ಮಗುವಿನ ಫೋಟೋ ಮುಂದಿಟ್ಟು ಕಿರುಕುಳ: ಲೋನ್ ಆ್ಯಪ್ ಕಾಟಕ್ಕೆ ರಾಜ್ಯ ಮಟ್ಟದ ಕಬ್ಬಡಿ ಆಟಗಾರ ಬಲಿ
ಮಂಗಳೂರು, ಸೆಪ್ಟೆಂಬರ್ 01: ಲೋನ್ ಆ್ಯಪ್ ಕಿರುಕುಳಕ್ಕೆ ರಾಜ್ಯ ಮಟ್ಟದ ಪ್ರತಿಭಾನ್ವಿತ ಕಬ್ಬಡಿ ಆಟಗಾರ ಬಲಿಯಾಗಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಲೋನ್ ಆ್ಯಪ್ ಸಿಬ್ಬಂದಿಯ ನಿರಂತರ ಕಿರುಕುಳ ಮತ್ತು ಬೆದರಿಕೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ನಿವಾಸಿ ಸ್ವರಾಜ್(24) ಸಾವಿಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ.
ಸ್ವರಾಜ್ ಲೋನ್ ಆ್ಯಪ್ ನಿಂದ ಮೂವತ್ತು ಸಾವಿರ ರೂಪಾಯಿ ಲೋನ್ ಪಡೆದುಕೊಂಡಿದ್ದು, ಆಗಸ್ಟ್ 30ರಂದು ಮೂವತ್ತು ಸಾವಿರ ರೂಪಾಯಿ ಮರು ಪಾವತಿ ಮಾಡಿದ್ದರು. ಆದರೆ ಮತ್ತೂ ಲೋನ್ ಹಣ ಬಾಕಿ ಎಂದು ಸಿಬ್ಬಂದಿ ನಿರಂತರ ಕಾಲ್ ಮಾಡಿ ಕಿರುಕುಳ ನೀಡಿದ್ದಾರೆ.

ಸ್ವರಾಜದ ವಾಟ್ಸಾಪ್ನಲ್ಲಿ ಅಕ್ಕನ ಮಗಳ ಫೋಟೊ ಹಾಕಿದ್ದು, ಈ ಫೋಟೋವನ್ನು 'Baby for sale' ಅಂತಾ ಎಡಿಟ್ ಮಾಡಿ ಲೋನ್ ಆ್ಯಪ್ ಸಿಬ್ಬಂದಿ ಸ್ವರಾಜ್ನ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದಾರೆ. ಸ್ವರಾಜ್ನ ಕಾಂಟಾಕ್ಟ್ ಲಿಸ್ಟ್ ವೀವ್ ಮಾಡುತ್ತಿದ್ದ ಆಪ್ ಮಾಡಿರುವ ಆ್ಯಪ್ ಸಿಬ್ಬಂದಿ ಸ್ವರಾಜ್ನ ಸಾಲ ಬಾಕಿ ಇದೆ ಎಂದೂ ಸ್ನೇಹಿತರಿಗೆ ಮೆಸೇಜ್ ಕಳುಹಿಸಿದ್ದಾರೆ.
ಲೋನ್ ಆ್ಯಪ್ ಸಿಬ್ಬಂದಿಯ ನಿರಂತರ ಕಿರುಕುಳ ಬೆದರಿಕೆ ತಾಳಲಾರದೆ ಸ್ವರಾಜ್ ಆಗಸ್ಟ್ 31 ರಂದು ತಮ್ಮ ಹಳೆಯ ಮನೆಯ ಬಚ್ಚಲು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋನ್ ಆ್ಯಪ್ ಸಿಬ್ಬಂದಿ ಆಗಸ್ಟ್ 31ರ ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿದ್ದು. ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications