ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಕೇಸ್: ಪ್ರಚೋದನಕಾರಿ ಘೋಷಣೆಯೇ ಘಟನೆಗೆ ಕಾರಣ
ಮಂಗಳೂರು, ಜೂನ್ 13: ಮಂಗಳೂರು ನಗರದ ಬೋಳಿಯಾರುವಿನಲ್ಲಿ ವಿಜಯೋತ್ಸವದ ಬಳಿಕ ನಡೆದ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ನಡೆದ ಚೂರಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ.
ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) , ಅಬೂಬಕರ್ ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತ ಆರೋಪಿಗಳು ಎಂದು ಅವರು ತಿಳಿಸಿದ್ದಾರೆ.

ಸಿ.ಸಿ ಟಿವಿ ವಿಡಿಯೋ ಆಧಾರದಲ್ಲಿ 20 ಜನರನ್ನು ವಶಕ್ಕೆ ಪಡೆದಿದ್ದೆವು. ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಮೂರು ತಂಡದ ಮೂಲಕ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮೆರವಣಿಗೆ ನಂತರ ಮೂರು ಮಂದಿ ಮಸೀದಿ ಮುಂದೆ ಘೋಷಣೆ ಕೂಗಿದ್ದಾರೆ. ನಂತರ ಅವರಿಗೆ ಹಲ್ಲೆ ನಡೆಸಲಾಗಿದೆ. ಆರೋಪಿಯಲ್ಲಿ ಒಬ್ಬ ರೌಡಿ ಶೀಟರ್ ಇದ್ದ, ಆತ ಚೂರಿ ಇಟ್ಟುಕೊಂಡಿದ್ದ. ಭಾರತ್ ಮಾತ ಕೀ ಜೈ ಎನ್ನುವ ಘೋಷಣೆಗೂ ಮೊದಲು ಬೇರೆ ಪ್ರಚೋದನಾಕಾರಿ ಘೋಷಣೆ ಕೂಗಿದ್ದರು ಎಂದರು.
ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ ಶಾಂತಿ ಸಭೆ ನಡೆಸುತ್ತೇವೆ. ಎಲ್ಲ ಧರ್ಮದ ಪ್ರಮುಖರನ್ನು ಕರೆದು ಶಾಂತಿ ಸಭೆ ನಡೆಸುತ್ತೇವೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದೇವೆ ಎಂದು ಹೇಳಿದರು.

ರವಿವಾರ ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮಸೀದಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರಚೋದನಕಾರಿ ಘೋಷಣೆ ಕೂಗಿದ್ದರು. ಇದರಿಂದ ಆಕ್ರೋಶಗೊಂಡ ಯುವಕರ ತಂಡ ಇಬ್ಬರಿಗೆ ಚೂರಿಯಿಂದ ಇರಿದಿದೆ. ರಾತ್ರಿ 9 ಗಂಟೆಗೆ ಚೂರಿ ಇರಿತದ ವಿಚಾರ ತಿಳಿಯುತ್ತಿದ್ದಂತೆ ಬೋಳಿಯಾರಿನಲ್ಲಿ ಎರಡೂ ಕೋಮಿನವರು ಸೇರಿದ್ದಾರೆ. ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದರು.
ಇದರ ಜೊತೆಗೆ ಬೋಳಿಯಾರು ಜುಮ್ಮಾ ಮಸೀದಿ ಕಮಿಟಿಯ ಅಧ್ಯಕ್ಷ ಪಿ.ಕೆ ಅಬ್ದುಲ್ಲಾ ನೀಡಿರುವ ದೂರಿನಂತೆ ಕೊಣಾಜೆ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ಬಳಿಕ ಕೆಲವು ಕಾರ್ಯಕರ್ತರು ಮಸೀದಿ ಮುಂಭಾಗದಲ್ಲಿ ಪ್ರಚೋದನಕಾರಿ ಘೋಷಣೆ ಕೂಗಿದ್ದರು. ಆ ಮೂಲಕ ಅಲ್ಲಿದ್ದ ಮುಸ್ಲಿಂ ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications