ಅಧ್ಯಾಪಕರಿಲ್ಲದ ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳೇ ಟೀಚರ್ಸ್
ಮಂಜೇಶ್ವರ, ಡಿ.15:ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಆಶ್ರಯದಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳು ಅಧ್ಯಾಪಕರ ಕೊರತೆಯಿಂದ ಬಳಲುವಂತಾಗಿದೆ. ಸ್ವತಃ ವಿದ್ಯಾರ್ಥಿಗಳೇ ಅಧ್ಯಾಪಕರ ಪಾತ್ರ ನಿರ್ವಹಿಸುತ್ತಿರುವುದು ಕಡಂಬಾರ್ ಸರಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ನಡೆಯುತ್ತಾ ಇರುವುದು ತಡವಾಗಿ ಬೆಳಕಿಗೆ ಬಂದಿದೆ.
ಈ ಶಾಲೆಯಲ್ಲಿ ಎಂಟರಿಂದ ಹತ್ತನೇ ತರಗತಿ ತನಕ ಕೇಂದ್ರ ಸರಕಾರದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನದ ಪದ್ದತಿಯಂತೆ ವಿದ್ಯಾಭ್ಯಾಸವನ್ನು ನೀಡಲಾಗುತ್ತದೆ. ಆದರೆ ಈ ತರಗತಿಗಳಿಗೆ ಬೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ ಹಾಗೂ ಗಣಿತ ವಿಷಯಗಳಿಗೆ ಅಧ್ಯಾಪಕರ ಕೊರತೆ ಇರುವುದರಿಂದ ಈ ತರಗತಿಯ ವಿದ್ಯಾರ್ಥಿಗಳಿಗೆ ಸಹಪಾಠಿಗಳೇ ಅಧ್ಯಾಪಕರಾಗಿ ಕಲಿಸುವ ದೃಶ್ಯ ಕಂಡು ಬಂದಿದೆ.
ವಿದ್ಯೆಯಿಂದ ವಂಚಿತರಾಗುತ್ತಿದ್ದಾರೆ: ಕಳೆದ ಆರು ತಿಂಗಳಿನಿಂದ ಇಲ್ಲಿ ವಿದ್ಯಾರ್ಥಿಗಳೇ ಅಧ್ಯಾಪಕರಾಗಿದ್ದಾರೆ. 2011 ರಲ್ಲಿ ಇಲ್ಲಿ ಪ್ರೌಢ ಶಾಲೆಯನ್ನು ಅರಂಭಿಸಲಾಗಿದೆ. ಇಲ್ಲಿ 243 ವಿದ್ಯಾರ್ಥಿಗಳಿದ್ದು, ಅದರಲ್ಲಿ ಮಲಯಾಳ ಮಾಧ್ಯಮದಲ್ಲಿ 62 ಹಾಗೂ ಕನ್ನಡ ಮಾದ್ಯಮದಲ್ಲಿ 181 ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದಾರೆ. ಕೇಂದ್ರ ಸರಕಾರದ ಆರ್ ಎಂ ಎಸ್ ಎ ಪದ್ದತಿಯಲ್ಲಿ ಒಂದೇ ಮಾಧ್ಯಮದ ವಿದ್ಯಾರ್ಥಿಗಳನ್ನು ಮಾತ್ರ ಕಲಿಸ ಬಹುದಾಗಿದೆ.

ಅದರೆ ವರ್ಕಾಡಿ ಹಾಗೂ ಮೀಂಜ ಗ್ರಾ. ಪಂ. ನ ವ್ಯಾಪ್ತಿಯಲ್ಲಿರುವ ಕಡಂಬಾರು ಶಾಲೆಯಲ್ಲಿ ಕನ್ನಡ ಹಾಗೂ ಮಲಯಾಳಂ ವಿದ್ಯಾರ್ಥಿಗಳಿರುವ ಕಾರಣ ಕಿರಿಯ ಪ್ರಾಥಮಿಕ ಶಾಲೆಯಿಂದ ಕಲಿತ ವಿದ್ಯಾರ್ಥಿಗಳು ಮುಂದಿನ ವಿದ್ಯಾಬ್ಯಾಸಕ್ಕಾಗಿ ಇದೇ ಶಾಲೆಯನ್ನೇ ಅವಲಂಭಿಸಬೇಕಾಗಿದೆ. ಈ ಶಾಲೆಯಲ್ಲಿ ಅಧ್ಯಾಪಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗುತ್ತಿದ್ದಾರೆ.
ಪ್ರತಿಭಟನೆಗೆ ಬೆಲೆಯಿಲ್ಲ: ಈ ಬಗ್ಗೆ ಮಕ್ಕಳ ರಕ್ಷಕರು ಹಾಗೂ ಅಧ್ಯಾಪಕರು ಸೇರಿ ಹಲವು ಸಲ ಪ್ರತಿಭಟನೆಗಳನ್ನು ನಡೆಸಿ ಅಧಿಕೃತರ ಗಮನಕ್ಕೆ ತಂದಿದ್ದರೂ ಯಾವುದೇ ಫಲ ಕಾಣಲಿಲ್ಲ. ಕಳೆದ ಎರಡು ವರ್ಷಗಳಿಂದ ಈ ಶಾಲೆಯಲ್ಲಿ ಅಧ್ಯಾಪಕರ ಕೊರತೆ ಇದೆ.

ಹಿಂದಿ, ಮಲಯಾಳಂ ಹಾಗೂ ಕನ್ನಡ ಭಾಷಾ ಅಧ್ಯಾಪಕರುಗಳಾಗಿ ಕೇವಲ ಮೂರು ಅಧ್ಯಾಪಕರುಗಳು ಮಾತ್ರ ಇದ್ದಾರೆ. ಆದೇ ರೀತಿ ಸಮಾಜ ವಿಜ್ಞಾನ,ಗಣಿತ, ಬೌತ ಶಾಸ್ತ್ರ, ಜೀವ ಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ವಿಭಾಗಕ್ಕೂ ಮೂರೇ ಅಧ್ಯಾಪಕರುಗಳಿದ್ದಾರೆ. ಇಲ್ಲಿ ಇನ್ನು ನಾಲ್ಕು ಅಧ್ಯಾಪಕರುಗಳು ಬಂದರೆ ವಿದ್ಯಾಬ್ಯಾಸಕ್ಕೆ ಮಕ್ಕಳಿಗೆ ಸಮಸ್ಯೆ ಇರಲಿಕ್ಕಿಲ್ಲವೆಂಬುದು ಇಲ್ಲಿಯ ಮುಖ್ಯೋಪಧ್ಯಾಯರ ಹೇಳಿಕೆ.
ಹತ್ತನೇ ತರಗತಿಯಲ್ಲಿರುವ ಮಕ್ಕಳು ಅದ್ಯಾಪಕರ ಕೊರತೆಯಿಂದ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಶಾಲೆಯ ಮಕ್ಕಳು ಈ ಸಲದ ಉಪ ಜಿಲ್ಲಾ ಮಟ್ಟದ ವಿಜ್ಞಾನ ಮೇಳದಲ್ಲೂ ಚಾಂಪಿಯನ್ ಗಳಾಗಿದ್ದಾರೆ. ಕಲಿಕೆ ಸಹಿತ ಎಲ್ಲಾ ಚಟುವಟಿಕೆಗಳಲ್ಲೂ ಉತ್ತಮ ಆಸಕ್ತಿ ಇರುವ ಈ ಶಾಲೆಯ ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ಇತ್ತ ಕಡೆ ಗಮನ ಹರಿಸಲು ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications