Get Updates
Get notified of breaking news, exclusive insights, and must-see stories!

ಮಂಗಳೂರಿನಲ್ಲಿ ಸೆಪ್ಟೆಂಬರ್ 13ರಂದು ಶ್ರೀ ಕೃಷ್ಣ ವೇಷ ಸ್ಪರ್ಧೆ

ಮಂಗಳೂರು, ಸೆಪ್ಟೆಂಬರ್ 10: ಕೃಷ್ಣಾಷ್ಟಮಿ ಪ್ರಯುಕ್ತ ಕಳೆದ ಮೂರು ದಶಕಗಳಿಂದ ಶ್ರೀಕೃಷ್ಣ ವೇಷ ಸ್ಪರ್ಧೆಗೆ ವೇದಿಕೆಯಾಗಿರುವ ಕಲ್ಕೂರ ಪ್ರತಿಷ್ಠಾನ ಈ ಬಾರಿ ಸೆಪ್ಟೆಂಬರ್ 13 ರಂದು ಶ್ರೀ ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಿದೆ.

ನಗರದ ಕದ್ರಿ ಶ್ರೀ ಮಂಜುನಾಥ ದೇವಾಲಯದ ಆವರಣದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ 3 ಸಾವಿರಕ್ಕೂ ಅಧಿಕ ಚಿಣ್ಣರು ಭಾಗವಹಿಸುವ ನಿರೀಕ್ಷೆಯಿದೆ .

Sri Krishna Vesha competition to be held on September 13th in Mangaluru

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸೆಪ್ಟೆಂಬರ್ 13 ರಂದು ಕೃಷ್ಣಾಷ್ಟಮಿ ಪ್ರಯುಕ್ತ ನಡೆಯುವ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಈ ಬಾರಿ 28 ವಿಭಾಗಗಳಲ್ಲಿ ನಡೆಯಲಿದೆ ಎಂದು ಹೇಳಿದರು .

8 ವೇದಿಕೆಗಳಲ್ಲಿ ಏಕಕಾಲಕ್ಕೆ ಈ ಸ್ಪರ್ಧೆಗಳು ನಡೆಯಲಿದ್ದು ಇದರೊಂದಿಗೆ ವಿವಿಧ ಸಾಹಿತ್ಯಿಕ , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು .

ಈ ಬಾರಿ ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ಕಿಶೋರ ಕೃಷ್ಣ, ಶ್ರೀ ಕೃಷ್ಣ, ಗೀತಾ ಕೃಷ್ಣ, ಯಕ್ಷ ಕೃಷ್ಣ, ರಾಧಾಕೃಷ್ಣ ಯಶೋಧ ಕೃಷ್ಣ ಸೇರಿದಂತೆ ಒಟ್ಟು 28 ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದವರು ಸ್ಪಷ್ಟಪಡಿಸಿದರು.

ರಂಗೋಲಿಯಲ್ಲಿ ಶ್ರೀಕೃಷ್ಣ ರಚನೆ, ಛಾಯಾಚಿತ್ರಗಾರರಿಗಾಗಿ ಛಾಯಾ ಕೃಷ್ಣ ಸ್ಪರ್ಧೆ , ಶ್ರೀಕೃಷ್ಣ ವರ್ಣ ವೈಭವ ಚಿತ್ರ ರಚನಾ ಸ್ಪರ್ಧೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+