ಮಹಿಳಾ ದೌರ್ಜನ್ಯ ವಿಚಾರಣೆಗೆ 10 ತ್ವರಿತ ನ್ಯಾಯಾಲಯ
ಮಂಗಳೂರು, ನ. 25: ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು 10 ತ್ವರಿತ ವಿಚಾರಣಾ ನ್ಯಾಯಾಲಯಗಳನ್ನು ಸ್ಥಾಪಿಸಲು ಯೋಚಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಮಂಗಳೂರಿನ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಮಂಗಳವಾರ ಕರಾವಳಿ ಕಾವಲು ಪೊಲೀಸ್ ಆಡಳಿತ ಕಚೇರಿ ಉದ್ಘಾಟಿಸಿ ಅವರು ಈ ಮಾಹಿತಿ ನೀಡಿದರು. [ಮಹಿಳಾ ಆಯೋಗ ಪುರುಷರ ಕುರಿತೂ ಚಿಂತಿಸಲಿ]
ಈ ಕುರಿತು ಸರ್ಕಾರ ಈಗಾಗಲೇ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ. ಮೂರು ತ್ವರಿತ ನ್ಯಾಯಾಲಯಗಳ ಸ್ಥಾಪನೆಗೆ ಒಪ್ಪಿಗೆ ಸಿಕ್ಕಿದೆ. ಈ ನ್ಯಾಯಾಲಯಗಳಿಗೆ ಶೀಘ್ರ ನ್ಯಾಯಾಧೀಶರನ್ನು ನೇಮಿಸಬೇಕೆಂದು ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳನ್ನು ಕೋರಲಾಗಿದೆ ಎಂದು ತಿಳಿಸಿದರು.
ರಾಜ್ಯದ ಜನರಲ್ಲಿ ಜಾಗೃತಿ ಹೆಚ್ಚುತ್ತಿರುವ ಕಾರಣ ದೌರ್ಜನ್ಯ ಪ್ರಕರಣಗಳೂ ಹೆಚ್ಚುತ್ತಿದೆ. ಮಹಿಳೆ ಮತ್ತು ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ಕುರಿತು ಶೀಘ್ರ ಸ್ಪಂದಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದರು. [ಮಹಿಳಾ ಘಟಕದಲ್ಲಿರುವ ವಿಶೇಷ ಸೌಲಭ್ಯವೇನು]

ಸಮಿತಿ ನೇಮಕ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸೂಕ್ತ ಸಲಹೆ ನೀಡಲು ಮಾಜಿ ಸಚಿವ ಎಂ.ಸಿ. ನಾಣಯ್ಯ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರು ಹೇಳಿದರು.
ಕರಾವಳಿಯಲ್ಲಿ ಉಗ್ರರ ಭೀತಿ: ಕರ್ನಾಟಕ ರಾಜ್ಯವು 360 ಕಿ.ಮೀ.ಗಳಷ್ಟು ದೂರದ ಕರಾವಳಿ ಪ್ರದೇಶ ಹೊಂದಿದೆ. ಇಲ್ಲಿ ಉಗ್ರರು ನುಸುಳದಂತೆ ನಿಗ್ರಹಿಸುವುದು ಅತ್ಯಂತ ಮುಖ್ಯ ವಿಷಯ. ಆದ್ದರಿಂದಲೇ ರಾಜ್ಯ ಸರ್ಕಾರ ಕರಾವಳಿ ಕಾವಲು ಪೊಲೀಸ್ ಪಡೆ ರಚಿಸಿದೆ ಎಂದು ತಿಳಿಸಿದರು. [ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ತ್ವರಿತಗತಿ ನ್ಯಾಯಾಲಯ]
ಇದೇ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ವಿನಯಕುಮಾರ ಸೊರಕೆ ಪೊಲೀಸ್ ಸಿಬ್ಬಂದಿ ವಸತಿ ಗೃಹಗಳನ್ನು ಉದ್ಘಾಟಿಸಿದರು.
ಬಿಜೆಪಿ ಮುತ್ತಿಗೆ-ರಾಜೀನಾಮೆಗೆ ಆಗ್ರಹ: ರಾಜ್ಯದಲ್ಲಿ ನಡೆದಿರುವ ಸರ್ಕಾರಿ ಭೂ ಕಬಳಿಕೆ ಪ್ರಕರಣಗಳಿಗೆ ಸಂಬಂಧಿಸಿ ಗೃಹ ಸಚಿವ ಕೆ.ಜೆ. ಜಾರ್ಜ್, ಸಚಿವರಾದ ಮಹಾದೇವ ಪ್ರಸಾದ್, ದಿನೇಶ್ ಗುಂಡೂರಾವ್ ಹಾಗೂ ಖಮರುಲ್ ಇಸ್ಲಾಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಪ್ರತಿಭಟಿಸಿದೆ. [ಭೂ ಇಕ್ಕಟ್ಟಿನಲ್ಲಿ ದಿನೇಶ ಗುಂಡೂರಾವ್]
ಮಂಗಳೂರಿನ ಮಲ್ಪೆ ಬಂದರಿನಲ್ಲಿ ಕರಾವಳಿ ತಟ ರಕ್ಷಣಾ ಪಡೆಯ ಕಚೇರಿ ಉದ್ಘಾಟೆನೆಗೆ ಆಗಮಿಸಿದ್ದ ಕೆ.ಜೆ. ಜಾರ್ಜ್ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದರು.
ಬಿಜೆಪಿ ಕಾರ್ಯಕರ್ತರಾದ ಯಶ್ ಪಾಲ್ ಸುವರ್ಣ, ಗ್ಲಾಡಿಸ್ ಆಲ್ಮೇಡಾ ಹಾಗೂ ಇತರರು ಇದ್ದ ತಂಡ ಕಪ್ಪು ಧ್ವಜ ಪ್ರದರ್ಶಿಸಿತು. ಆಗ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಬಿಜೆಪಿಯ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications