭಾಗದಲ್ಲಿ ಏಳನೇ ತರಗತಿಯ ವರೆಗಿನ ಮಕ್ಕಳು ಭಾಗವಹಿಸಬಹುದು. ಯೊಶೋದ ಕೃಷ್ಣ: ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೆ ಮಹಿಳೆ ಯಶೋದೆಯಾಗಿ ಯಾವುದೇ ಮಗು ಕೃಷ್ಣನಾಗಿ ಅಭಿನಯಪೂರ್ವಕವಾಗಿ ಭಾಗವಹಿಸಬಹುದು. ದೇವಕಿಕೃಷ್ಣ: ಈ ಹಿಂದೆ ಕದ್ರಿ ಶ್ರೀಕ್ಷೇತ್ರದಲ್ಲಿ ನಡೆದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೃಷ್ಣ ವೇಷ ಸ್ಪರ್ಧಾಳುಗಳಾಗಿ ಭಾಗವಹಿಸಿದ ತಾಯಂದಿರು ದೇವಕಿಯಾಗಿ, ಮಗು ಕೃಷ್ಣನಾಗಿ ಭಾಗವಹಿಸಬಹುದು.[ಚಿತ್ರಗಳು : ಮಂಗಳೂರಿನಲ್ಲಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ]
ವಸುದೇವ ಕೃಷ್ಣ: ಪುರುಷ ವಸುದೇವನಾಗಿ ಮಗುವನ್ನು ಪ್ಲಾಸ್ಟಿಕ್ ರಹಿತವಾದ ಯಾವುದೇ ಬೆತ್ತ ಅಥವಾ ಬೀಳು ಇನ್ನಿತರ ಬುಟ್ಟಿಗಳಲ್ಲಿ ತಲೆಯಲ್ಲಿ ಹೊತ್ತು ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಬಹುದು.
ನಂದಗೋಕುಲ: ಕೃಷ್ಣನ ಯಾವುದೇ ಸನ್ನಿವೇಶವನ್ನು ಗುಂಪಿನಲ್ಲಿ ಸ್ತಬ್ಧ ಚಿತ್ರ ದೃಶ್ಯ ಸ್ವರೂಪದೊಂದಿಗೆ ಪ್ರದರ್ಶಿಸಲು ಅವಕಾಶ, ವಯೋಮಿತಿ ನಿರ್ಬಂಧವಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications