'ದೇವಾಲಯದ ಹೊರಗಿನ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಟೀಕೆ ಸರಿಯಲ್ಲ'
ಮಂಗಳೂರು, ಆಗಸ್ಟ್ 03: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠ, ದೇವಸ್ಥಾನ ಹಾಗೂ ಭಕ್ತರ ನಡುವೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಹಸ್ತಕ್ಷೇಪ ಮಾಡಬಾರು ಎಂದು ಕನ್ಯಾನ ಬಾಳೆಕೋಡಿಯ ಮಠದ ಶ್ರೀ ಶಶಿಕಾಂತ ಮಣಿಸ್ವಾಮಿ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಹೊರಗೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಆಕ್ಷೇಪಿಸುತ್ತಿರುವುದು ಸರಿಯಲ್ಲ.
ಧಾರ್ಮಿಕ ದತ್ತಿ ಇಲಾಖೆಯ ನಿಯಮಾನುಸಾರವೇ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ದೇವಾಲಯದ ಹೊರಗೆ ನಡೆಯುವ ಕಾರ್ಯಕ್ರಮಗಳಿಗೆ ದೇವಾಲಯದ ಆಡಳಿತ ಮಂಡಳಿ ಹಾಗು ಧಾರ್ಮಿಕ ದತ್ತಿ ಇಲಾಖೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು.

ದೇವಾಲಯದ ಹೊರಗೆ ನಡೆಯುವ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಆಕ್ಷೇಪ, ಟೀಕೆ ಸರಿಯಲ್ಲ ಎಂದು ಹೇಳಿದ ಅವರು ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಟ್ಟ ದೇವಸ್ಥಾನದಲ್ಲಿ ಯಾವುದೇ ಸೇವೆಗೆ ಭಕ್ತರು ಅಡ್ಡಿಪಡಿಸಿಲ್ಲ.
ಹೊರಗೆ ಭಕ್ತರ ಇಷ್ಟಪ್ರಕಾರ ನಾಗಪ್ರತಿಷ್ಠೆ, ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ನಡೆಯುತ್ತವೆ. ಈ ಸೇವೆಗಳು ದೇವಸ್ಥಾನ ವತಿಯಿಂದಲೂ ನಡೆಯುತ್ತಿದೆ. ಇದು ಭಕ್ತರ ಇಚ್ಛೆಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಅವರು ಆಭಿಪ್ರಾಯಪಟ್ಟರು .
ಆದರೆ ದೇವಸ್ಥಾನದ ಆಡಳಿತ ಮಂಡಳಿಯ ಕೆಲವು ಸದಸ್ಯರು ಹಾಗೂ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ವಿನಾ ಕಾರಣ ಭಕ್ತರ ಹಾಗೂ ಮಠದ ವಿಚಾರದಲ್ಲಿ ಮೂಗುತೂರಿಸುತ್ತಿದೆ ಎಂದು ಅವರು ಆರೋಪಿಸಿದರು.
ಶ್ರೀ ಕ್ಷೇತ್ರದ ಮಠ ಹಾಗೂ ಮೂಲ ನಿವಾಸಿಗಳಾದ ಮಲೆಕುಡಿಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಬಾರದು ಎಂದು ಹೇಳಿದ ಅವರು ನಾನು ಕೂಡ ದಲಿತ ಸಮುದಾಯದಿಂದ ಬಂದ ಸ್ವಾಮೀಜಿ. ನಮ್ಮವರ ಕಟ್ಟುಪಾಡುಗಳಿಗೆ ದೇವಸ್ಥಾನದಿಂದ ತೊಂದರೆಯಾಗಬಾರದು ಎಂದು ಸ್ವಾಮೀಜಿ ಹೇಳಿದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications