ಮಂಗಳೂರಿನಲ್ಲಿ ಸೆಪ್ಟೆಂಬರ್ 13ರಂದು ಶ್ರೀ ಕೃಷ್ಣ ವೇಷ ಸ್ಪರ್ಧೆ
ಮಂಗಳೂರು, ಸೆಪ್ಟೆಂಬರ್ 10: ಕೃಷ್ಣಾಷ್ಟಮಿ ಪ್ರಯುಕ್ತ ಕಳೆದ ಮೂರು ದಶಕಗಳಿಂದ ಶ್ರೀಕೃಷ್ಣ ವೇಷ ಸ್ಪರ್ಧೆಗೆ ವೇದಿಕೆಯಾಗಿರುವ ಕಲ್ಕೂರ ಪ್ರತಿಷ್ಠಾನ ಈ ಬಾರಿ ಸೆಪ್ಟೆಂಬರ್ 13 ರಂದು ಶ್ರೀ ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಿದೆ.
ನಗರದ ಕದ್ರಿ ಶ್ರೀ ಮಂಜುನಾಥ ದೇವಾಲಯದ ಆವರಣದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ 3 ಸಾವಿರಕ್ಕೂ ಅಧಿಕ ಚಿಣ್ಣರು ಭಾಗವಹಿಸುವ ನಿರೀಕ್ಷೆಯಿದೆ .

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸೆಪ್ಟೆಂಬರ್ 13 ರಂದು ಕೃಷ್ಣಾಷ್ಟಮಿ ಪ್ರಯುಕ್ತ ನಡೆಯುವ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ ಈ ಬಾರಿ 28 ವಿಭಾಗಗಳಲ್ಲಿ ನಡೆಯಲಿದೆ ಎಂದು ಹೇಳಿದರು .
8 ವೇದಿಕೆಗಳಲ್ಲಿ ಏಕಕಾಲಕ್ಕೆ ಈ ಸ್ಪರ್ಧೆಗಳು ನಡೆಯಲಿದ್ದು ಇದರೊಂದಿಗೆ ವಿವಿಧ ಸಾಹಿತ್ಯಿಕ , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು .
ಈ ಬಾರಿ ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ಕಿಶೋರ ಕೃಷ್ಣ, ಶ್ರೀ ಕೃಷ್ಣ, ಗೀತಾ ಕೃಷ್ಣ, ಯಕ್ಷ ಕೃಷ್ಣ, ರಾಧಾಕೃಷ್ಣ ಯಶೋಧ ಕೃಷ್ಣ ಸೇರಿದಂತೆ ಒಟ್ಟು 28 ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದವರು ಸ್ಪಷ್ಟಪಡಿಸಿದರು.
ರಂಗೋಲಿಯಲ್ಲಿ ಶ್ರೀಕೃಷ್ಣ ರಚನೆ, ಛಾಯಾಚಿತ್ರಗಾರರಿಗಾಗಿ ಛಾಯಾ ಕೃಷ್ಣ ಸ್ಪರ್ಧೆ , ಶ್ರೀಕೃಷ್ಣ ವರ್ಣ ವೈಭವ ಚಿತ್ರ ರಚನಾ ಸ್ಪರ್ಧೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications