ಮಂಗಳೂರು : ಬ್ಯಾಡ್ಮಿಂಟನ್ ಪಂದ್ಯಾವಳಿ ಲೂರ್ಡ್ಸ್ ಸೆಂಟ್ರಲ್ ಶಾಲೆ ಪ್ರಥಮ
ಮಂಗಳೂರು, ಅ.22 : ನಗರದ ಲೂರ್ಡ್ಸ್ ಸೆಂಟ್ರಲ್ ಶಾಲಾ ಬಾಲಕಿಯರ ತಂಡ ಅಂತರ್ ಜಿಲ್ಲಾ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ನಗರದ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ 14ರ ವಯೋಮಿತಿಯ ಪಂದ್ಯಾವಳಿಯಲ್ಲಿ ಶಾಲಾ ತಂಡ ಈ ಸಾಧನೆ ಮಾಡಿದೆ. ಅದೇ ರೀತಿ ಎಸ್.ಎಂ.ಎಸ್. ಶಾಲೆ ಬ್ರಹ್ಮಾವರ ಇವರು ಅಯೋಜಿಸಿದ್ದ 17ರ ವಯೋಮಿತಿಯ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದಿದೆ

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ್ ದೇವಾಡಿಗ ಇವರ ಮಾರ್ಗದರ್ಶನದಲ್ಲಿ ಎರಡು ವಿಭಾಗದ ತಂಡಗಳು ಈ ಸಾಧನೆ ಮಾಡಿರುತ್ತಾರೆ. ವಿಜೇತ ತಂಡದ ಸದಸ್ಯರಿಗೆ ಶಾಲಾ ಸಂಚಾಲಕ ಫಾ. ವಿಲ್ಸನ್ ವೈಟಸ್ ಡಿಸೋಜ ಹಾಗೂ ಪ್ರಾಂಶುಪಾಲರಾದ ಫಾ. ರೋಬರ್ಟ್ ಡಿಸೋಜ ಅಭಿನಂದನೆ ಸಲ್ಲಿಸಿದ್ದಾರೆ.
ಒನ್ ಇಂಡಿಯಾ ಕನ್ನಡ ಜೊತೆ ಮಾತನಾಡಿದ ಪ್ರಾಂಶುಪಾಲರಾದ ಫಾದರ್ ರಾಬರ್ಟ್ ಡಿಸೋಜಾ, 'ಮಕ್ಕಳ ಶ್ರಮ ಹಾಗೂ ಸಾಧನೆಗೆ ಅವರನ್ನು ನಾನು ಅಭಿನಂದಿಸುತ್ತೇನೆ. ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕ ವಿಶ್ವನಾಥ್ ದೇವಡಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದು ಹೇಳಿದರು.
'ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮಾತ್ರವಲ್ಲದೇ ಕ್ರೀಡೆಗಳಲ್ಲೂ ಹೆಚ್ಚಿನ ಆಸಕ್ತಿ ತೋರಿಸಿದಲ್ಲಿ ನಮ್ಮ ದೇಶಕ್ಕೆ ಒಳ್ಳೆಯ ಕ್ರೀಡಾಪಟು ಸಿಗುವುದಲ್ಲ ಸಂದೇಹವೇ ಇಲ್ಲ' ಎಂದು ಫಾದರ್ ರಾಬರ್ಟ್ ಡಿಸೋಜಾ ತಿಳಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications