ಮಂಗಳೂರು: ಮಸೀದಿಗೆ ಕಲ್ಲು ತೂರಿದ ಕಿಡಿಗೇಡಿ ಸಿಕ್ಕಿಬಿದ್ದ!
ಮಸೀದಿಗೆ ಕಲ್ಲು ತೂರಿದ ಆರೋಪಿ ಸಾಗರ್ ಕಿಸೆಯಲ್ಲಿ ಗಾಂಜಾ ಮತ್ತು ಇನ್ನಿತರ ಮಾದಕ ವಸ್ತುಗಳು ದೊರೆತಿರುವುದಾಗಿ ಮಸೀದಿಗೆ ಸಂಬಂಧಪಟ್ಟವರು ತಿಳಿಸಿದ್ದಾರೆ.
ಮಂಗಳೂರು ಮಾರ್ಚ್ 18: ತೊಕ್ಕೊಟ್ಟು ರೈಲ್ವೇ ಹಳಿಯ ಸಮೀಪದ ಮಸ್ಜಿದುಲ್ ಹುದಾ ಮಸೀದಿಗೆ ಶುಕ್ರವಾರ ಮಧ್ಯರಾತ್ರಿ ಕಲ್ಲು ತೂರಿದ ಕಿಡಿಗೇಡಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ತೊಕ್ಕೊಟ್ಟು ಚೆಂಬುಗುಡ್ಡೆ ಭಟ್ನಗರ ನಿವಾಸಿ ಸಾಗರ್ (22)ಎಂಬವನೇ ಮಸೀದಿಗೆ ಕಲ್ಲು ತೂರಿದ ಆರೋಪಿ. ಶುಕ್ರವಾರ ಮಧ್ಯರಾತ್ರಿ ವೇಳೆ ಮಸೀದಿಗೆ ಕಲ್ಲು ಬಿದ್ದದನ್ನು ಗಮನಿಸಿದ ಖತೀಬರು ಗಾಬರಿಗೊಂಡು ರಸ್ತೆಯಲ್ಲಿ ಓಡಲಾರಂಭಿಸಿದ್ದಾರೆ. ಈ ವೇಳೆ ಅಂಗಡಿಗಳನ್ನು ಮುಚ್ಚಿ ಬರುತ್ತಿದ್ದ ವ್ಯಾಪಾರಿಗಳು ಖತೀಬರನ್ನು ವಿಚಾರಿಸಿದಾಗ ಮಸೀದಿಗೆ ಕಲ್ಲು ತೂರಿದ ಸಂಗತಿ ತಿಳಿದಿದೆ.[ಸ್ನಾನ ಮಾಡುವುದನ್ನು ಇಣುಕಿ ನೋಡಿ ಹಲ್ಲೆ ಮಾಡಿದ ಭೂಪ..!]

ಕೂಡಲೇ ಮಸೀದಿಯತ್ತ ಧಾವಿಸಿದ ಹುಡುಗರು ಅಲ್ಲಿ ಕಲ್ಲೆಸೆಯುತ್ತಿದ್ದನೆನ್ನಲಾದ ಸಾಗರನ್ನು ಬೆನ್ನತ್ತಿ ಹಿಡಿದು ನಾಲ್ಕು ತದುಕಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಕೂಡಲೇ ಸ್ಥಳಕ್ಕಾಗಮಿಸಿ ಆರೋಪಿ ಸಾಗರನ್ನು ಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.[ಹತ್ಯೆಗೆ ಸಂಚು: ನರೇಂದ್ರ ನಾಯಕ್ ಸೆಕ್ಯೂರಿಟಿ ಡಬಲ್]
ಆರೋಪಿ ಸಾಗರ್ ಕಿಸೆಯಲ್ಲಿ ಗಾಂಜಾ ಮತ್ತು ಇನ್ನಿತರ ಮಾದಕ ವಸ್ತುಗಳು ದೊರೆತಿರುವುದಾಗಿ ಮಸೀದಿಗೆ ಸಂಬಂಧಪಟ್ಟವರು ತಿಳಿಸಿದ್ದಾರೆ. ತೊಕ್ಕೊಟ್ಟು ಒಳಪೇಟೆಯಲ್ಲಿ ಗಾಂಜಾ ಹಾವಳಿ ಜಾಸ್ತಿಯಾಗಿದ್ದು ಇದರ ಪರಿಣಾಮ ಪದೇ ಪದೇ ಬೆಂಕಿ ಇಡುವುದು, ಕಲ್ಲು ತೂರುವ ಪ್ರಕರಣಗಳು ನಡೆಯುತ್ತಲೇ ಇವೆ.
ಘಟನೆಯಿಂದ ಉಳ್ಳಾಲ ಪೊಲೀಸ್ ಠಾಣಾ ಆವರಣದಲ್ಲಿ ಮಸೀದಿಗೆ ಸಂಬಂಧಿಸಿದ ಗುಂಪು ಜಮಾವಣೆಗೊಂಡಿದ್ದು ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.ಎಸಿಪಿ ಶೃತಿ ಅವರು ಮಸೀದಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications