ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ: ಆರೋಪಿಗಳ ಪರ ವಾದಿಸದಂತೆ ಮನವಿ
ಮಂಗಳೂರು, ನವೆಂಬರ್. 28: ಮಂಗಳೂರಿನ ತೋಟ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ .
ತೋಟ ಬೆಂಗ್ರೆ ಬೀಚ್ ನಲ್ಲಿ ಸುತ್ತಾಡಲು ಗೆಳೆಯನೊಂದಿಗೆ ಬಂದಿದ್ದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿಗಳ ಪರ ವಕಾಲತ್ತು ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಸದಸ್ಯರು ಇಂದು ಮಂಗಳೂರಿನ ನ್ಯಾಯಾಲಯ ಆವರಣಕ್ಕೆ ತೆರಳಿ ಸಾಮೂಹಿಕ ಅತ್ಯಾಚಾರದ ಪ್ರಕರಣದ ಆರೋಪಿಗಳ ಪರ ವಕಾಲತ್ತು ನಡೆಸದಂತೆ ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿದೆ.

ಈ ಅತ್ಯಾಚಾರ ಪ್ರಕರಣ ನಾಡಿಗೆ ಕಳಂಕ ತಂದಿದೆ . ಜಿಲ್ಲೆಯ ಜನರು ತಲೆ ತಗ್ಗಿಸುವಂತೆ ಮಾಡಿದೆ. ಸಮಾಜಕ್ಕೆ ಮಾರಕವಾಗಿರುವ ಇಂತಹ ಆರೋಪಿಗಳ ಪರ ವಾದಿಸದೆ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲು ಸಹಕರಿಸಬೇಕು. ಆರೋಪಿಗಳ ಪರ ವಾದಿಸದಂತೆ ವಕೀಲರಿಗೆ ಸಂಘ ಸೂಚಿಸಬೇಕು ಎಂದು ಒತ್ತಾಯಿಸಿದೆ.
ಆರೋಪಿಗಳ ಪರ ಯಾರಾದರೂ ವಕೀಲರು ವಕಾಲತ್ತು ನಡೆಸಿದರೆ ಅವರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಸರ್ವಕಾಲೇಜು ವಿದ್ಯಾರ್ಥಿ ಸಂಘ ಎಚ್ಚರಿಸಿದೆ
ಮನವಿ ಸಲ್ಲಿಸಿದ ಸರ್ವಕಾಲೇಜು ವಿದ್ಯಾರ್ಥಿ ಸಂಘದ ನಿಯೋಗದಲ್ಲಿ ಪದಾಧಿಕಾರಿಗಳಾದ ಗುರುದತ್ ಮಲ್ಲಿ, ಇಬ್ರಾಹೀಂ ಬಾತೀಶ್, ಆ್ಯಸ್ಟಲ್ ಲೋಬೊ,ಅಶ್ವಿತ್ ಅಡಪ, ಅನ್ವಿತಾ ಶೆಟ್ಟಿ, ಪ್ರಿಯಾಂಕಾ ಶೆಟ್ಟಿ, ಶೈನಿ, ಮೇಘಾ, ನಿಹಾಲ್ ರೈ,ಸೋಹನ್ ಕಾರಂತ್, ಮಜೀದ್ ಕೊರೆಪಾಡಿ, ಸುಲೈಮಾನ್ ಶಾಫಿ, ಅಶ್ಫಾಕ್ ಮತ್ತಿತರರು ಉಪಸ್ಥಿತರಿದ್ದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications