ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ, ಕಠಿಣ ಕ್ರಮಕ್ಕೆ ಡಿವೈಎಫ್ಐ ಆಗ್ರಹ
ಮಂಗಳೂರು ಜುಲೈ 4: ಪುತ್ತೂರು ಕಾಲೇಜು ವಿದ್ಯಾರ್ಥಿನಿಗೆ ಅಮಲು ಬರಿಸಿ ಸಹಪಾಠಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರರಣ ಆಘಾತಕಾರಿಯಾಗಿದ್ದು, ಈ ಘಟನೆಯಿಂದ ಜಿಲ್ಲೆಯ ಜನತೆ ದಿಗ್ಭ್ರಾಂತರಾಗಿದ್ದಾರೆ. ಈ ನಾಚಿಕೆಗೇಡಿನ ಕೃತ್ಯದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ.
ಈ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಸಹಿತ ಬಿಜೆಪಿ ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತು ಅನಗತ್ಯ ಕೋಮು ಪ್ರಚೋದನೆಯ ವಿಷಯಗಳನ್ನು ಹುಟ್ಟು ಹಾಕುವುದನ್ನು ಬಿಟ್ಟು ಡ್ರಗ್ಸ್ ಮಾಫಿಯಾ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ಮಟ್ಟ ಹಾಕುವತ್ತ ಗಮನ ಹರಿಸಬೇಕು ಎಂದರು.
ಶೈಕ್ಷಣಿಕವಾಗಿ ಮೇಲುಸ್ತರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಅತ್ಯಾಚಾರ, ಲೈಂಗಿಕ ಕಿರುಕುಳ, ಮಹಿಳೆಯರ ಮೇಲಿನ ದಾಳಿಯಂತಹ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಅದರಲ್ಲೂ ವಿದ್ಯಾರ್ಥಿ ಸಮೂಹ ಇಂತಹ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಪುತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ವಿದ್ಯಾರ್ಥಿನಿಗೆ ಮತ್ತು ಬರುವ ಪದಾರ್ಥ ನೀಡಲಾಗಿತ್ತು. ಆರೋಪಿ ವಿದ್ಯಾರ್ಥಿಗಳೂ ಗಾಂಜಾ ಸೇವಿಸಿದ್ದರು ಎಂಬುದು ತಿಳಿದುಬಂದಿದ್ದು, ಇದು ಡ್ರಗ್ಸ್ ಜಾಲ ಇಡೀ ಸಮಾಜವನ್ನು ಆವರಿಸಿರುವ ಸಂಕೇತವಾಗಿದೆ. ಒಂದೆಡೆ ಡ್ರಗ್ಸ್ ಮಾಫಿಯಾ, ಮತ್ತೊಂದೆಡೆ ಶೈಕ್ಷಣಿಕ ಸಂಸ್ಥೆಗಳು ಶಿಕ್ಷಣವನ್ನು ವ್ಯಾಪಾರದ ಸರಕನ್ನಾಗಿಸಿ ನೈತಿಕ ಮೌಲ್ಯಗಳನ್ನು ಕಡೆಗಣಿಸಿರುವುದು ವಿದ್ಯಾರ್ಥಿ ಸಮೂಹವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಡ್ರಗ್ಸ್ ಮಾಫಿಯಾ ಜಾಲದ ಕುರಿತು ಜನಪರ ಸಂಘಟನೆಗಳು ಸತತವಾಗಿ ಧ್ವನಿ ಎತ್ತುತ್ತಾ ಬಂದಿದ್ದರೂ ಪೊಲೀಸ್ ಇಲಾಖೆ ಇಂತಹ ಮಾಫಿಯಾಗಳನ್ನು ಹತ್ತಿಕ್ಕುವಲ್ಲಿ ವಿಫಲವಾಗಿದೆ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿ ಯುವಜನರಿಗೆ ಗಾಂಜಾದಂತಹ ಮಾದಕ ವಸ್ತುಗಳು ಬಹಳ ಸುಲಭವಾಗಿ ದೊರಕುತ್ತಿದ್ದು, ಇದರ ಪರಿಣಾಮ ಕ್ರಿಮಿನಲ್ ಚಟುವಟಿಕೆಗಳು, ಅತ್ಯಾಚಾರ, ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿವೆ. ಇದು ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಪುತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರವಾದರೂ ಜನಪ್ರತಿನಿಧಿಗಳು, ಸರ್ಕಾರ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications