Get Updates
Get notified of breaking news, exclusive insights, and must-see stories!

ಬಿಜೆಪಿ ವಿಜಯೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ, ನಾಲ್ವರಿಗೆ ಗಾಯ

ಮಂಗಳೂರು ಮೇ 16 : ಚುನಾವಣೆಯ ಮತ ಎಣಿಕೆಯ ಬಳಿಕ ಮಂಗಳೂರಿನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ನಿನ್ನೆ ಭಾರೀ ಜಯದಾಖಲಿದ್ದ ಬಿಜೆಪಿ ವಿಜಯೋತ್ಸವದ ವೇಳೆ ಮಂಗಳೂರು ಹೊರವಲದಲ್ಲಿ ಕಲ್ಲುತೂರಾಟ ನಡೆದಿದೆ.

ಮಂಗಳೂರಿನ ಹೊರವಲಯ ಅಡ್ಯಾರ್‌ನಲ್ಲಿ ಈ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಅಡ್ಯಾರ್ ಪದವು ಬಳಿ ಈ ಘಟನೆ ನಡೆದಿದ್ದು, ಕಿಡಿಗೇಡಿ ಯುವಕರ ತಂಡ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ಹಾಗು ತಲವಾರಿನಿಂದ ದಾಳಿ ಮಾಡಿದ್ದಾರೆ.

ಘಟನೆಯಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ‌ಗಂಭೀರ ಗಾಯಗಳಾಗಿವೆ. ಸುಮಾರು 100 ಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ದುಷ್ಕರ್ಮಿಗಳ ತಂಡ ಈ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

Stone pelting during BJP victory procession

ಘಟನೆಯ ಸಂದರ್ಭ ರಸ್ತೆಬದಿಯ ಮನೆ , ಅಂಗಡಿ , ವಾಹನ ಗಳ ಮೇಲೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರಸ್ತೆಯಲ್ಲಿ ಸಾಗುವ ವಾಹನಗಳ ಮೇಲೂ ಕಲ್ಲು ತೂರವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ, ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಅಡ್ಯಾರ ಪದವು ಪರಿಸರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಲ್ಲೂ ತೂರಾಟ ಘಟನೆಯಲ್ಲಿ ಗಂಭೀರ ವಾಗಿ ಗಾಯಗೊಂಡ ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆಯ ಕುರಿತು ಪ್ರಕರಣ ದಾಖಲಿಸಲಾಗಿದೆ .

Stone pelting during BJP victory procession

ಘಟನೆಯಿಂದ ಗಂಭೀರ ಗಾಯಗೊಂಡ ಆಸ್ಪತ್ರೆ ಗೆ ದಾಖಲಾಗಿರುವ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಘಟನೆಯ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಗ್ರಹಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+