ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವದೊಂದಿಗೆ ಚಂಪಾಷಷ್ಠಿ ಮುಕ್ತಾಯ
ಮಂಗಳೂರು, ನವೆಂಬರ್ 24 : ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವ ದೊಂದಿಗೆ ಸಂಪನ್ನಗೊಂಡಿತು. ಧನುರ್ ಲಗ್ನದಲ್ಲಿ ಇಂದು ಮುಂಜಾನೆ 8.37 ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ಮೂಲಕ ದೇವರ ದರ್ಶನ ಪಡೆದು ಕೃತಾರ್ಥರಾದರು.
ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ.ಚೌತಿ,ಪಂಚಮಿ ಹಾಗೂ ಷಷ್ಠಿ ಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡೆಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವವೂ ನಡೆಯುತ್ತದೆ.

ಇಲ್ಲಿ ನಡೆಯುವ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ವಿಶಿಷ್ಟ ಮಹತ್ವವೂ ಇದೆ. ರಾಜ್ಯದ ಅತ್ಯಂತ ದೊಡ್ಡ ರಥಗಳಲ್ಲಿ ಸುಬ್ರಹ್ಮಣ್ಯ ರಥವೂ ಒಂದಾಗಿದೆ. ಚಂಪಾ ಷಷ್ಠಿಯ ದಿನದಂದು ಈ ರಥೋತ್ಸವ ನಡೆಯುತ್ತಿದ್ದು, ಈ ಬಾರಿ ಧನುರ್ ಲಗ್ನದ 8.37 ರ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಿತು.
ದೇವಸ್ಥಾನದ ಪ್ರಾಂಗಣದಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಬಳಿಕ ಮೊದಲಿಗೆ ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರ ರಥೋತ್ಸವ ನಡೆದರೆ, ಬಳಿಕ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತದೆ.ರಥೋತ್ಸವ ನಡೆಯುವ ಸಂದರ್ಭದಲ್ಲಿ ಭಕ್ತಾಧಿಗಳು ರಥದ ಮೇಲೆ ಹೆಸರು ಕಾಳು, ಸಾಸಿವೆ ಕಾಳು ಮೊದಲಾದ ಪದಾರ್ಥಗಳನ್ನು ಎಸೆಯುವ ಮೂಲಕ ತಮ್ಮ ಹರಕೆಯನ್ನು ತೀರಿಸುವ ಸಂಪ್ರದಾಯವೂ ಇಲ್ಲಿಯದ್ದಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುವ ಈ ಜಾತ್ರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ದೇಶ ಹಾಗೂ ವಿದೇಶಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ. ಮೊದಲ ಬಾರಿಗೆ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವ ನೋಡಿದ ಭಕ್ತಾಧಿಗಳಿಗೆ ಜೀವನದಲ್ಲಿ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾದ ಅನುಭವವನ್ನೂ ಪಡೆದರು.

ರಥವನ್ನು ಇಲ್ಲಿ ಹಗ್ಗದ ಬದಲು ಬಿದಿರಿನಿಂದಲೇ ಎಳೆಯಲಾಗುತ್ತದೆ. ಹೀಗೆ ಎಳೆದ ಬಿದಿರನ್ನು ರಥೋತ್ಸವದ ಬಳಿಕ ಭಕ್ತಾಧಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗುತ್ತದೆ. ಈ ಬಿದಿರನ್ನು ಮನೆಯಲ್ಲಿ ಇರಿಸಿದಲ್ಲಿ ನಾಗದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications