ಸೋಲುವ ಕಣದಲ್ಲಿ ಮುತಾಲಿಕ್ ಸ್ಪರ್ಧೆ ಯಾಕೆ..?: ಶ್ರೀರಾಮಸೇನೆಯಲ್ಲಿ ಭುಗಿಲೆದ್ದ ಭಿನ್ನಮತ

ಕಾರ್ಕಳದ ಓರ್ವ ಉದ್ಯಮಿ ಹಾಗೂ ವಕೀಲರ ಪ್ರಭಾವದಿಂದ ಮುತಾಲಿಕ್ ಸ್ಪರ್ಧಿಸುತ್ತಿದ್ದಾರೆ. ಸಚಿವ ಸುನಿಲ್ ಕುಮಾರ್ ವಿರೋಧಿಗಳು ಮುತಾಲಿಕ್‌ರನ್ನು ಬಲಿ ಕೊಡುತ್ತಿದ್ದಾರೆ ಎಂದು ಶ್ರೀರಾಮಸೇನೆ ಮಂಗಳೂರು ವಿಭಾಗೀಯ ಅಧ್ಯಕ್ಷ ಮೋಹನ್ ಭಟ್ ಆರೋಪಿಸಿದ್ದಾರೆ.

ಮಂಗಳೂರು, ಫೆಬ್ರವರಿ 11: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗ ಸ್ಪರ್ಧೆಸಲು ಮುಂದಾಗಿದ್ದ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಆರಂಭಿಕ ಹೊಡೆತ ಬಿದ್ದಿದೆ. ಶ್ರೀರಾಮಸೇನೆ ಸಂಘಟನೆಯೊಳಗೆ ಭಿನ್ನಮತ ಭುಗಿಲೆದ್ದಿದ್ದು, ಶ್ರೀರಾಮಸೇನೆ ಮಂಗಳೂರು ವಿಭಾಗದಿಂದ ಮುತಾಲಿಕ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ.

ಪ್ರಮೋದ್ ಮುತಾಲಿಕ್ ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಶ್ರೀರಾಮಸೇನೆ ಮಂಗಳೂರು ವಿಭಾಗೀಯ ಅಧ್ಯಕ್ಷ ಮೋಹನ್ ಭಟ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೋಹನ್ ಭಟ್, ಮುತಾಲಿಕ್ ಸ್ಪರ್ಧೆಯಿಂದ ಶ್ರೀರಾಮ ಸೇನೆ ಸಂಘಟನೆ ಒಡೆದು ಹೋಳಾಗುತ್ತಿದೆ. ಸೋಲುವ ಕಣದಲ್ಲಿ ಮುತಾಲಿಕ್ ಸ್ಪರ್ಧೆ ಯಾಕೆ..? ಚುನಾವಣಾ ಕಣಕ್ಕೆ ಇಳಿಯುವ ಮುನ್ನ ಮುತಾಲಿಕ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದಿಲ್ಲ. ಕಾರ್ಕಳದ ಓರ್ವ ಉದ್ಯಮಿ ಹಾಗೂ ವಕೀಲರ ಪ್ರಭಾವದಿಂದ ಮುತಾಲಿಕ್ ಸ್ಪರ್ಧಿಸುತ್ತಿದ್ದಾರೆ. ಸಚಿವ ಸುನಿಲ್ ಕುಮಾರ್ ವಿರೋಧಿಗಳು ಮುತಾಲಿಕ್‌ರನ್ನು ಬಲಿ ಕೊಡುತ್ತಿದ್ದಾರೆ ಎಂದು ಮೋಹನ್ ಭಟ್ ಆರೋಪಿಸಿದ್ದಾರೆ.

ಬಿಜೆಪಿ ಸಂಘ ಪರಿವಾರದ ಜೊತೆ ಮಾತನಾಡಿ ಗೆಲ್ಲುವ ಕ್ಷೇತ್ರದಿಂದ ಸ್ಪರ್ಧಿಸಬೇಕು. ಪ್ರಮೋದ್ ಮುತಾಲಿಕ್‌ರಿಗೆ ನಮ್ಮ ಬೆಂಬಲ ಇಲ್ಲ. ಶ್ರೀರಾಮ ಸೇನೆ ಸಂಘಟನೆಯಿಂದ ಪ್ರತ್ಯೇಕಗೊಂಡು ಬೇಕಾದರೆ ಸ್ಪರ್ಧಿಸಲಿ. ಪ್ರಮೋದ್ ಮುತಾಲಿಕ್ ನಮ್ಮ ಗುರುಗಳು ಅವರು ಸೋಲುವುದನ್ನು ನಾವು ಬಯಸುವುದಿಲ್ಲ. ಫೆಬ್ರವರಿ 20ರಂದು ಈ ಕುರಿತು ಚರ್ಚಿಸಲು ಕಾರ್ಯಕರ್ತರ ಬೈಠಕ್ ನಡೆಯಲಿದ್ದು,ಇನ್ನೂ ಕಾಲ ಮಿಂಚಿಲ್ಲ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವಂತೆ ಮೋಹನ್ ಭಟ್ ಒತ್ತಾಯಿಸಿದ್ದಾರೆ.

ಬಿಜೆಪಿಯನ್ನು ನಾವು ಹಿಂದುತ್ವದ ಪಕ್ಷ ಎಂದು ನಂಬಿದ್ದೇವೆ

ಬಿಜೆಪಿಯನ್ನು ನಾವು ಹಿಂದುತ್ವದ ಪಕ್ಷ ಎಂದು ನಂಬಿದ್ದೇವೆ

ರಾಜಕೀಯ ಪ್ರವೇಶದಿಂದ ಮುತಾಲಿಕ್ ಅವರಿಗೆ ಗೌರವ, ಪೂರಕ ಸ್ಥಾನ ಮಾನ ಸಿಕ್ಕಿದರೆ ಒಪ್ಪಿಗೆ ಇದೆ. ಆದರೆ ಮುತಾಲಿಕ್ ನನಗೆ ಇನ್ನು ಮುಂದೆ ರಾಜಕೀಯ ಬೇಡ ಎನ್ನುತ್ತಿದ್ದರು. ಕೇವಲ ಸಂಘಟನೆ ಮಾಡಿಕೊಂಡು ಇರುತ್ತೇನೆ ಎನ್ನುತ್ತಿದ್ದರು. ಈ ಬಾರಿ ವಿಧಾನಸೌಧ ಮೆಟ್ಟಿಲು ಏರಬೇಕು ಅನ್ನೋದು ನಮಗೂ ಆಸೆ ಇದೆ. ಆದರೆ ಕಾರ್ಕಳದಿಂದ ಸ್ಪರ್ಧಿಸಿ ಸಂಘಟನೆಯಲ್ಲಿ ಗೊಂದಲ ಉಂಟು ಮಾಡಿದ್ದಾರೆ. 20 ವರ್ಷ ಕಷ್ಟಪಟ್ಟು ಸಂಘಟನೆ ಕಟ್ಟಿದ್ದೇವೆ. ಸಂಘಟನೆ ಕಟ್ಟುತ್ತಾ ಬಂದಂತೆ ಕೆಲವರು ಹೊಡೆಯುತ್ತಾ ಹೋಗುತ್ತಾರೆ. ಮುತಾಲಿಕ್ ಸ್ಪರ್ಧೆಯಿಂದ ಕಾರ್ಯಕರ್ತರ ಒಳಗೆ ಗೊಂದಲ ಉಂಟಾಗಿದೆ. ಬಿಜೆಪಿಯನ್ನು ನಾವು ಹಿಂದುತ್ವದ ಪಕ್ಷ ಎಂದು ನಂಬಿದ್ದೇವೆ. ಕಾರ್ಕಳದಲ್ಲಿ ಮುತಾಲಿಕ್ ನಿಂತು ಕಾಂಗ್ರೆಸ್ಸಿಗೆ ಲಾಭ ಆಗೋದು ಬೇಡ. ಬಿಜೆಪಿ ಸಂಘ ಪರಿವಾರ ಇವರಿಗೆ ಸ್ಥಾನಮಾನ ಕೊಡಲು ಸಿದ್ಧವಿದೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕಿತ್ತು. ಕಾರ್ಯಕರ್ತರ ಜೊತೆ ಬೈಟಕ್ ಮಾಡದೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೋಹನ್ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ನಾಳೆ ಇವರ ಹಿಂದೆ ಹೋದವರ ಗತಿ ಏನು..?

ನಾಳೆ ಇವರ ಹಿಂದೆ ಹೋದವರ ಗತಿ ಏನು..?

ಮುತಾಲಿಕ್‌ ಕಾರ್ಕಳದಲ್ಲಿ ಏನು ಸರ್ವೇ ಮಾಡಿದ್ದಾರೆ.. ? ಕಾರ್ಕಳದ ಬಗ್ಗೆ ಏನು ಗೊತ್ತು?. ಸಚಿವರಿಗೆ ಆಗದ ವ್ಯಕ್ತಿಗಳು ಮುತಾಲಿಕರನ್ನು ಎತ್ತಿ ಕಟ್ಟಿದ್ದಾರೆ. ಕಾರ್ಯಕರ್ತರನ್ನು ಬಿಟ್ಟರೆ ಮುತಾಲಿಕ್ ಜೊತೆ ಯಾರಿದ್ದಾರೆ. ನಾಳಿನ ದಿನ ಇವರ ಹಿಂದೆ ಹೋದವರ ಗತಿ ಏನು. ಸಂಘಟನೆ ಮಾಡಿದಷ್ಟು ರಾಜಕೀಯ ಸುಲಭ ಅಲ್ಲ. ದುಡ್ಡು ಹಣ ವ್ಯವಸ್ಥೆ ಇದ್ದರೆ ಮಾತ್ರ ರಾಜಕೀಯ. ಸುನಿಲ್ ಕುಮಾರ್ ಅವರ ಪ್ರಭಾವದಿಂದ ನಾವು ಈ ರೀತಿ ಹೇಳುತ್ತಿಲ್ಲ ಎಂದು ಮೋಹನ್ ಸ್ಪಷ್ಟಪಡಿಸಿದ್ದಾರೆ.‌

ಮುತಾಲಿಕ್‌ ಈಗ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಇದೆಯಾ..!

ಮುತಾಲಿಕ್‌ ಈಗ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಇದೆಯಾ..!

ಮಂಗಳೂರು ವಿಭಾಗ ನನ್ನ ಜವಾಬ್ದಾರಿ. ಉಡುಪಿ, ಮಂಗಳೂರು ಉತ್ತರ ಕನ್ನಡ ಸಹಿತ ನಾಲ್ಕು ಜಿಲ್ಲೆ ನನ್ನ ಜವಾಬ್ದಾರಿ. ನನಗೆ ಬಿಜೆಪಿಯ ಚಿಂತೆ ಇಲ್ಲ ನನ್ನ ಕಾರ್ಯಕರ್ತರ ಚಿಂತೆ ಇದೆ. ನಮ್ಮ ಕಾರ್ಯಕರ್ತರು ಬೀದಿಗೆ ಬೀಳದಂತೆ ನಾನು ಎಚ್ಚರಿಕೆವಹಿಸಬೇಕಾಗಿದೆ. ಸಂಘ ಪರಿವಾರಕ್ಕೆ ಮನವಿ ಕೊಟ್ಟು ಮಾತನಾಡೋಣ. ಮುತಾಲಿಕರಿಗೆ ಈಗ 68 ವರ್ಷ ವಯಸ್ಸು. ಈಗ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಉಂಟಾ. ಇಷ್ಟರವರೆಗೆ ಸಂಪಾದಿಸಿದ ಹೆಸರು ಸಂಘಟನೆ ಎಲ್ಲಾ ಮುರಿದು ಬೀಳುತ್ತದೆ‌.ಕಾರ್ಯಕರ್ತರು ಕೈ ಬಿಟ್ಟು ಹೋಗುತ್ತಾರೆ ಯಾವ ಪುರುಷಾರ್ಥಕ್ಕೆ ಈ ಸ್ಪರ್ಧೆ? ಉದ್ಯಮಿ ವಿವೇಕಾನಂದ ಶೆಣೈ ಹಾಗೂ ವಕೀಲ ಹರೀಶ್ ಅಧಿಕಾರಿ ಈ ಇಬ್ಬರಿಗೆ ಸಚಿವ ಸುನಿಲ್ ಮೇಲೆ ವೈಯುಕ್ತಿಕ ದ್ವೇಷ ಇದೆ..ಅವರ ದ್ವೇಶ ಸಾಧನೆಗೋಸ್ಕರ ಮುತಾಲಿಕರಂತ ವ್ಯಕ್ತಿಯನ್ನು ಬಲಿಕೊಡುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದರು.

 ಎರಡು ತಿಂಗಳ ಹಿಂದೆ ನನ್ನ ಮನೆಯಲ್ಲಿ ಚರ್ಚೆಯಾಗಿತ್ತು

ಎರಡು ತಿಂಗಳ ಹಿಂದೆ ನನ್ನ ಮನೆಯಲ್ಲಿ ಚರ್ಚೆಯಾಗಿತ್ತು

ಯಾರು, ದ್ವೇಷ ಸಾಧನೆ ಮಾಡುತ್ತಿದ್ದಾರೋ ಅವರೇ ಚುನಾವಣೆಗೆ ನಿಲ್ಲಬಹುದಿತ್ತು. ಕಾರ್ಕಳದ ಇಬ್ಬರು ವ್ಯಕ್ತಿಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಮುತಾಲಿಕರನ್ನು ಎತ್ತಿ ಕಟ್ಟಿದ್ದಾರೆ. ಈ ಬಗ್ಗೆ ಎರಡು ತಿಂಗಳ ಹಿಂದೆ ನನ್ನ ಮನೆಯಲ್ಲಿ ಚರ್ಚೆಯಾಗಿತ್ತು. ಹಲವು ಹಿಂದೂ ಸಂಘಟನೆಗಳ ಪ್ರಮುಖರು ಕೂಡ ಬಂದಿದ್ದರು. ಆ ವ್ಯಕ್ತಿಗಳ ಜೊತೆ ಸೇರಬೇಡಿ ಅವರ ವ್ಯಕ್ತಿತ್ಚ ಸರಿಯಿಲ್ಲ ಎಂದು ಎಲ್ಲರೂ ಬುದ್ಧಿವಾದ ಹೇಳಿದ್ದರು. ಈಗ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ಕಟ್ಟಿಕೊಂಡಿದ್ದಾರೆ. ಹಾಗಾದರೆ ಶ್ರೀರಾಮ ಸೇನೆ ಸಂಘಟನೆ ಕಾರ್ಯಕರ್ತರು ಬೇಡವಾ. ಶ್ರೀರಾಮ ಸೇನೆಗೆ ಒಳ್ಳೆಯ ಹೆಸರಿದೆ ಕಾರ್ಯಕರ್ತರು ಇದ್ದಾರೆ. ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡುವುದಕ್ಕೆ ನಮ್ಮ ವಿರೋಧ ಇದೆ‌‌. ಆದರೆ ಕಾರ್ಕಳ ಸ್ಥಾನವನ್ನು ಬಿಜೆಪಿಯವರು ಮುತಾಲಿಕರಿಗೆ ಬಿಟ್ಟುಕೊಟ್ಟರೆ ಸಹಮತ ಇದೆ ಎಂದು ಶ್ರೀರಾಮಸೇನೆ ಮಂಗಳೂರು ವಿಭಾಗೀಯ ಅಧ್ಯಕ್ಷ ಮೋಹನ್ ಭಟ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+