ಮಂಗಳೂರು: ದೇವಸ್ಥಾನಗಳಲ್ಲಿ ಸಲಾಂ ಪೂಜೆ ನಿಲ್ಲಿಸಿ, ಧಾರ್ಮಿಕ ಷರಿಷತ್ ಆದೇಶ
ಮಂಗಳೂರು, ಡಿಸೆಂಬರ್, 09: ದೇವಸ್ಥಾನಗಳಲ್ಲಿ ನಡೆಯುತ್ತಿದ್ದ ಟಿಪ್ಪುವಿನ ಕಾಲದ ದೀವಟಿಗೆ ಸಲಾಂಗೆ ಇತೀಶ್ರೀ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯ ಧಾರ್ಮಿಕ ಪರಿಷತ್ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ರಾಜ್ಯದ ಯಾವುದೇ ದೇವಸ್ಥಾನಗಳಲ್ಲಿ ದೀವಿಟಿಗೆ ಪೂಜೆ ಅಥವಾ ಸಲಾಂ ಪೂಜೆಯನ್ನು ಮಾಡಬಾರದು ಎಂದು ಧಾರ್ಮಿಕ ಷರಿಷತ್ ಆದೇಶ ಹೊರಡಿಸಿದೆ.
ಟಿಪ್ಪು ಕಾಲದಲ್ಲಿ ಆರಂಭಗೊಂಡಿದ್ದ ದೀವಿಟಿಗೆ ಅಥವಾ ಸಲಾಂ ಪೂಜೆ ರಾಜ್ಯದ ಕೆಲ ಎಲ್ಲಾ ಪ್ರಸಿದ್ಧ ದೇವಾಲಯಗಳಲ್ಲಿ ನಡೆಯುತ್ತಿದೆ. ದೇವಸ್ಥಾನದಲ್ಲಿ ಸಂಜೆ ಸಮಯದಲ್ಲಿ ದೀವಿಟಿಗೆ ಪೂಜೆ ನಡೆಯುತ್ತಿತ್ತು. ಆದರೆ ಇನ್ಮುಂದೆ ದೇವಸ್ಥಾನಗಳಲ್ಲಿ ದೀವಟಿಕೆ ಸಲಾಂ ಪೂಜೆ ನಡೆಯುವುದಿಲ್ಲ ಅಂತಾ ಧಾರ್ಮಿಕ ಪರಿಷತ್ ಹೇಳಿದೆ.
ಸಲಾಂ ಪೂಜೆ ನಿಲ್ಲಿಸಲು ಸೂಚನೆ
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಪುತ್ತೂರು ಮಹಾಲಿಂಗೇಶ್ವರ ಮೊದಲಾದ ದೇವಸ್ಥಾನಗಳಲ್ಲಿ ಇಂದಿಗೂ ಸಲಾಂ ಪೂಜೆ ಪದ್ಧತಿ ನಡೆದುಕೊಂಡು ಬರುತ್ತಿದೆ. ಆದರೆ ಇನ್ಮುಂದೆ ಈ ದೀವಟಿಕೆ ಸಲಾಂ ಪೂಜೆ ನಡೆಸದಂತೆ ಧಾರ್ಮಿಕ ಪರಿಷತ್ನಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಸಂಜೆ ಸಮಯದಲ್ಲಿ ದೀಪ ನಮಸ್ಕಾರ ಪೂಜೆ ನೆರವೇರಿಸಲು ದೇವಸ್ಥಾನಗಳಿಗೆ ಸೂಚಿಸಲಾಗಿದೆ. ರಾಜ್ಯವನ್ನಾಳುವ ರಾಜ, ಮಂತ್ರಿ ಮತ್ತು ಪ್ರಜೆಗಳ ಒಳಿತಿಗಾಗಿ ದೀಪ ನಮಸ್ಕಾರ ಪೂಜೆ ನಡೆಯಬೇಕು ಎಂದು ಧಾರ್ಮಿಕ ಪರಿಷತ್ ದೇವಸ್ಥಾನಗಳಿಗೆ ಸೂಚನೆ ನೀಡಿದೆ.

ಸೂರ್ಯನಾರಾಯಣ ಭಟ್ ಹೇಳಿದ್ದೇನು?
ಅಲ್ಲದೇ ಮುಜರಾಯಿ ಇಲಾಖೆ ಎನ್ನುವ ಹೆಸರನ್ನೂ ರಾಜ್ಯ ಧಾರ್ಮಿಕ ಪರಿಷತ್ ಬದಲಾಯಿಸಿದ್ದು, ಇದನ್ನು ಇದೀಗ ಧರ್ಮಾದಾಯ ದತ್ತಿ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಮಾತನಾಡಿ, "ದೀವಿಟಿಗೆ ಅಥವಾ ಸಲಾಂ ಪೂಜೆ ಅನ್ನುವುದು ನಮ್ಮ ಆಚರಣೆಯಲ್ಲಿ ಬರುವುದಿಲ್ಲ. ಸಲಾಂ ಅನ್ನುವುದು ನಮ್ಮ ಭಾಷೆಯಲ್ಲ. ಹೀಗಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ದೀವಿಟಿಗೆ ಪೂಜೆ ಅಥವಾ ಸಲಾಂ ಪೂಜೆಯನ್ನು ನಿಲ್ಲಿಸುವುದಾಗಿ," ಹೇಳಿದ್ದಾರೆ. ಇನ್ಮುಂದೆ ಧಾರ್ಮಿಕ ಪರಿಷತ್ ಅನ್ನು ಮುಜರಾಯಿ ಇಲಾಖೆ ಅಂತಾ ಯಾರೂ ಕರೆಯಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications