ಸೂಲಿಬೆಲೆ ವಿರುದ್ಧ ಹೇಳಿಕೆ; ರಮಾನಾಥ್ ರೈಗೆ ಸಮನ್ಸ್
ಮಂಗಳೂರು, ಜೂನ್ 15:ಯುವ ಬ್ರಿಗೇಡ್ ಮಾರ್ಗದರ್ಶಕ ಹಾಗು ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮಾನಾಥ್ ರೈ ಅವರಿಗೆ ಸಂಕಷ್ಟ ಎದುರಾಗಿದೆ.
ಮಂಗಳೂರಿನ ಜೆಎಂಎಫ್ ಸಿ ಕೋರ್ಟ್ ರಮಾನಾಥ್ ರೈ ವಿರುದ್ಧ ಆದೇಶ ಹೊರಡಿಸಿದೆ. ಮಾನನಷ್ಟ ಹಾಗೂ ಅವಹೇಳನಕಾರಿ ಭಾಷೆ ಪ್ರಯೋಗದ ಕಾರಣ ಐಪಿಸಿ ಸೆಕ್ಷನ್ 500 ಹಾಗೂ 504ರ ಪ್ರಕಾರ ಸಮನ್ಸ್ ಜಾರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ರಮನಾಥ ರೈ, ಮಂಗಳೂರು ಹೊರವಲಯದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಂಕಣಕಾರ ಹಾಗು ಯುವ ಬ್ರಿಗೇಡ್ ಇದರ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಹಾಗೂ ಮಾನಹಾನಿ ಪದ ಬಳಕೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಆ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆ ಸಮಯದಲ್ಲಿ ಅಂದಿನ ಸಚಿವರಾಗಿದ್ದ ರಮಾನಾಥ ರೈ ಅವರ ವಿರುದ್ಧ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ಮಾಜಿ ಸಚಿವ ರಮಾನಾಥ ರೈ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಮಾನನಷ್ಟ ಹಾಗೂ ಅವಹೇಳನಕಾರಿ ಭಾಷೆ ಪ್ರಯೋಗದ ಅಪರಾಧಗಳಿಗೆ ಐಪಿಸಿ ಸೆಕ್ಷನ್ 500 ಹಾಗೂ 504ರ ಪ್ರಕಾರ ಸಮನ್ಸ್ ಜಾರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications