ಮಂಗಳೂರು: ದೇವಸ್ಥಾನಗಳಲ್ಲಿ ಸಲಾಂ ಪೂಜೆ ನಿಲ್ಲಿಸಿ, ಧಾರ್ಮಿಕ ಷರಿಷತ್ ಆದೇಶ
ಮಂಗಳೂರು, ಡಿಸೆಂಬರ್, 09: ದೇವಸ್ಥಾನಗಳಲ್ಲಿ ನಡೆಯುತ್ತಿದ್ದ ಟಿಪ್ಪುವಿನ ಕಾಲದ ದೀವಟಿಗೆ ಸಲಾಂಗೆ ಇತೀಶ್ರೀ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯ ಧಾರ್ಮಿಕ ಪರಿಷತ್ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ರಾಜ್ಯದ ಯಾವುದೇ ದೇವಸ್ಥಾನಗಳಲ್ಲಿ ದೀವಿಟಿಗೆ ಪೂಜೆ ಅಥವಾ ಸಲಾಂ ಪೂಜೆಯನ್ನು ಮಾಡಬಾರದು ಎಂದು ಧಾರ್ಮಿಕ ಷರಿಷತ್ ಆದೇಶ ಹೊರಡಿಸಿದೆ.
ಟಿಪ್ಪು ಕಾಲದಲ್ಲಿ ಆರಂಭಗೊಂಡಿದ್ದ ದೀವಿಟಿಗೆ ಅಥವಾ ಸಲಾಂ ಪೂಜೆ ರಾಜ್ಯದ ಕೆಲ ಎಲ್ಲಾ ಪ್ರಸಿದ್ಧ ದೇವಾಲಯಗಳಲ್ಲಿ ನಡೆಯುತ್ತಿದೆ. ದೇವಸ್ಥಾನದಲ್ಲಿ ಸಂಜೆ ಸಮಯದಲ್ಲಿ ದೀವಿಟಿಗೆ ಪೂಜೆ ನಡೆಯುತ್ತಿತ್ತು. ಆದರೆ ಇನ್ಮುಂದೆ ದೇವಸ್ಥಾನಗಳಲ್ಲಿ ದೀವಟಿಕೆ ಸಲಾಂ ಪೂಜೆ ನಡೆಯುವುದಿಲ್ಲ ಅಂತಾ ಧಾರ್ಮಿಕ ಪರಿಷತ್ ಹೇಳಿದೆ.
ಸಲಾಂ ಪೂಜೆ ನಿಲ್ಲಿಸಲು ಸೂಚನೆ
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಪುತ್ತೂರು ಮಹಾಲಿಂಗೇಶ್ವರ ಮೊದಲಾದ ದೇವಸ್ಥಾನಗಳಲ್ಲಿ ಇಂದಿಗೂ ಸಲಾಂ ಪೂಜೆ ಪದ್ಧತಿ ನಡೆದುಕೊಂಡು ಬರುತ್ತಿದೆ. ಆದರೆ ಇನ್ಮುಂದೆ ಈ ದೀವಟಿಕೆ ಸಲಾಂ ಪೂಜೆ ನಡೆಸದಂತೆ ಧಾರ್ಮಿಕ ಪರಿಷತ್ನಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಸಂಜೆ ಸಮಯದಲ್ಲಿ ದೀಪ ನಮಸ್ಕಾರ ಪೂಜೆ ನೆರವೇರಿಸಲು ದೇವಸ್ಥಾನಗಳಿಗೆ ಸೂಚಿಸಲಾಗಿದೆ. ರಾಜ್ಯವನ್ನಾಳುವ ರಾಜ, ಮಂತ್ರಿ ಮತ್ತು ಪ್ರಜೆಗಳ ಒಳಿತಿಗಾಗಿ ದೀಪ ನಮಸ್ಕಾರ ಪೂಜೆ ನಡೆಯಬೇಕು ಎಂದು ಧಾರ್ಮಿಕ ಪರಿಷತ್ ದೇವಸ್ಥಾನಗಳಿಗೆ ಸೂಚನೆ ನೀಡಿದೆ.

ಸೂರ್ಯನಾರಾಯಣ ಭಟ್ ಹೇಳಿದ್ದೇನು?
ಅಲ್ಲದೇ ಮುಜರಾಯಿ ಇಲಾಖೆ ಎನ್ನುವ ಹೆಸರನ್ನೂ ರಾಜ್ಯ ಧಾರ್ಮಿಕ ಪರಿಷತ್ ಬದಲಾಯಿಸಿದ್ದು, ಇದನ್ನು ಇದೀಗ ಧರ್ಮಾದಾಯ ದತ್ತಿ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ, "ದೀವಿಟಿಗೆ ಅಥವಾ ಸಲಾಂ ಪೂಜೆ ಅನ್ನುವುದು ನಮ್ಮ ಆಚರಣೆಯಲ್ಲಿ ಬರುವುದಿಲ್ಲ. ಸಲಾಂ ಅನ್ನುವುದು ನಮ್ಮ ಭಾಷೆಯಲ್ಲ. ಹೀಗಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ದೀವಿಟಿಗೆ ಪೂಜೆ ಅಥವಾ ಸಲಾಂ ಪೂಜೆಯನ್ನು ನಿಲ್ಲಿಸುವುದಾಗಿ," ಹೇಳಿದ್ದಾರೆ. ಇನ್ಮುಂದೆ ಧಾರ್ಮಿಕ ಪರಿಷತ್ ಅನ್ನು ಮುಜರಾಯಿ ಇಲಾಖೆ ಅಂತಾ ಯಾರೂ ಕರೆಯಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications