ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ: ಆರೋಪಿಗಳ ಪರ ವಾದಿಸದಂತೆ ಮನವಿ
ಮಂಗಳೂರು, ನವೆಂಬರ್. 28: ಮಂಗಳೂರಿನ ತೋಟ ಬೆಂಗ್ರೆ ಬೀಚ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ .
ತೋಟ ಬೆಂಗ್ರೆ ಬೀಚ್ ನಲ್ಲಿ ಸುತ್ತಾಡಲು ಗೆಳೆಯನೊಂದಿಗೆ ಬಂದಿದ್ದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿಗಳ ಪರ ವಕಾಲತ್ತು ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಸದಸ್ಯರು ಇಂದು ಮಂಗಳೂರಿನ ನ್ಯಾಯಾಲಯ ಆವರಣಕ್ಕೆ ತೆರಳಿ ಸಾಮೂಹಿಕ ಅತ್ಯಾಚಾರದ ಪ್ರಕರಣದ ಆರೋಪಿಗಳ ಪರ ವಕಾಲತ್ತು ನಡೆಸದಂತೆ ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿದೆ.

ಈ ಅತ್ಯಾಚಾರ ಪ್ರಕರಣ ನಾಡಿಗೆ ಕಳಂಕ ತಂದಿದೆ . ಜಿಲ್ಲೆಯ ಜನರು ತಲೆ ತಗ್ಗಿಸುವಂತೆ ಮಾಡಿದೆ. ಸಮಾಜಕ್ಕೆ ಮಾರಕವಾಗಿರುವ ಇಂತಹ ಆರೋಪಿಗಳ ಪರ ವಾದಿಸದೆ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲು ಸಹಕರಿಸಬೇಕು. ಆರೋಪಿಗಳ ಪರ ವಾದಿಸದಂತೆ ವಕೀಲರಿಗೆ ಸಂಘ ಸೂಚಿಸಬೇಕು ಎಂದು ಒತ್ತಾಯಿಸಿದೆ.
ಆರೋಪಿಗಳ ಪರ ಯಾರಾದರೂ ವಕೀಲರು ವಕಾಲತ್ತು ನಡೆಸಿದರೆ ಅವರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಸರ್ವಕಾಲೇಜು ವಿದ್ಯಾರ್ಥಿ ಸಂಘ ಎಚ್ಚರಿಸಿದೆ
ಮನವಿ ಸಲ್ಲಿಸಿದ ಸರ್ವಕಾಲೇಜು ವಿದ್ಯಾರ್ಥಿ ಸಂಘದ ನಿಯೋಗದಲ್ಲಿ ಪದಾಧಿಕಾರಿಗಳಾದ ಗುರುದತ್ ಮಲ್ಲಿ, ಇಬ್ರಾಹೀಂ ಬಾತೀಶ್, ಆ್ಯಸ್ಟಲ್ ಲೋಬೊ,ಅಶ್ವಿತ್ ಅಡಪ, ಅನ್ವಿತಾ ಶೆಟ್ಟಿ, ಪ್ರಿಯಾಂಕಾ ಶೆಟ್ಟಿ, ಶೈನಿ, ಮೇಘಾ, ನಿಹಾಲ್ ರೈ,ಸೋಹನ್ ಕಾರಂತ್, ಮಜೀದ್ ಕೊರೆಪಾಡಿ, ಸುಲೈಮಾನ್ ಶಾಫಿ, ಅಶ್ಫಾಕ್ ಮತ್ತಿತರರು ಉಪಸ್ಥಿತರಿದ್ದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications