ಮಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸರ್ಕಾರದ ನಿರ್ಲಕ್ಷ್ಯ ಕಾರಣ– ವೇದವ್ಯಾಸ್ ಕಾಮತ್
ಮಂಗಳೂರು, ಜುಲೈ 8: ಐದು ವರ್ಷ ಮಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವೇ ಅಧಿಕಾರದಲ್ಲಿದ್ದರೂ ಮಂಗಳೂರಿನ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಂಬೆಯಿಂದ ಮಂಗಳೂರು ನಗರಕ್ಕೆ ಬರುವ ಪಡೀಲ್ ಮತ್ತು ಬೆಂದೂರ್ ವೆಲ್ ನ ಕುಡಿಯುವ ನೀರು ಸಂಗ್ರಹಣಾಗಾರದಲ್ಲಿ ಶೇಖರಣೆಗೊಂಡು ನಂತರ ಅಲ್ಲಿಂದ ಪಂಪ್ ಆಗಿ ವಿವಿಧೆಡೆ ಪೂರೈಕೆಯಾಗುತ್ತದೆ. ಆದರೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಾಗ ಅಲ್ಲಿಂದ ನೀರು ಪಂಪ್ ಆಗುವುದಿಲ್ಲ. ಇದರಿಂದ ಮಂಗಳೂರು ಮಹಾನಗರ ಪಾಲಿಕೆಯ ವಾರ್ಡುಗಳಿಗೆ ನೀರು ಪೂರೈಕೆ ಆಗದೆ ಜನರು ಸಮಸ್ಯೆ ಅನುಭವಿಸುತ್ತಾರೆ. ಇದನ್ನು ಗಮನಿಸಬೇಕಾದ್ದು ಇತ್ತೀಚಿನ ತನಕ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್. ಕಾಂಗ್ರೆಸ್ ನ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿತ್ತು. ಆದರೆ ಹಾಗೆ ಮಾಡದ ಪರಿಣಾಮ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ಕಿಡಿಕಾರಿದರು.
ಮಿದ್ಯುತ್ ಸಮಸ್ಯೆಯ ನೆಪವೊಡ್ಡಿ ಮಹಾನಗರ ಪಾಲಿಕೆಯು ಸಮರ್ಪಕವಾಗಿ ನೀರು ಪೂರೈಸಲು ಮನಸ್ಸು ಮಾಡುತ್ತಿಲ್ಲ. ಸದ್ಯ ಮೈತ್ರಿ ಸರ್ಕಾರದ ಎರಡೂ ಪಕ್ಷಗಳು ಸರ್ಕಾರ ಉಳಿಸಲು ಒದ್ದಾಡುತ್ತಿರುವುದರಿಂದ ಅವರಿಗೆ ನಾಗರಿಕರ ತೊಂದರೆ ಕಾಣಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನೀಡುವ ಅನುದಾನ ಬಳಸಿ ಪರ್ಯಾಯ ವ್ಯವಸ್ಥೆ ಮಾಡಬಹುದಿತ್ತು. ಆದರೆ ಅದನ್ನೂ ಪ್ರಯತ್ನಿಸದೆ ನಿರ್ಲಕ್ಷ್ಯ ವಹಿಸಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ. ಮಳೆಗಾಲದಲ್ಲಿಯೇ ಜನರಿಗೆ ನೀರಿನ ಕೊರತೆ ಉಂಟಾದರೆ ಇನ್ನು ಬೇಸಿಗೆಯ ಪರಿಸ್ಥಿತಿ ಹೇಗಿರಬಹುದು ಎನ್ನುವ ಆತಂಕವಿದೆ. ಜನರ ತೆರಿಗೆಯ ಹಣವನ್ನು ಪೋಲು ಮಾಡಿದ ರಾಜ್ಯ ಸರ್ಕಾರ ಮತ್ತು ಮಹಾನಗರ ಪಾಲಿಕೆಯಿಂದ ಜನ ಬೇರೇನು ನಿರೀಕ್ಷಿಸಲು ಸಾಧ್ಯ ಎಂದಿದ್ದಾರೆ ಕಾಮತ್. ತಾವು ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿಯೂ ತಿಳಿಸಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications