'ಗೋ ಕಳ್ಳರ ವಿರುದ್ಧ ರೌಡಿ ಶೀಟರ್ ಕೇಸು ದಾಖಲಿಸಿ ಗಡಿಪಾರು ಮಾಡಿ'
ಮಂಗಳೂರು ಜೂನ್ 24: ಗೋ ಕಳ್ಳರ ವಿರುದ್ಧ ರೌಡಿ ಶೀಟರ್ ಕೇಸು ದಾಖಲಿಸಿ ಗಡಿಪಾರು ಮಾಡಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರನ್ನು ಒತ್ತಾಯಿಸಿದ್ದಾರೆ.
ಸೋಮವಾರ ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿದ ಡಾ ಭರತ್ ಶೆಟ್ಟಿ ಗೋಗಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋಕಳ್ಳತನ ಇಂದು ಬಂಡವಾಳ ಇಲ್ಲದೆ ಹಣಗಳಿಸಲು ಸುಲಭ ದಾರಿಯಂತೆ ಆಗಿದ್ದು ಕಳ್ಳರು ಯಾವುದೇ ಭಯವಿಲ್ಲದೆ ಮಾರಕಾಯುಧಗಳನ್ನು ತೋರಿಸಿ ಹಟ್ಟಿಯಿಂದ ಗೋವನ್ನು ಕದಿಯುತ್ತಿರುವುದು ಕಳವಳಕಾರಿ ವಿಚಾರ ಎಂದು ಹೇಳಿದರು .
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಮನೆಯೊಂದರಿಂದ ದನ ಕಳ್ಳತನ ಘಟನೆ ನಡೆದಿರುವುದು ನೋವನ್ನುಂಟು ಮಾಡಿದೆ. ಹೈನುಗಾರಿಕೆ ನಂಬಿ ಜೀವನ ನಡೆಸುವವರು ಇದರಿಂದ ನಷ್ಟಕ್ಕೊಳಗಾಗುತ್ತಿದ್ದಾರೆ.

ಸಾಲ ಮಾಡಿ ಉತ್ತಮ ತಳಿಯ ದನ ಖರೀದಿಸಿ ಸ್ವಾವಲಂಬಿ ಜೀವನ ನಡೆಸಲು ಗೋಕಳ್ಳರಿಂದ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗದಂತೆ ಪೊಲೀಸ್ ಇಲಾಖೆ ತಡೆದು ರೈತರಿಗೆ ,ಹೈನುಗಾರರಿಗೆ ಭದ್ರತೆಯ ಭರವಸೆ ನೀಡಬೇಕಿದೆ ಎಂದು ಹೇಳಿದರು.
ಗೋ ಕಳ್ಳತನದಿಂದ ಒಂದಡೆ ಇದನ್ನೇ ನಂಬಿದವರಿಗೆ ನಷ್ಟವಾಗುತ್ತಿದ್ದರೆ,ಇನ್ನೊಂದೆಡೆ ಧಾರ್ಮಿಕವಾಗಿ ಆರಾಧಿಸುತ್ತಾ ಬರುತ್ತಿರುವ ಹಿಂದೂ ಸಮುದಾಯದ ಭಾವನೆಗೂ ಘಾಸಿಯಾಗುತ್ತಿದೆ.
ಮಂಗಳೂರು ಸಹಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕಾರ್ಯಾಚರಣೆ ನಡೆಸುವ ಮೂಲಕ ದನಕಳ್ಳರನ್ನು ಮಟ್ಟ ಹಾಕಬೇಕು ಎಂದು ಅವರು ಒತ್ತಾಯಿಸಿದರು.
ಗೋ ಕಳ್ಳತನಕ್ಕೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ಗೋ ಕಳ್ಳರು ಹಾಗೂ ಅವರಿಗೆ ಬೆಂಬಲ ನೀಡುವವರ ವಿರುದ್ಧ ರೌಡಿ ಶೀಟರ್ ಕೇಸ್ ದಾಖಲಿಸಿ ಗಡಿಪಾರು ಮಾಡಬೇಕು. ಪ್ರಮುಖ ಸಂಚಾರ ಕೇಂದ್ರಗಳಲ್ಲಿ ಗುಣಮಟ್ಟದ ಸಿ ಸಿ ಕ್ಯಾಮರಾ ಅಳವಡಿಸಿ ಗೋ ಕಳ್ಳರ ಚಲನವಲನಗಳ ಮೇಲೆ ನಿಗಾ ಇಡಬೇಕು ಎಂದು ಅವರು ಆಗ್ರಹಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications