Mangaluru: ಮಂಗಳೂರು ಮಸಾಜ್ ಸೆಂಟರ್ ಮೇಲೆ ಶ್ರೀ ರಾಮಸೇನೆ ದಾಳಿ
ಮಂಗಳೂರು ಜನವರಿ 23: ಮಸಾಜ್ ಸೆಂಟರ್ ಮೇಲೆ ಶ್ರೀ ರಾಮ ಸೇನೆಯ ಗುಂಪು ದಾಳಿ ಮಾಡಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ. 25 ಜನರ ಗುಂಪು ಮಸಾಜ್ ಸೆಂಟರ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪ ಹೋರಿಸಿ ದಾಳಿ ಮಾಡಿದೆ. ದಾಳಿಯಲ್ಲಿ ಮಸಾಜ್ ಸೆಂಟರ್ನ ಪೀಠೋಪಕರಣಗಳನ್ನು ಧ್ವಂಸ ಮಾಡಲಾಗಿದೆ.
ಮಂಗಳೂರಿನ ಬಿಜೈ ಕೆಎಸ್ಆರ್ಟಿಸಿ ನಿಲ್ದಾಣ ಬಳಿ ಇರುವ ಕಲರ್ಸ್ ಮಸಾಜ್ ಸೆಂಟರ್ ಮೇಲೆ ಶ್ರೀ ರಾಮ ಸೇನೆಯ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಮಸಾಜ್ ಸೆಂಟರ್ಗೆ ನುಗ್ಗಿ ಪೀಠೋಪಕರಣಗಳನ್ನು ದ್ವಂಸ ಮಾಡಿ ಕಾನೂನು ಕೈಗೆತ್ತುಕೊಂಡಿದ್ದಾರೆ. ಜೊತೆಗೆ ಮಸಾಜ್ ಸೆಂಟರ್ನಲ್ಲಿ ಇದ್ದ ಇಬ್ಬರು ಯುವತಿಯರನ್ನು ತರಾಟೆ ತೆಗೆದುಕೊಂಡ ಗುಂಪು ಯುವತಿಯರು ಕೈ ಮುಗಿದು ಬೇಡಿಕೊಂಡರು ಬಿಡದೆ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.

ಈ ಹಿಂದೆ ಇದೇ ರೀತಿ ಪಬ್ ಮೇಲೆ ದಾಳಿ ಮಾಡಲಾಗಿತ್ತು. ಇದೀಗ ಮಂಗಳೂರಿನ ಮಸಾಜ್ ಸೆಂಟರ್ನಲ್ಲಿ ದಾಳಿ ಮಾಡಲಾಗಿದ್ದು ಕಾನೂನು ಕ್ರಮ ಜರಿಗಿಸಲು ಒತ್ತಾಯ ಹೆಚ್ಚಾಗಿದೆ. ಘಟನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಗೃಹ ಸಚಿವ ಪರಮೇಶ್ವರ್ ಅವರು ಉಡುಪಿಯಲ್ಲಿ ಇರುವಾಗ ಈ ದಾಳಿ ನಡೆದಿದೆ. ಘಟನೆಯ ಬಗ್ಗೆ ಉಡುಪಿಯಲ್ಲಿ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇದನ್ನು ಯಾವ ಉದ್ದೇಶಕ್ಕಾಗಿ ಮಾಡಿದ್ದಾರೆ ಗೊತ್ತಿಲ್ಲ. ಅವರನ್ನು ಅರೆಸ್ಟ್ ಮಾಡಿ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಅವರವರ ಕೆಲಸ ಮಾಡಲು ಅವರಿಗೆ ಹಕ್ಕಿದೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ದೂರು ಕೊಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಳ್ಳಬಾರದು. ತಕ್ಷಣ ಅವರನ್ನು ಅರೆಸ್ಟ್ ಮಾಡಿ ಕ್ರಮಕ್ಕೆ ಸೂಚಿಸಿದ್ದೇನೆ' ಎಂದು ಹೇಳಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications